ನಾಗ್ಪುರದ ನೀಟ್ ವಿದ್ಯಾರ್ಥಿಗೆ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

Date:

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಗಂಭೀರ ಎಡವಟ್ಟಿನಿಂದಾಗಿ ಪಾಸ್‌ಪೋರ್ಟ್ ಕೂಡ ಹೊಂದಿಲ್ಲದ ನಾಗ್ಪುರದ ನೀಟ್ (NEET) ಆಕಾಂಕ್ಷಿಯೊಬ್ಬನಿಗೆ ಬರೋಬ್ಬರಿ 2,500 ಕಿ.ಮೀ. ದೂರದ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿದೆ.

- Advertisement -

ನಾಗ್ಪುರದ 18 ವರ್ಷದ ನೀಟ್ (NEET) ಆಕಾಂಕ್ಷಿ ಅಬ್ದುಲ್ಲಾ ಮೊಹಮ್ಮದ್ ತಾಲಿಬ್ ತನ್ನ ಪ್ರವೇಶ ಪತ್ರವನ್ನು ನೋಡಿದಾಗ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಆತನ ಪರೀಕ್ಷಾ ಕೇಂದ್ರವು 2,500 ಕಿ.ಮೀ ದೂರದಲ್ಲಿರುವ ಅಬುಧಾಬಿಯಲ್ಲಿತ್ತು ಮತ್ತು ಆತನ ಬಳಿ ಪಾಸ್‌ಪೋರ್ಟ್ ಕೂಡ ಇರಲಿಲ್ಲ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿದೇಶಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಒದಗಿಸುತ್ತದೆಯಾದರೂ, ಅವು ಸಾಮಾನ್ಯವಾಗಿ ಎನ್‌ಆರ್‌ಐ (NRI) ಮತ್ತು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜೂನ್ 14 ರಂದು ಬಿಡುಗಡೆಯಾದ ಪ್ರವೇಶ ಪತ್ರದಲ್ಲಿ ‘ಅಬುಧಾಬಿ ಇಂಡಿಯನ್ ಸ್ಕೂಲ್’ ಅನ್ನು ಆತನ ಪರೀಕ್ಷಾ ಕೇಂದ್ರವಾಗಿ ನಮೂದಿಸಲಾಗಿತ್ತು. ಈ ಪ್ರಮಾದದ ಬಗ್ಗೆ ಕುಟುಂಬವು ತಕ್ಷಣ ಎನ್‌ಟಿಎ ಸಹಾಯವಾಣಿಯನ್ನು ಸಂಪರ್ಕಿಸಿದಾಗ, ದೋಷವನ್ನು ಸರಿಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ಭರವಸೆ ನೀಡಿದ್ದರು. ಆದರೆ, ಪರೀಕ್ಷೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿದ್ದರೂ, ಎನ್‌ಟಿಎ ಇನ್ನೂ ಆ ತಪ್ಪನ್ನು ತಿದ್ದಿಲ್ಲ. ಇದರಿಂದ ಆತಂಕಗೊಂಡ ಕುಟುಂಬವು ಅನಿವಾರ್ಯವಾಗಿ ಪ್ರಯಾಣದ ದಾಖಲೆಗಳು ಮತ್ತು ವಿಮಾನದ ಟಿಕೆಟ್‌ಗಳನ್ನು ಹೊಂದಿಸಲು ಪ್ರಾರಂಭಿಸಿತ್ತು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ನಂತರ ತಾಲಿಬ್ ಈಗಾಗಲೇ ತೀವ್ರ ಒತ್ತಡದಲ್ಲಿದ್ದನು ಮತ್ತು ಆ ಆಘಾತದಿಂದ ಇನ್ನೂ ಸಂಪೂರ್ಣವಾಗಿ ಹೊರಬಂದಿರಲಿಲ್ಲ. ಈ ಪ್ರವೇಶ ಪತ್ರ ದೋಷವು ಆತನ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಇದರ ನಡುವೆ, ತಾವು ಯಾವುದೇ ಹೊಸ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳದಿದ್ದರೂ, ತಮ್ಮ ಮಕ್ಕಳ ಪರೀಕ್ಷಾ ಕೇಂದ್ರಗಳನ್ನು ಬೇರೆ ದೂರದ ಸ್ಥಳಗಳಿಗೆ ಬದಲಾಯಿಸಲಾಗಿದೆ ಎಂದು ಹಲವು ಪೋಷಕರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಅಮೆರಿಕ-ಇರಾನ್ ಒಪ್ಪಂದ: ಆರ್ಥಿಕ ಲಾಭದ ಮುಂದೆ ಸೋತ ಮಾನವೀಯತೆ?

ಈ ಘಟನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮಕ್ಕಳ ಭವಿಷ್ಯದೊಂದಿಗೆ “ಜೂಜಾಡುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ. “ಒಂದು ತಿಂಗಳಿನಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗೆ ಪರೀಕ್ಷೆಯ ಹಿಂದಿನ ದಿನ ತನ್ನ ಕೇಂದ್ರ ಅಬುಧಾಬಿಯಲ್ಲಿದೆ ಎಂದು ತಿಳಿದಿದೆ. ಆತನ ಬಳಿ ಪಾಸ್‌ಪೋರ್ಟ್ ಇಲ್ಲ, ವಿದೇಶಕ್ಕೆ ಕಳುಹಿಸುವಷ್ಟು ಹಣ ಕುಟುಂಬದ ಬಳಿ ಇಲ್ಲ. ಇದರಿಂದ ಆತ ರಾತ್ರಿಯಿಡೀ ಅಳುತ್ತಿದ್ದಾನೆ” ಎಂದು ಅವರು ಎಕ್ಸ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದು ಹೇಗೆ ಸಂಭವಿಸಿತು? ಯಾವ ವಿದ್ಯಾರ್ಥಿಯೂ ತಮ್ಮ ಪರೀಕ್ಷಾ ಕೇಂದ್ರವನ್ನು ತಲುಪಲು ಸಾಧ್ಯವಾಗದಂತಹ ಸಮಸ್ಯೆಯನ್ನು ಎದುರಿಸಬಾರದು. ವಾಸ್ತವದಲ್ಲಿ, ಎನ್‌ಟಿಎ ಕೇವಲ ದೇಶದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ವಿದ್ಯಾರ್ಥಿಗೆ ತನ್ನದೇ ನಗರದಲ್ಲಿ ಕೇಂದ್ರವನ್ನು ನೀಡಲಾಗದ ಮತ್ತು ಬದಲಿಗೆ ವಿದೇಶದಲ್ಲಿ ಕೇಂದ್ರವನ್ನು ನೀಡುವ ವ್ಯವಸ್ಥೆಗೆ ಪರೀಕ್ಷೆಗಳನ್ನು ನಡೆಸುವ ಯಾವುದೇ ಹಕ್ಕಿಲ್ಲ ಎಂದು ಅವರು ತರಾಟೆಗೆ ತೆಗೆದುಕೊಂಡರು.

“ನಾನು ಕೋಟಾದಲ್ಲಿ ಹೇಳಿದ್ದು ಇದನ್ನೇ
ಇದು ಇನ್ನು ಮುಂದೆ ಶಿಕ್ಷಣ ವ್ಯವಸ್ಥೆಯಾಗಿ ಉಳಿದಿಲ್ಲ. ಇದು ಇಡೀ ಪೀಳಿಗೆಯ ಹಣ, ಸಮಯ ಮತ್ತು ಮಾನಸಿಕ ನೆಮ್ಮದಿಯ ಶೋಷಣೆಯಾಗಿದೆ” ಎಂದು ಅವರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳು ಸೂಕ್ಷ್ಮ, ಜವಾಬ್ದಾರಿಯುತ ಮತ್ತು ಉತ್ತರದಾಯಿತ್ವವುಳ್ಳ ಶಿಕ್ಷಣ ಹಾಗೂ ಪರೀಕ್ಷಾ ವ್ಯವಸ್ಥೆಗೆ ಅರ್ಹರಾಗಿದ್ದಾರೆ ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, ರಾಷ್ಟ್ರದ ಶಿಕ್ಷಣ ವ್ಯವಸ್ಥೆಯ ಸಮಸ್ಯೆಗಳನ್ನು ಎತ್ತಿಹಿಡಿಯಲು ಮತ್ತು ಸರ್ಕಾರಕ್ಕೆ ನೇರವಾಗಿ ಬೇಡಿಕೆಗಳನ್ನು ಸಲ್ಲಿಸಲು ಸಹಿ ಸಂಗ್ರಹ ಅಭಿಯಾನವನ್ನು ಸಹ ಪ್ರಾರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...