24 ವರ್ಷದ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಿರುವ ನವೀನ್ ಪಟ್ನಾಯಕ್

Date:

Advertisements

ಸತತ 24 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದ ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ ಇದೀಗ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಿದ್ದಾರೆ. ಜನತಾದಳದಿಂದ ಪ್ರತ್ಯೇಕಗೊಂಡ ನವೀನ್‌ ಪಟ್ನಾಯಕ್‌ 1997ರಲ್ಲಿ ತಮ್ಮದೆ ಸ್ವಂತ ಪಕ್ಷ ಬಿಜು ಜನತಾದಳ ಪಕ್ಷ(ಬಿಜೆಡಿ) ಸ್ಥಾಪಿಸಿದ್ದರು.

2000ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 147 ಸದಸ್ಯಬಲದಲ್ಲಿ ಅಮೋಘ 80 ಸ್ಥಾನ ಗೆಲ್ಲುವುದರೊಂದಿಗೆ ಕಾಂಗ್ರೆಸ್‌ಅನ್ನು ಮಣಿಸಿ ಮೊದಲ ಬಾರಿಗೆ ಮುಖ್ಯಮಂತ್ರಿ ಗದ್ದುಗೆ ಏರಿದ್ದರು. ಜನತಾದಳದಲ್ಲಿದ್ದ ನವೀನ್‌ ಅವರ ತಂದೆ ಬಿಜು ಪಟ್ನಾಯಕ್‌ 1990 ರಿಂದ 1995ರವರೆಗೆ ಮುಖ್ಯಮಂತ್ರಿಯಾಗಿದ್ದರು. ಅವರ ಸ್ಮರಣಾರ್ಥವಾಗಿಯೇ ನವೀನ್‌ ಪಟ್ನಾಯಕ್‌ ತಂದೆಯ ಹೆಸರಿನಲ್ಲಿ ಪಕ್ಷ ಸ್ಥಾಪಿಸಿದ್ದರು.

ಅನಂತರದ ಐದು ಚುನಾವಣೆಗಳಲ್ಲಿ ಸತತವಾಗಿ ಗೆಲುವು ಸಾಧಿಸಿ ಮುಖ್ಯಮಂತ್ರಿಯಾಗಿದ್ದರು. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಅನಾರೋಗ್ಯದ ಕಾರಣದಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ. ಸರ್ಕಾರದ ಎಲ್ಲ ನಿಯಂತ್ರಣವನ್ನು ಮಾಜಿ ಐಪಿಎಸ್‌ ಅಧಿಕಾರಿ ವಿಕೆ ಪಾಂಡ್ಯಯನ್‌ ಅವರು ನಿಯಂತ್ರಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಇಂಡಿಯಾ ಒಕ್ಕೂಟದ ಬಹುಮತ ಸಂಖ್ಯೆಗೆ ತೊಡಕಾದ ಕರ್ನಾಟಕ, ದೆಹಲಿ

ಇವೆಲ್ಲದರ ಲಾಭವನ್ನು ಪಡೆದ ಬಿಜೆಪಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ 77 ವರ್ಷದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ವಿರುದ್ಧ ಹಲವು ಆರೋಪಗಳನ್ನು ಮಾಡಿತ್ತು. ಒಡಿಶಾದ ಎಲ್ಲ ಅಧಿಕಾರಗಳನ್ನು ತಮಿಳುನಾಡಿನಿಂದ ಬಂದಿರುವ ಅಧಿಕಾರಿ ವಿ ಕೆ ಪಾಂಡ್ಯಯನ್‌ ನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಪ್ರಚಾರದ ಸಂದರ್ಭದಲ್ಲಿ ಆರೋಪಿಸುತ್ತಿದ್ದರು.

ಒಂದು ವೇಳೆ ಬಿಜೆಡಿ ಗೆದ್ದರೆ ಮುಂದಿನ ಮುಖ್ಯಮಂತ್ರಿಯಾಗಿ ವಿ ಕೆ ಪಾಂಡ್ಯಯನ್‌ ಅಧಿಕಾರ ಸ್ವೀಕರಿಸುತ್ತಾರೆ ಎನ್ನುವ ವದಂತಿ ರಾಜ್ಯದೆಲ್ಲಡೆ ಹರಡಿತ್ತು. ಇವೆಲ್ಲ ಆರೋಪಗಳನ್ನು ಬಿಜು ಜನತಾದಳ ನಿರಾಕರಿಸಿ ಕಮಲ ಪಕ್ಷದ ವಿರುದ್ಧ ಪ್ರತ್ಯಸ್ತ್ರ ಪ್ರಯೋಗಿಸಿದರೂ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

147 ಸದಸ್ಯಬಲದ ವಿಧಾನಸಭೆ ಚುನಾವಣೆಯಲ್ಲಿ ಇತ್ತೀಚಿನ ಟ್ರೆಂಡ್‌ಗಳ ಮಾಹಿತಿಯಂತೆ ಬಿಜೆಪಿ 82 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 48 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 14 ಹಾಗೂ ಇತರರು 3 ಸ್ಥಾನಗಳಲ್ಲಿ ಮುಂದಿದ್ದಾರೆ. ಒಡಿಶಾದ ರಾಜಕೀಯ ಇತಿಹಾಸದಲ್ಲಿಯೇ ಬಿಜೆಪಿ ಇದೇ ಮೊದಲ ಬಾರಿಗೆ ಅಧಿಕಾರಕ್ಕೇರುತ್ತಿದೆ.

21 ಸ್ಥಾನಗಳ ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ 19 ರಲ್ಲಿ ಮುಂದಿದ್ದರೆ, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X