ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

Date:

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಈ ದಿಢೀರ್ ಬೆಳವಣಿಗೆಯ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.

- Advertisement -

ಅಕ್ಟೋಬರ್ 6ರಂದು ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಹಿಂಪಡೆಯಲು ಸೆಪ್ಟೆಂಬರ್ 19 ಕೊನೆಯ ದಿನವಾಗಿತ್ತು. ಆದರೆ, ಶುಕ್ರವಾರವೇ (ಸೆ. 18) ಶಿಕ್ಷಕಿಯೂ ಆಗಿರುವ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ಅವರು ತಮ್ಮ ಪತಿಯೊಂದಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದರು. ಈ ಭೇಟಿಯ ಕೆಲವೇ ಗಂಟೆಗಳಲ್ಲಿ ಅವರು ತಮ್ಮ ನಾಮಪತ್ರವನ್ನು ಅಧಿಕೃತವಾಗಿ ಹಿಂಪಡೆದರು. ಇದರಿಂದಾಗಿ ನಂದಿಗ್ರಾಮ ಕ್ಷೇತ್ರದಲ್ಲಿ ‘ಮಮತಾ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್’ ಬಣಕ್ಕೆ ಅಭ್ಯರ್ಥಿಯೇ ಇಲ್ಲದಂತಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದನ್ನೂ ಓದಿ: ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ತಮ್ಮ ಅಭ್ಯರ್ಥಿ ರಂಗದಿಂದ ಹೊರಬಿದ್ದ ತಕ್ಷಣವೇ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇಂಡಿಯಾ’ ಮೈತ್ರಿಕೂಟವನ್ನು ಬಲಪಡಿಸುವ ಉದ್ದೇಶದಿಂದ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ತಮ್ಮ ಬಣ ಪೂರ್ಣ ಬೆಂಬಲ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

ಟಿಎಂಸಿಯ ಆಂತರಿಕ ಭಿನ್ನಮತ ಮತ್ತು ಪಕ್ಷದ ಮೇಲಿನ ಹಕ್ಕಿನ ಹೋರಾಟದ ಹಿನ್ನೆಲೆಯಲ್ಲಿ, ಭಾರತೀಯ ಚುನಾವಣಾ ಆಯೋಗವು (ಇಸಿ) ಟಿಎಂಸಿಯ ಸಾಂಪ್ರದಾಯಿಕ ‘ಜೋಡು ಹುಲ್ಲು-ಹೂವು’ ಚಿಹ್ನೆ ಹಾಗೂ ಪಕ್ಷದ ಮೂಲ ಹೆಸರನ್ನು ಮುಟ್ಟುಗೋಲು ಹಾಕಿಕೊಂಡಿದೆ. ಆಯೋಗವು ಮಮತಾ ಬ್ಯಾನರ್ಜಿ ಬಣಕ್ಕೆ ‘ಮಮತಾ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್’ ಎಂದು ಹೆಸರಿಸಿ, ‘ಫುಟ್‌ಬಾಲ್ ಆಟಗಾರ’ ಚಿಹ್ನೆಯನ್ನು ನೀಡಿದೆ. ರೇಜಿ‌ನಗರ ಉಪಚುನಾವಣೆಗೆ ಸಂಬಂಧಿಸಿದ ಬೆಂಬಲದ ನಿರ್ಧಾರವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದಾಗಿ ಮಮತಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ಬಬಲಾದಿ ಗ್ರಾಪಂ ವ್ಯಾಪ್ತಿಯಲ್ಲಿ ರೂ. 1.67 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಬಬಲಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...