ಒಂದು ಕೊಲೆ ಮಾಡಲು ಮಹಿಳೆಯರಿಗೆ ಅನುಮತಿ ಕೊಡಿ: ರಾಷ್ಟ್ರಪತಿಗೆ ಪತ್ರ ಬರೆದ ಎನ್‌ಸಿಪಿ ಮಹಿಳಾ ಘಟಕ

Date:

Advertisements

ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎಸ್‌ಪಿ- ಶರದ್ ಪವಾರ್ ಬಣ) ಮಹಿಳಾ ವಿಭಾಗವು ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದೆ. ಮಹಿಳೆಯರ ಮೇಲೆ ದೌರ್ಜನ್ಯವಾದಾಗ ಒಂದು ಕೊಲೆ ಮಾಡಲು ಮಹಿಳೆಯರಿಗೆ ಅನುಮತಿ ಕೊಡಿ, ಶಿಕ್ಷೆಯಿಂದ ವಿನಾಯಿತಿ ದೊರಕಿಸಿ ಎಂದು ಒತ್ತಾಯಿಸಿದೆ.

ಶರದ್ ಪವಾರ್ ನೇತೃತ್ವದ ಪಕ್ಷದ ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಖಡ್ಸೆ ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪತ್ರ ಬರೆದಿದ್ದಾರೆ. “ಮಹಿಳೆಯರು ದಬ್ಬಾಳಿಕೆಯ ಮನಸ್ಥಿತಿ, ಅತ್ಯಾಚಾರಿ ಮನಸ್ಥಿತಿ, ನಿಷ್ಕ್ರಿಯ ಕಾನೂನು ಮತ್ತು ಸುವ್ಯವಸ್ಥೆಯನ್ನು ನಾಶ ಮಾಡಲು, ಕೊಲೆ ಮಾಡಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ದೇವದಾಸಿ ಮಹಿಳೆಯರ ಪಿಂಚಣಿ ಹೆಚ್ಚಳಕ್ಕೆ ಆಗ್ರಹ

Advertisements

ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚುತ್ತಿವೆ ಎಂದು ಹೇಳಿರುವ ಖಡ್ಸೆ ಇತ್ತೀಚೆಗೆ ಮುಂಬೈನಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರವನ್ನು ಉಲ್ಲೇಖಿಸಿದ್ದಾರೆ.

“ಎಲ್ಲ ಮಹಿಳೆಯರ ಪರವಾಗಿ ಒಂದು ಕೊಲೆ ಮಾಡಲು ಶಿಕ್ಷೆಯಿಂದ ವಿನಾಯಿತಿ ನೀಡಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಖಡ್ಸೆ ಪತ್ರದಲ್ಲಿ ತಿಳಿಸಿದ್ದಾರೆ.

ಭಾರತವು ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ದೇಶವಾಗಿದೆ ಎಂದು ಹೇಳುವ ಸಮೀಕ್ಷಾ ವರದಿಯನ್ನು ಕೂಡಾ ಉಲ್ಲೇಖಿಸಿದ್ದಾರೆ. ಅಪಹರಣ ಮತ್ತು ಕೌಟುಂಬಿಕ ಹಿಂಸಾಚಾರ ಸೇರಿದಂತೆ ಹಲವು ಅಪರಾಧಗಳು ಮಹಿಳೆಯರ ವಿರುದ್ಧ ನಡೆಯುತ್ತಿವೆ ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ | ಮಹಿಳೆಯರು ಸ್ನಾನ ಮಾಡುವ, ಬಟ್ಟೆ ಬದಲಾಯಿಸುವ ಚಿತ್ರಗಳ ಮಾರಾಟ!

ಹಾಗೆಯೇ “ಗಂಭೀರವಾಗಿ ಯೋಚಿಸಿ ನಂತರ ನಮ್ಮ ಬೇಡಿಕೆಯನ್ನು ಈಡೇರಿಸಲಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದಾರೆ.

ಕೊಲೆಗೆ ಅನುಮತಿ ನೀಡಲು ಸಾಧ್ಯವೇ?

2021ರ ಪ್ರಕಾರ, ಭಾರತದಲ್ಲಿ ಮಹಿಳೆಯರ ಜನಸಂಖ್ಯೆ 646 ಮಿಲಿಯನ್ ಆಗಿದೆ. 2010ರ ಲೆಕ್ಕಾಚಾರಕ್ಕಿಂತ ಶೇಕಡ 13.5ರಷ್ಟು ಏರಿಕೆಯಾಗಿದೆ. 2022ರ ಲೆಕ್ಕಾಚಾರದ ಪ್ರಕಾರ ಭಾರತದಲ್ಲಿ 685,992,675 ಮಹಿಳೆಯರು ಇದ್ದಾರೆ. ಈ ಲೆಕ್ಕಾಚಾರದಲ್ಲಿ ಎಲ್ಲಾ ಮಹಿಳೆಯರಿಗೂ ಒಂದು ಕೊಲೆ ಮಾಡಲು ಅವಕಾಶ ನೀಡುವುದು ಸರಿಯೇ ಎಂಬ ಚರ್ಚೆ ಇಲ್ಲಿ ಹುಟ್ಟುತ್ತದೆ. ಕೊಲೆ ಎಂಬುದು ಅಪರಾಧ ಆಗಿರುವಾಗ ಯಾರೇ ಆದರೂ ಅವರಿಗೆ ಕೊಲೆ ಮಾಡಲು ಅವಕಾಶ ನೀಡುವುದು ಎಷ್ಟು ಸರಿ? ಕೊಲೆಗೆ ಅವಕಾಶ ನೀಡಿದರೆ, ಸಂವಿಧಾನಕ್ಕೆ, ಕಾನೂನಿಗೆ ಏನು ಬೆಲೆಯಿದೆ ಎಂಬ ವಾದ, ಪ್ರಶ್ನೆ ಹುಟ್ಟುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X