ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್‌; ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಕಾರ

Date:

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. ಚಾರ್ಜ್‌ಶೀಟ್‌ಅನ್ನು ತಿರಸ್ಕರಿಸಿದೆ.

- Advertisement -

ಪ್ರಕರಣದ ವಿಚಾರಣೆ ನಡೆಸಿರುವ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ, “ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿಇಡಿ ಸಲ್ಲಿಸಿದ ದೂರು ಸಮರ್ಥನೀಯವಲ್ಲ. ಈ ಪ್ರಕರಣದ ತನಿಖೆಯು ಯಾವುದೇ ಎಫ್‌ಐಆರ್‌ಅನ್ನು ಆಧರಿಸಿಲ್ಲ. ಬದಲಾಗಿ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರನ್ನು ಆಧರಿಸಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

“ಪ್ರಕರಣದ ತನಿಖೆ ಮತ್ತು ಚಾರ್ಜ್‌ಶೀಟ್‌ಅನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್ ಅವರ ಸಮನ್ಸ್ ಆದೇಶಗಳಿಂದ ಸಿದ್ದಪಡಿಸಲಾಗಿದೆಯೇ ಹೊರತು ಎಫ್‌ಐಆರ್‌ನಿಂದಲ್ಲ.ಆದ್ದರಿಂದ, ಈ ಚಾರ್ಜ್‌ಶೀಟ್‌ಅನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ” ಎಂದು ಕೋರ್ಟ್‌ ಹೇಳಿದೆ.

ಪ್ರಕರಣದಲ್ಲಿ ಗಾಂಧಿ ಕುಟುಂಬದವರಲ್ಲದೆ, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಯಂಗ್ ಇಂಡಿಯನ್, ಡಾಟೆಕ್ಸ್ ಮರ್ಚಂಡೈಸ್ ಹಾಗೂ ಸುನಿಲ್ ಭಂಡಾರಿ ಅವರನ್ನು ಸಹ ಜಾರಿ ನಿರ್ದೇಶನಾಲಯವು ಆರೋಪಿಗಳನ್ನಾಗಿ ಮಾಡಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಆರೋಪಿಗಳು ಈ ಹಂತದಲ್ಲಿ ಎಫ್‌ಐಆರ್‌ ಪ್ರತಿಯನ್ನು ಪಡೆಯಲು ಅರ್ಹರಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಆದಾಗ್ಯೂ, ಮಂಗಳವಾರ, ಇಡಿ ಸಲ್ಲಿಸಿದ ಚಾರ್ಜ್‌ಶೀಟ್‌ಅನ್ನು ಪರಿಗಣಿಸಲು ನ್ಯಾಯಾಲಯವು ನಿರಾಕರಿಸಿದೆ.

ಇನ್ನು, ಕಾಂಗ್ರೆಸ್‌ ನಾಯಕರ ವಿರುದ್ಧದ ಎಫ್‌ಐಆರ್‌ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಬಿಜೆಪಿ ತನ್ನ ಉನ್ನತ ನಾಯಕತ್ವದ ವಿರುದ್ಧ ಕಿರುಕುಳ, ಬೆದರಿಕೆ ಮತ್ತು ಸೇಡಿನ ರಾಜಕೀಯ ಮಾಡುತ್ತಿದೆ. ಮೋದಿ-ಶಾ ಜೋಡಿಯು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣವು ‘ಸಂಪೂರ್ಣ ನಕಲಿ’ ಪ್ರಕರಣವಾಗಿದೆ. ಅಂತಿಮವಾಗಿ ನ್ಯಾಯವು ಗೆಲ್ಲುತ್ತದೆ” ಎಂದು ಪ್ರತಿಪಾದಿಸಿದೆ.

ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, “ಖಾಸಗಿ ದೂರು ದಾಖಲಾದಾಗ ಪ್ರಧಾನಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರಲಿಲ್ಲ. ಈ ಪ್ರಕರಣವು 2008ಕ್ಕೂ ಹಿಂದಿನದ್ದು. ಕಾಂಗ್ರೆಸ್ ಸುಳ್ಳು ಮತ್ತು ಆಧಾರರಹಿತ ಆರೋಪ ಮಾಡುತ್ತಿದೆ. ಕಾನೂನು ತನ್ನ ಹಾದಿಯಲ್ಲಿ ಸಾಗಲಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...