ಪರೀಕ್ಷೆಗೂ ಒಂದು ದಿನ ಮುನ್ನ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದ 14ನೇ ಪ್ರಕರಣ

Date:

Advertisements

ಭಾನುವಾರ ನಿಗದಿಯಾಗಿದ್ದ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಗೂ (ನೀಟ್) ಒಂದು ದಿನ ಮುನ್ನ ಕೋಟಾದಲ್ಲಿ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಕೋಣೆಯ ಕಬ್ಬಿಣದ ಗ್ರಿಲ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಹೆಸರನ್ನು ಬಹಿರಂಗಪಡಿಸಲು ಕುನ್ಹಾಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅರವಿಂದ್ ಭಾರದ್ವಾಜ್ ನಿರಾಕಿಸಿದ್ದಾರೆ. ಆ ಬಾಲಕಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವಳು. ಮಧ್ಯಪ್ರದೇಶದ ಶಿಯೋಪುರದವಳು ಎಂದು ಹೇಳಿದರು.

ಇದನ್ನು ಓದಿದ್ದೀರಾ? ರಾಜಸ್ಥಾನ | ಜೆಇಇ ಆಕಾಂಕ್ಷಿ ಆತ್ಮಹತ್ಯೆ; 24 ಗಂಟೆಯಲ್ಲೇ ಎರಡನೇ ಪ್ರಕರಣ

Advertisements

ಕಳೆದ ಹಲವು ವರ್ಷಗಳಿಂದ ಕೋಟಾದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಬಾಲಕಿ ಕೋಚಿಂಗ್ ಸಂಸ್ಥೆಯಲ್ಲಿ ನೀಟ್-ಯುಜಿಗೆ ತಯಾರಿ ನಡೆಸುತ್ತಿದ್ದಳು. ವಿದ್ಯಾರ್ಥಿನಿ ಭಾನುವಾರ ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಯಲಿರುವ ನೀಟ್-ಯುಜಿ ಪರೀಕ್ಷೆಯನ್ನು ಬರೆಯಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ಕುಟುಂಬ ಸದಸ್ಯರು ಮನೆಯಲ್ಲಿದ್ದರು ಮತ್ತು ರಾತ್ರಿ 9 ಗಂಟೆ ಸುಮಾರಿಗೆ ಆಕೆಯ ಮೃತ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಯಾವುದೇ ಸುಸೈಡ್ ಲೆಟರ್ ಕಂಡುಬಂದಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ವರ್ಷದ ಜನವರಿಯಿಂದ ಈವರೆಗೆ ಕೋಟಾದಲ್ಲಿ ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ 14ನೇ ಪ್ರಕರಣ ಇದಾಗಿದೆ. ಕಳೆದ ವರ್ಷ ಕೋಟಾದಲ್ಲಿ ಒಟ್ಟು 17 ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಟಾ ಕೋಚಿಂಗ್ ಸೆಂಟರ್‌ಗಳಿಗೆ ಹೆಸರುವಾಸಿಯಾಗಿದೆ. ಜೆಇಇ, ನೀಟ್ ಮೊದಲಾದ ಸ್ಪರ್ಧಾತ್ಪಕ ಪರೀಕ್ಷೆಗಳ ತಯಾರಿ ನಡೆಸುವವರು ಹೆಚ್ಚಾಗಿ ಕೋಟಾದ ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಾರೆ. ಆದರೆ ಅದೆಷ್ಟೋ ವಿದ್ಯಾರ್ಥಿಗಳು ಕಲಿಕೆಯ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X