ಹಿಂದು ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಮಹಿಳೆ: ವಿಡಿಯೋ ವೈರಲ್

Date:

Advertisements

ಇಂದಿಗೂ, ಜನರು ಸಂಕಷ್ಟಗಳು ಬಂದಾಗ, ಸಮಸ್ಯೆಗಳ ಪರಿಹಾರಕ್ಕೆ ದಾರಿ ತೋಚದಿದ್ದಾಗ ದೇವರ ಮೊರೆ ಹೋಗುವುದು, ಪವಾಡವೇನಾದರು ಸಂಭವಿಸಬೇಕೆಂದು ಬಯಸುವುದು ಸರ್ವೇಸಾಮಾನ್ಯ. ಅಂತೆಯೇ, ತಮ್ಮ ಕಷ್ಟಗಳು ತೀರಿದ್ದಕ್ಕಾಗಿ ಮುಸ್ಲಿಂ ಮಹಿಳೆಯೊಬ್ಬರು ಹಿಂದು ದೇವರಿಗೆ ಪೂಜೆ ಸಲ್ಲಿಸಿರುವ ಮೌಢ್ಯ ಮತ್ತು ಸಾಮರಸ್ಯದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ವಿಡಿಯೋ – ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಕಲ್ಯಾಣಪುರದ ಅವಂತಿಪುರಂ ಪ್ರದೇಶದ್ದು ಎಂದು ತಿಳಿದುಬಂದಿದೆ. ವಿಡಿಯೋದಲ್ಲಿ ಪೂಜೆ ಸಲ್ಲಿಸುತ್ತಿರುವ ಮಹಿಳೆಯ ಸಂಬಂಧಿಯೊಬ್ಬರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿ, ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯವು ದಿನೇ-ದಿನೇ ಕ್ಷೀಣಿಸುತ್ತಿತ್ತು. ಅವರನ್ನು ಕಳೆದುಕೊಳ್ಳುತ್ತೇವೆಂಬ ಆತಂಕ ಮಹಿಳೆಯಲ್ಲಿತ್ತು.

ಮಹಿಳೆಯು ಆಸ್ಪತ್ರೆಯ ಬಳಿ ಸಣ್ಣ ಶಿವ ದೇವಾಲಯವನ್ನು ಗಮನಿಸಿದ್ದರು. ಆ ದೇವಾಲಯದ ಮುಂದೆ ನಿಂತು, ಹರಕೆ ಕಟ್ಟಿಕೊಂಡಿದ್ದರು. ದಿನನಿತ್ಯ ಶಿವನಲ್ಲಿ ತನ್ನ ಹರಕೆಯ ಬಗ್ಗೆ ಬೇಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.

Advertisements

ನಿರಂತರ ಚಿಕಿತ್ಸೆ ಮತ್ತು ವೈದ್ಯರ ಪರಿಶ್ರಮದಿಂದ ಮಹಿಳೆಯ ಸಂಬಂಧಿಯ ಆರೋಗ್ಯ ಚೇತರಿಸಿಕೊಂಡಿತು. ಸಂಬಂಧಿ ಚೇತರಿಸಿಕೊಂಡ ಬೆನ್ನಲ್ಲೇ, ಮಹಿಳೆಯು ಶಿವನ ದೇವಾಲಯದಲ್ಲಿ ಪೂಜೆ ಸಲ್ಲಿಸಲು ತೆರಳಿದ್ದರು. ಅವರು ಪೂಜೆ ಸಲ್ಲಿಸುತ್ತಿರುವುದನ್ನು ಸ್ಥಳೀಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಹರಕೆ ಕಟ್ಟಿಕೊಳ್ಳುವುದು, ಹರಕೆ ಮತ್ತು ದೇವರ ಕೃಪೆಯಿಂದಲೇ ತಮ್ಮ ಕಷ್ಟ ನಿವಾರಣೆಯಾಯಿತು ಎಂದು ಭಾವಿಸುವುದು, ಪೂಜೆ ಸಲ್ಲಿಸುವುದು ಮೌಢ್ಯಾಚರಣೆ ಭಾಗವೇ ಆಗಿದೆ. ಆದಾಗ್ಯೂ, ಈ ಪ್ರಕರಣದಲ್ಲಿ ಮುಸ್ಲಿಂ ಮಹಿಳೆಯು ಹಿಂದು ದೇವರಿಗೆ ಪೂಜೆ ಸಲ್ಲಿಸಿರುವುದು ಮೌಢ್ಯದ ಹೊರತಾಗಿ ಸೌಹಾರ್ದತೆ, ಸಾಮರಸ್ಯವನ್ನು ಸೂಚಿಸುತ್ತದೆ.

ಮಹಿಳೆಯ ವಿಡಿಯೋ ಸಾಮಾಜಿಕ ಸಾಮರಸ್ಯ ಮತ್ತು ನಂಬಿಕೆಯನ್ನು ತೋರುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X