‘ಪುಷ್ಪ-2’ ರಿಲೀಸ್‌ ದಿನಾಂಕದಲ್ಲಿ ಬದಲಾವಣೆ ಇಲ್ಲ; ಅಜಯ್‌ ದೇವಗನ್‌ಗೆ ಅಲ್ಲು ಅರ್ಜುನ್ ಪೈಪೋಟಿ!

Date:

Advertisements

ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ-2’ ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ವನಿಗದಿಯಂತೆ ಆಗಸ್ಟ್‌ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಅಜಯ್ ದೇವಗನ್ ಅವರ ‘ಸಿಂಗಮ್ ಎಗೈನ್’ ಸಿನಿಮಾ ಕೂಡ ಆಗಸ್ಟ್‌ 15ರಂದೇ ಬಿಡುಗಡೆಯಾಗಲಿದೆ. ಹೀಗಾಗಿ, ‘ಪುಷ್ಪ-2’ ರಿಲೀಸ್ ದಿನಾಂಕ ಬದಲಾಗುತ್ತದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ವದಂತಿಗಳನ್ನು ಚಿತ್ರತಂಡ ತಳ್ಳಿ ಹಾಕಿದ್ದು, ಆಗಸ್ಟ್‌ 15ರಂದೇ ‘ಪುಷ್ಪ-2’ ಬಿಡುಗಡೆ ಆಗುತ್ತದೆ ಎಂದು ಹೇಳಿದೆ.

‘ಪುಷ್ಪ-2’ ಬಿಡುಗಡೆ ಬಗ್ಗೆ ಸಿನಿಮಾ ಸಿರ್ದೇಶಕ ಸುಕುಮಾರ್ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಪುಷ್ಪ-2’ ಆಗಸ್ಟ್‌ 15ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತದೆ ಎಂದು ಹೇಳಿದ್ದಾರೆ.

Advertisements

ಬಾಲಿವುಡ್ ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್‌ ಕೂಡ ಟ್ವೀಟ್‌ ಮಾಡಿದ್ದು, “ಪುಷ್ಪ-2 ಬಿಡುಗಡೆ ಮುಂದೂಡುವುದಿಲ್ಲ. ಖಂಡಿತವಾಗಿಯೂ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾಗಲಿದೆ. ವದಂತಿಗಳನ್ನು ನಂಬಬೇಡಿ” ಎಂದು ಹೇಳಿದ್ದಾರೆ.

 

‘ಪುಷ್ಪ-1’ ಸಿನಿಮಾ ಅಲ್ಲು ಅರ್ಜುನ್ ಅವರನ್ನು ಪ್ಯಾನ್‌-ಇಂಡಿಯಾ ಸ್ಟಾರ್‌ಆಗಿ ಹೊರಹೊಮ್ಮುವಂತೆ ಮಾಡಿತು. ಆಸ್ಕರ್‌ ಸ್ಥಾನಮಾನವೂ ದೊರೆಯಿತು. ಅಲ್ಲದೆ, ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನೂ ತಂದುಕೊಟ್ಟಿತು. ಇದರೊಂದಿಗೆ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದೀಗ, ‘ಪುಷ್ಪ-2’ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ, ಜಗಪತಿ ಬಾಬು ಮತ್ತು ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X