ಪುಣೆ: ಕೆಲಸದ ಒತ್ತಡದಿಂದ ಸಿಎ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

Date:

Advertisements

ಪುಣೆಯ ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ (ಸಿಎ) ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಹೆಚ್‌ಆರ್‌ಸಿ) ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಿಂದ ವಿವರವಾದ ಪ್ರತಿಕ್ರಿಯೆ ನೀಡುವಂತೆ ಕೋರಿದೆ.

ಅರ್ನ್ಸ್ಟ್ ಅಂಡ್ ಯಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷ ವಯಸ್ಸಿನ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಕಳೆದ ಜುಲೈ 26ರಂದು ಸಾವನ್ನಪ್ಪಿದ್ದರು. ಸಾವಿನ ಬಳಿಕ ಕೆಲಸದ ಒತ್ತಡದಿಂದ ನಮ್ಮ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗವು ಪ್ರಸ್ತುತ ನಡೆಯುತ್ತಿರುವ ತನಿಖೆಯನ್ನು ಒಳಗೊಂಡಂತೆ ಪ್ರಕರಣದ ಸಮಗ್ರ ವರದಿ ನೀಡುವಂತೆ ಕೋರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಕಾರ್ಮಿಕ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

ಎನ್‌ಎಚ್‌ಆರ್‌ಸಿ ಪ್ರಕಾರ, ಪೆರಾಯಿಲ್ ಅವರ ಸಾವು ಕಳವಳಕಾರಿಯಾಗಿದೆ. ಕಾರ್ಪೋರೇಟ್‌ ಕೆಲಸದ ಸಂಸ್ಕೃತಿಯು ಮಾನಸಿಕ ಮತ್ತು ದೈಹಿಕವಾಗು ಉಂಟು ಮಾಡುವ ಹಾನಿಯ ಬಗ್ಗೆ ಆತಂಕಕಾರಿ ಭಾವನೆ ಮೂಡಿಸುತ್ತದೆ. ಇಂತಹ ಬೆಳವಣಿಗೆಗಳಿಂದ ನಿದ್ರಾಹೀನತೆ ಸೇರಿದಂತೆ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಕಾರ್ಪೋರೇಟ್‌ ಸಂಸ್ಥೆಗಳು ಅಸಾಧ್ಯ ಗುರಿಗಳತ್ತ ನಿರಂತರ ಅನ್ವೇಷಣೆಯೇ ಇದಕ್ಕೆ ಕಾರಣವಾಗಿದ್ದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಗಳಿಗೆ ಕಾರಣವಾಗಿದೆ ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ತನಿಖೆ ತೆವಳುತ್ತಿರುವುದೇಕೆ?

ಈ ಘಟನೆ ಬೆನ್ನಲ್ಲೇ ಮಾನವ ಹಕ್ಕುಗಳ ಆಯೋಗವು, ಕಾರ್ಪೋರೇಟ್‌ ಸಂಸ್ಥೆಗಳಲ್ಲಿ ಕಾರ್ಯಸ್ಥಳದ ಸುರಕ್ಷತೆ ಕಾಯ್ದುಕೊಳ್ಳುವ ವಿಶೇಷ ತಂಡವೊಂದನ್ನ ರಚಿಸಿದೆ. ಇದು ಕಾರ್ಮಿಕ ಶಾಸನಗಳು ಹಾಗೂ ನಿಬಂಧನೆಗಳನ್ನು ಪರಿಶೀಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶಿಫಾರಸು ಮಾಡಲಿದೆ. ಖಾಸಗಿ ವಲಯದ ಉದ್ಯೋಗಿಗಳಿಗೆ ಕೆಲಸ ಸಮಯ, ಸುರಕ್ಷತಾ ಕ್ರಮಗಳ ಕುರಿತು ವಿಶೇಷ ಮಾನದಂಡಗಳನ್ನು ರೂಪಿಸಲು ಶಿಫಾರಸು ಮಾಡಲಿದೆ ಎಂದು ಎನ್‌ಹೆಚ್‌ಆರ್‌ಸಿ ಹೇಳಿದೆ.

ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. 26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ 4 ತಿಂಗಳಲ್ಲೇ ಸಾವನ್ನಪ್ಪಿದ್ದರು. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಆಕೆ ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದರು. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿತ್ತು. ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿ ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X