ರಾಮ ಮಂದಿರ ಕಾರ್ಯಕ್ರಮ ಪ್ರಸಾರ ನಿಷೇಧ | ನಿರ್ಮಲಾ ಸೀತಾರಾಮನ್ ಆರೋಪ ಸುಳ್ಳು ಎಂದ ಸ್ಟಾಲಿನ್ ಸರ್ಕಾರ

Date:

Advertisements

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡು ಡಿಎಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎನ್ನುವ ಗಂಭೀರ ಆರೋಪವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಡಿದ್ದಾರೆ. ಆದರೆ ಅವರ ಆರೋಪವನ್ನು ಅಲ್ಲಗಳೆದಿರುವ ತಮಿಳುನಾಡು ಸರ್ಕಾರ, ರಾಮ ಮಂದಿರ ಕಾರ್ಯಕ್ರಮ ನೇರ ಪ್ರಸಾರ ನಿಷೇಧಿಸಿಲ್ಲ, ಪೂಜೆ ನಡೆಸಿ ಪ್ರಸಾದ ವಿತರಣೆಗೂ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಹೇಳಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಹಿತ ನಾನಾ ಧಾರ್ಮಿಕ ಚಟುವಟಿಕೆಗಳ ನೇರ ವೀಕ್ಷಣೆಗೆ ತಮಿಳುನಾಡು ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಬಲ್‌ ಕಡಿತಗೊಳಿಸಿ ಕಾರ್ಯಕ್ರಮ ವೀಕ್ಷಿಸದಂತೆ ಮಾಡಲಾಗುತ್ತಿದೆ. ತಮಿಳುನಾಡಿನ 200ಕ್ಕೂ ದೇಗುಲಗಳಲ್ಲಿಯೂ ಭಜನೆ, ಇತರೆ ಧಾರ್ಮಿಕ ಚಟುವಟಿಕೆ ನಡೆಸದಂತೆ ಪೊಲೀಸರನ್ನು ಬಳಸಿ ನಿಗ್ರಹಿಸಲಾಗುತ್ತಿದೆ. ಇದು ನಿಜಕ್ಕೂ ಹಿಂದೂ ವಿರೋಧಿ ಹಾಗೂ ದ್ವೇಷದ ಪ್ರಕ್ರಿಯೆ ಎಂದು  ಆರೋಪಿಸಿದ್ದಾರೆ.

ಸಚಿವರ ಸ್ಪಷ್ಟನೆ

ನಿರ್ಮಲಾ ಸೀತಾರಾಮನ್‌ ಆರೋಪವನ್ನು ಅಲ್ಲಗಳೆದಿರುವ ತಮಿಳುನಾಡಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಸೇಕರ ಬಾಬು, ಡಿಎಂಕೆ ಯುವ ಸಮಾವೇಶ ಆಯೋಜನೆಯನ್ನು ಸಹಿಸದೇ ಅದರ ಗಮನ ಬೇರೆಡೆ ಸೆಳೆಯಲು ಇಂತಹ ಹೇಳಿಕೆ ನೀಡಲಾಗುತ್ತಿದೆ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ ನಿಷೇಧಿಸಿಲ್ಲ. ಇಂತಹ ಯಾವುದೇ ಆದೇಶಗಳನ್ನು ನಾವು ಜಾರಿ ಮಾಡಿಲ್ಲ. ರಾಮಮಂದಿರಗಳಲ್ಲಿ ಚಟುವಟಿಕೆ ನಡೆಸಲು ಯಾವುದೇ ಅಡ್ಡಿ ಮಾಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ತಮಿಳುನಾಡಿನ ಸೇಲಂನಲ್ಲಿ ಆಯೋಜಿಸಿರುವ ಡಿಎಂಕೆ ಯುವ ಸಮಾವೇಶದ ಯಶಸ್ಸನ್ನು ದಿಕ್ಕುತಪ್ಪಿಸುವ ಉದ್ದೇಶದಿಂದಲೇ ರಾಮಮಂದಿರ ಕಾರ್ಯಕ್ರಮ ವೀಕ್ಷಣೆಗೆ ಅಡ್ಡಿಪಡಿಸುತ್ತಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ಸಚಿವ ಸೇಕರ ಬಾಬು ಹೇಳಿದ್ದಾರೆ.

ಡಿಎಂಕೆ ಯುವ ಸಮಾವೇಶಕ್ಕೆ ಭರದ ಸಿದ್ದತೆ ನಡೆದಿದೆ. ಸಮಾವೇಶ ಯಶಸ್ವಿಯಾಗಲಿದೆ ಎನ್ನುವ ಭಯದಲ್ಲಿ ಇಂತ ಸುಳ್ಳು ಸುದ್ದಿಯನ್ನು ಹರಡಲಾಗುತ್ತಿದೆ. ಇಲಾಖೆಯು ಯಾವುದೇ ಚಟುವಟಿಕೆ ನಡೆಸದಂತೆ ಅಡ್ಡಿಪಡಿಸಿಲ್ಲ. ಅನುಮತಿಯನ್ನೂ ನಿರಾಕರಿಸಿಲ್ಲ. ರಾಮನ ದೇಗಲುಗಳಲ್ಲಿ ಪೂಜೆ, ಪ್ರಸಾದ ನಡೆಸಲು ಅಡ್ಡಿಯಿಲ್ಲ. ಆದರೆ ದೇಶದ ಉನ್ನತ ಹುದ್ದೆಯಲ್ಲಿರುವ ನಿರ್ಮಲಾ ಸೀತಾರಾಮನ್‌ ತರದವರು ದುರುದ್ದೇಶಪೂರ್ವಕವಾಗಿ ಇಂತಹ ತಪ್ಪು ಸಂದೇಶವನ್ನು ನೀಡುತ್ತಿರುವುದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X