ಅಲ್ ಖೈದಾ ಜೊತೆಗೆ ನಂಟು ಆರೋಪ, ಕರ್ನಾಟಕ ಸೇರಿ ಒಂಭತ್ತು ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ

Date:

Advertisements

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳ ತಂಡ ಸೋಮವಾರ (ನ.12) ಕರ್ನಾಟಕ ಸೇರಿದಂತೆ ದೇಶದ 9 ರಾಜ್ಯಗಳಲ್ಲಿ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದೆ.

ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಶಂಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು ವಿವರ, ಮೊಬೈಲ್ ಫೋನ್, ಲ್ಯಾಪ್‌ಟಾಪ್ ಹಾಗೂ ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ.

Advertisements

ಮೊಹಮ್ಮದ್, ಸೋಜಿಬ್ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ, ಅಜರುಲ್ ಇಸ್ಲಾಂ, ಅಬ್ದುಲ್ ಲತೀಫ್ ಎಂದು ಗುರುತಿಸಲಾದ ವ್ಯಕ್ತಿ ಹಾಗೂ ನಾಲ್ವರು ಬಾಂಗ್ಲಾದೇಶ ಪ್ರಜೆಗಳು ಸೇರಿ 2023ರ ನವೆಂಬರ್‌ನಲ್ಲಿ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿತ್ತು. ಬಂಧಿತನಾಗಿದ್ದ ಐದನೇ ಆರೋಪಿ ಫರೀದ್ ಭಾರತೀಯ ಪ್ರಜೆಯಾಗಿದ್ದ ಎಂದು ಎನ್ಐಎ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಸಿ ಗಾಳಿ ಬೀಸುತ್ತಿದೆ – ತಾಪಮಾನ ಏರುತ್ತಿದೆ; ಪ್ರಕೃತಿ ತಿರುಗಿ ಬೀಳಲಿದೆ!

2023ರ ನವೆಂಬರ್‌ನಲ್ಲಿ, ಮೊಹಮ್ಮದ್ ಎಂದು ಗುರುತಿಸಲಾದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸೋಜಿಬ್ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ ಅಲಿಯಾಸ್​ ಮುನ್ನಾ ಖಾನ್, ಅಜರುಲ್ ಇಸ್ಲಾಂ ಅಲಿಯಾಸ್​ ಜಹಾಂಗೀರ್ ಅಥವಾ ಆಕಾಶ್ ಖಾನ್, ಅಬ್ದುಲ್ ಲತೀಫ್ ಅಲಿಯಾಸ್​ ಮೊಮಿನುಲ್ ಅನ್ಸಾರಿ ಮತ್ತು ಐದನೇ ಆರೋಪಿ ಫರೀದ್ ಭಾರತೀಯ ಪ್ರಜೆಯಾನ್ನು ಬಂಧಿಸಲಾಗಿತ್ತು ಎಂದು ಎನ್​ಐಎ ತಿಳಿಸಿದೆ.

ಬಂಧಿತ ಆರೋಪಿಗಳು ತಮ್ಮ ಉಗ್ರ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂಬುದು ಎನ್‌ಐಎ ತನಿಖೆಯಿಂದ ತಿಳಿದು ಬಂದಿತ್ತು. ಉಗ್ರ ಚಟುವಟಿಕೆ ನಡೆಸಲು ಭಾರತದಲ್ಲಿನ ಮುಸ್ಲಿಂ ಯುವಕರನ್ನು ಪ್ರೇರೇಪಿಸುವಲ್ಲಿ ಬಂಧಿತರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜತೆಗೆ ಅಲ್ ಖೈದಾದ ಹಿಂಸಾತ್ಮಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು. ಅಲ್-ಖೈದಾಗೆ ಹಣ ಸಂಗ್ರಹಿಸಿ ಕಳುಹಿಸಿಕೊಡುತ್ತಿದ್ದರು. ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಎಂದು ಎನ್ಐಎ ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X