ಐಪಿಸಿ, ಸಿಆರ್‌ಪಿಸಿ ಬದಲಿಗೆ ಹೊಸ ಮಸೂದೆಗಳು ಶೀಘ್ರದಲ್ಲೇ ಅಂಗೀಕಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ

Date:

Advertisements

ಭಾರತೀಯ ದಂಡ ಸಂಹಿತೆ (ಐಪಿಸಿ), ಸಿಆರ್‌ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಮೂರು ಹೊಸ ಮಸೂದೆಗಳನ್ನು ಸಂಸತ್ತಿನಲ್ಲಿ ಶೀಘ್ರದಲ್ಲೇ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ 75 ನೇ ಬ್ಯಾಚ್ ಇಂಡಿಯನ್ ಪೊಲೀಸ್ ಸರ್ವಿಸ್ (ಐಪಿಎಸ್) ಪ್ರೊಬೇಷನರಿ ಅಧಿಕಾರಿಗಳ ನಿರ್ಗಮನ ಪಥ ಸಂಚಲನದಲ್ಲಿ ಮಾತನಾಡಿದರು.

ಬ್ರಿಟಿಷರ ಕಾಲದಲ್ಲಿ ಜಾರಿಗೊಳಿಸಲಾಗಿದ್ದ ಅಪರಾಧ ಕಾನೂನುಗಳನ್ನು ಭಾರತ ತ್ಯಜಿಸಿ ಹೊಸ ಭರವಸೆ ಹಾಗೂ ಆತ್ಮವಿಶ್ವಾಸದೊಂದಿಗೆ ನೂತನ ಯುಗವನ್ನು ಪ್ರವೇಶಿಸುತ್ತದೆ ಎಂದು ಹೇಳಿದರು.

Advertisements

“ಈ ಮಸೂದೆಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪರಿಶೀಲಿಸುತ್ತಿದೆ. ಹೊಸ ಮಸೂದೆಗಳನ್ನು ಶೀಘ್ರದಲ್ಲೇ ಅಂಗೀಕರಿಸಲಾಗುವುದು. ಹೊಸ ಮಸೂದೆಗಳು ಜನರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕತಾರ್: 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ

“ತಂತ್ರಜ್ಞಾನವು ಭವಿಷ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಮತ್ತು ಸೈಬರ್ ಬೆದರಿಕೆಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ವಿಶ್ವದ ಅತ್ಯಂತ ತಾಂತ್ರಿಕ ಬುದ್ಧಿವಂತ ವ್ಯವಸ್ಥೆಯನ್ನು ಹೊಂದುವ ಗುರಿಯೊಂದಿಗೆ ನಾವು ಪೊಲೀಸ್ ತಂತ್ರಜ್ಞಾನ ಮಿಷನ್ ಅನ್ನು ಕಾರ್ಯಗತಗೊಳಿಸುತ್ತಿದ್ದೇವೆ. ಅಧಿಕಾರಿಗಳ ತಾಂತ್ರಿಕ ಹಿನ್ನೆಲೆಯು ಈ ಉಪಕ್ರಮಕ್ಕೆ ಕೊಡುಗೆ ನೀಡುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಅಮಿತ್ ಶಾ ಹೇಳಿದರು.

ಈಗಾಗಲೇ ಲೋಕಸಭೆಯಲ್ಲಿ ಭಾರತೀಯ ದಂಡ ಸಂಹಿತೆ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಅಪರಾಧ ಪ್ರಕ್ರಿಯಾ ಸಂಹಿತೆ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಮೂರು ಕಾಯ್ದೆಗಳಲ್ಲಿ 300ಕ್ಕೂ ಹೆಚ್ಚು ಬದಲಾವಣೆಗಳನ್ನು ನೂತನ ಮಸೂದೆಗಳಲ್ಲಿ ತರಲಾಗಿದೆ.

ಹೆಚ್ಚಿನ ಪ್ರೊಬೇಷನರ್‌ಗಳು ಎಂಜಿನಿಯರಿಂಗ್ ಮತ್ತು ತಾಂತ್ರಿಕ ಹಿನ್ನೆಲೆಯನ್ನು ಹೊಂದಿರುವುದಾಗಿ ಅಮಿತ್ ಶಾ ಹೇಳಿದ್ದಾರೆ.

34 ಮಹಿಳಾ ಅಧಿಕಾರಿಗಳು ಸೇರಿದಂತೆ 75 ನೇ ಬ್ಯಾಚ್ ಇಂಡಿಯನ್ ಪೊಲೀಸ್ ಸರ್ವಿಸ್‌ನ (ಐಪಿಎಸ್) 175 ಪ್ರೊಬೇಷನರಿ ಅಧಿಕಾರಿಗಳಲ್ಲಿ 155 ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳಿದ್ದರೆ, ನೇಪಾಳ, ಭೂತಾನ್, ಮಾಲ್ಡೀವ್ಸ್, ಮಾರಿಷಸ್‌ನ ಪೊಲೀಸ್‌ ಸೇವೆಯಿಂದ 20 ವಿದೇಶಿ ಪ್ರೊಬೇಷನರಿ ಅಧಿಕಾರಿಗಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X