ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣ: ಬಿಜೆಪಿ ಮಾಜಿ ಸಚಿವೆ ಸೇರಿ 68 ಆರೋಪಿಗಳ ಖುಲಾಸೆಗೊಳಿಸಿದ ಕೋರ್ಟ್

Date:

  • ಫೆಬ್ರವರಿ 28, 2002 ರಂದು, ಅಹಮದಾಬಾದ್ ನರೋಡಾ ಗಾಮದಲ್ಲಿ ನಡೆದ ಹತ್ಯಾಕಾಂಡ
  • ಕುಂಭರ್ ವಾಸ್ ಪ್ರದೇಶದ ಮನೆಗಳಿಗೆ ಬೆಂಕಿ ಹಚ್ಚಿ 11 ಮುಸ್ಲಿಮರನ್ನು ಸುಟ್ಟು ಹಾಕಲಾಗಿತ್ತು

2002ರ ನರೋಡಾ ಗಾಮ್ ಹತ್ಯಾಕಾಂಡ ಕೋಮು ಗಲಭೆ ಪ್ರಕರಣದಲ್ಲಿ 11 ಮಂದಿ ಮುಸ್ಲಿಂ ಸಮುದಾಯದವರನ್ನು ಹತ್ಯೆಗೈದ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕಿ ಮಾಯಾ ಕೊಡ್ನಾನಿ, ಮಾಜಿ ಬಜರಂಗದಳ ನಾಯಕ ಬಾಬು ಬಜರಂಗಿ ಮತ್ತು ವಿಶ್ವ ಹಿಂದೂ ಪರಿಷತ್ ಮುಖಂಡ ಜಯದೀಪ್ ಪಟೇಲ್ ಸೇರಿದಂತೆ 69 ಆರೋಪಿಗಳನ್ನು ಅಹಮದಾಬಾದ್‌ನ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

- Advertisement -

2002ರ ಗುಜರಾತ್ ಗಲಭೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ರಚಿಸಲಾಗಿದ್ದ ನ್ಯಾಯಾಧೀಶರಾದ ಶುಭದಾ ಕೃಷ್ಣಕಾಂತ್ ಬಕ್ಷಿ ಅವರ ವಿಶೇಷ ನಿಯೋಜಿತ ನ್ಯಾಯಾಲಯವು ಏಪ್ರಿಲ್ 5 ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿತ್ತು. ಪ್ರಕರಣದ 86 ಆರೋಪಿಗಳ ಪೈಕಿ 17 ಮಂದಿ ಈಗಾಗಲೇ ಮೃತಪಟ್ಟಿದ್ದರೆ, ಒಬ್ಬ ಆರೋಪಿ ಬಿಡುಗಡೆಗೊಂಡಿದ್ದ. ಉಳಿದ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದರು. ಪ್ರಕರಣದಲ್ಲಿ ಸುಮಾರು 182 ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಜಮ್ಮು ಕಾಶ್ಮೀರ | ಸೇನಾ ವಾಹನ ಹೊತ್ತಿ ಉರಿದು ನಾಲ್ವರು ಸೈನಿಕರು ಸಜೀವ ದಹನ

ವಿಚಾರಣಾ ನ್ಯಾಯಾಲಯವು ನರೋಡಾ ಪಾಟಿಯಾ ಪ್ರಕರಣದಲ್ಲಿ ಕೊಡ್ನಾನಿ ಮತ್ತು ಬಜರಂಗಿ ಇಬ್ಬರನ್ನೂ ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದಾಗ್ಯೂ, ಗುಜರಾತ್ ಹೈಕೋರ್ಟ್ ಕೊಡ್ನಾನಿ ಅವರ ಶಿಕ್ಷೆಯನ್ನು ರದ್ದುಗೊಳಿಸಿ ಅವರನ್ನು ಖುಲಾಸೆಗೊಳಿಸಿತು. 2018 ರಲ್ಲಿ ನರೋಡಾ ಪಾಟಿಯಾ ಪ್ರಕರಣದಲ್ಲಿ ಬಜರಂಗಿ ಅವರ ಶಿಕ್ಷೆಯನ್ನು ಎತ್ತಿಹಿಡಿದಿತ್ತು.

ಫೆಬ್ರವರಿ 27, 2002 ರಂದು ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್ ಅನ್ನು ಸುಟ್ಟುಹಾಕಿದ ನಂತರ ಗುಜರಾತ್‌ನಲ್ಲಿ ನಡೆದ ಒಂಬತ್ತು ಪ್ರಮುಖ ಗಲಭೆಗಳಲ್ಲಿ ನರೋಡಾ ಗಾಮ್ ಪ್ರಕರಣವೂ ಸೇರಿದೆ. ಪ್ರಕರಣದ ತ್ವರಿತ ವಿಚಾರಣೆಗೆ ಆದೇಶಿಸಲಾಯಿತು. ವಿಚಾರಣೆಗಳು ಗೊತ್ತುಪಡಿಸಿದ ನ್ಯಾಯಾಲಯಗಳಿಗೆ ಬದ್ಧವಾಗಿದ್ದು, ಸುಪ್ರೀಂ ಕೋರ್ಟ್‌ನಿಂದ ಮೇಲ್ವಿಚಾರಣೆ ಮಾಡಲ್ಪಟ್ಟಿದೆ. ಆದರೂ ನರೋಡಾ ಗಾಮ್ ಪ್ರಕರಣದ ತೀರ್ಪು ಪ್ರಕಟವಾಗಲು 21 ವರ್ಷಗಳನ್ನು ತೆಗೆದುಕೊಳ್ಳಲಾಗಿದೆ.

ಫೆಬ್ರವರಿ 28, 2002 ರಂದು, ಅಹಮದಾಬಾದ್‌ನ ನರೋಡಾ ಗಾಮ ಪ್ರದೇಶದ ಮುಸ್ಲಿಂ ಮಹೋಲ್ಲಾ, ಕುಂಭರ್ ವಾಸ್ ಎಂಬ ಪ್ರದೇಶದಲ್ಲಿದ್ದ ಮನೆಗಳಿಗೆ ಬೆಂಕಿ ಹಚ್ಚಿದ ನಂತರ 11 ಮುಸ್ಲಿಂ ಸಮುದಾಯದವರನ್ನು ಸುಟ್ಟುಹಾಕಲಾಗಿತ್ತು. ಪ್ರಕರಣ ಸಂಬಂಧ ನರೋಡಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...