ಮುರ್ಶಿದಾಬಾದ್ ಗಲಭೆ | ಸುಳ್ಳು ಹರಡುತ್ತಿರುವ ಗೋದಿ ಮೀಡಿಯಾಗಳು: ಮಮತಾ ಬ್ಯಾನರ್ಜಿ

Date:

Advertisements

ಮುರ್ಶಿದಾಬಾದ್‌ ಗಲಭೆಯು ಪೂರ್ವಯೋಜಿತ, ಈ ಬಗ್ಗೆ ಗೋದಿ ಮೀಡಿಯಾಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಮಾಮ್‌ಗಳೊಂದಿಗಿನ ತನ್ನ ಸಭೆಯಲ್ಲಿ ಹೇಳಿದ್ದಾರೆ. ಜೊತೆಗೆ ಈ ಸಂದರ್ಭದಲ್ಲೇ ಈ ಗಲಭೆಯಲ್ಲಿ ಟಿಎಂಸಿ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೂ ಪ್ರತಿಕ್ರಿಯಿಸಿದ್ದಾರೆ.

“ಮುರ್ಶಿದಾಬಾದ್ ಗಲಭೆಯು ಪೂರ್ವಯೋಜಿತವಾಗಿದೆ. ವಿಪಕ್ಷಗಳು ಹೇಳುವಂತೆ ಈ ವಕ್ಫ್ ಗಲಭೆಯಲ್ಲಿ ಟಿಎಂಸಿ ಕೈವಾಡವಿದ್ದಿದ್ದರೆ ನಮ್ಮ ನಾಯಕರ ಮನೆಗಳನ್ನು ಧ್ವಂಸ ಮಾಡುತ್ತಿರಲಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಾಗೆಯೇ ವಕ್ಫ್ ವಿರುದ್ಧ ಟಿಎಂಸಿ ನಿಲುವು ಸ್ಪಷ್ಟವಾಗಿದೆ. ವಕ್ಫ್ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ಈ ವಿವಾದಾತ್ಮಕ ಕಾನೂನನ್ನು ರಾಜ್ಯದಲ್ಲಿ ಜಾರಿ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ | ಮುರ್ಶಿದಾಬಾದ್‌ ಕೋಮುಗಲಭೆ: ಊರು ಬಿಡುವುದೊಂದೇ ಜನರಿಗೆ ಕಂಡ ದಾರಿ

Advertisements

“ಈ ಗಲಭೆಯಲ್ಲಿ ಬಾಂಗ್ಲಾದೇಶ ಭಾಗಿಯಾಗಿದೆ ಎಂದು ಗೃಹ ಸಚಿವಾಲಯ ಹೇಳಿರುವುದಾಗಿ ಉಲ್ಲೇಖಿಸಿದ ಸುದ್ದಿಯೊಂದನ್ನು ನಾನು ನೋಡಿದೆ. ಇದು ನಿಜವಾಗಿದ್ದರೆ, ಕೇಂದ್ರ ಸರ್ಕಾರ ಇದಕ್ಕೆ ಕಾರಣವಾಗಿದೆ. ಗಡಿಯನ್ನು ಬಿಎಸ್‌ಎಫ್ ನೋಡಿಕೊಳ್ಳುತ್ತದೆ, ರಾಜ್ಯ ಸರ್ಕಾರವಲ್ಲ. ಬಿಜೆಪಿಯ ಜನರು ಹೊರಗಿನಿಂದ ಬಂದು, ಗಲಾಟೆ ಮಾಡಿ ಓಡಿಹೋಗಲು ನೀವು ಯಾಕೆ ಅವಕಾಶ ಮಾಡಿಕೊಟ್ಟಿದ್ದೀರಿ” ಎಂದು ಪ್ರಶ್ನಿಸಿದರು.

ಇನ್ನು ಕೇಂದ್ರ ಸರ್ಕಾರ ಮತ್ತು ಗೋದಿ ಮೀಡಿಯಾಗಳನ್ನು ಗುರಿಯಾಗಿಸಿಕೊಂಡ ಮಮತಾ ಬ್ಯಾನರ್ಜಿ, “ಗೋದಿ ಮೀಡಿಯಾಗಳು ತಪ್ಪು ಮಾಹಿತಿಯನ್ನು ಹರಡುತ್ತಿದೆ. ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಿಕೊಂಡಿದೆ” ಎಂದು ಆರೋಪಿಸಿದರು.

“ಕೇಂದ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಆದರೆ ಕೆಲವು ಗೋದಿ ಮೀಡಿಯಾಗಳು ಬಂಗಾಳದ ವಿರುದ್ಧ ಮತ್ತು ನನ್ನ ವಿರುದ್ಧ ಮಾತ್ರ ಮಾತನಾಡುತ್ತಿದೆ. ತಪ್ಪು ಮಾಹಿತಿ ಹರಡುವ ಬದಲು ನೇರವಾಗಿ ನನ್ನೊಂದಿಗೆ ಮಾತನಾಡಿ” ಎಂದು ಸವಾಲು ಹಾಕಿದರು.

“ಬಿಜೆಪಿ ಬೆಂಬಲಿತ ಕೆಲವು ಮಾಧ್ಯಮ ಸಂಸ್ಥೆಗಳು ರಾಜ್ಯವನ್ನು ಕೆಣಕಲು ನಕಲಿ ವಿಡಿಯೋಗಳನ್ನು ಪ್ರಸಾರ ಮಾಡಿವೆ. ನಾವು ಅವರನ್ನು ಬಂಧಿಸಿದ್ದೇವೆ. ಕೆಲವು ಕರ್ನಾಟಕದ್ದು, ಕೆಲವು ಉತ್ತರ ಪ್ರದೇಶ, ಬಿಹಾರ ಅಥವಾ ರಾಜಸ್ಥಾನದ ವಿಡಿಯೋಗಳಾಗಿವೆ. ಬಂಗಾಳದ ಹೆಸರು ಹಾಳು ಮಾಡಲು ಈ ರೀತಿ ದುಷ್ಕೃತ್ಯ ಎಸಗಲಾಗಿದೆ” ಎಂದು ಹೇಳಿದರು.

ಇನ್ನೊಂದೆಡೆ ಮುರ್ಶಿದಾಬಾದ್‌ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಸರ್ಕಾರವು ಹಿಂದೂ ಸಮುದಾಯದ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದೆ. ಈ ಸಂಬಂಧ ಹಲವು ನಕಲಿ ವಿಡಿಯೋಗಳನ್ನು ಹರಿಬಿಟ್ಟಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X