ಮಳೆಯಿಂದ ಪ್ರಮುಖ ಬೆಳೆಗಳಿಗೆ ಹಾನಿ ಇಲ್ಲ: ಕೃಷಿ ಕಾರ್ಯದರ್ಶಿ

Date:

Advertisements

ತೀವ್ರ ಬೇಸಿಗೆ, ತಾಪಮಾನ ಏರಿಕೆಯಿಂದ ಬಸವಳಿದಿದ್ದ ಭಾರತದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಭಾರೀ ಮಳೆಯಾಗುತ್ತಿದೆ. ಆದರೆ, ಸುರಿಯುತ್ತಿರುವ ಮಳೆಯಿಂದ ಪ್ರಮುಖ ಬಳೆಗಳಿಗೆ ಯಾವುದೇ ಹಾನಿಯಾಗುವುದಿಲ್ಲ. ಬದಲಾಗಿ, ಬೆಳೆ ಉತ್ಪಾದನೆಯು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಕೃಷಿ ಕಾರ್ಯದರ್ಶಿ ದೇವೇಶ್ ಚತುರ್ವೇದಿ ಗುರುವಾರ ಹೇಳಿದ್ದಾರೆ.

ಹವಾಮಾನ ಮಾದರಿಯ ಬಗ್ಗೆ ಮಾತನಾಡಿದ ಅವರು, “ಮುಂಗಾರುಪೂರ್ವ ಹಠಾತ್ ಮಳೆ, ಆಲಿಕಲ್ಲು ಮಳೆ ಹಾಗೂ ಬಿರುಗಾಳಿ ಸಾಮಾನ್ಯವಾಗಿವೆ. ಆದಾಗ್ಯೂ, ಹಠಾತ್ ಮಳೆಯಿಂದಾಗಿ ಇಲ್ಲಿಯವರೆಗೆ ಯಾವುದೇ ಹಾನಿ ವರದಿಯಾಗಿಲ್ಲ. ಇದು ಬೇಸಿಗೆ ಬೆಳೆಗಳಾದ ಹೆಸರುಕಾಳು, ಜೋಳ ಹಾಗೂ ಭತ್ತದ ಇಳುವರಿ ಹೆಚ್ಚಾಗಲು ಕಾರಣವಾಗುತ್ತದೆ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶ, ಬಿಹಾರದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದಾಗಿ ಮಾಗಿದ ಮಾವು ಮತ್ತು ಲಿಚಿ ಹಣ್ಣುಗಳು ಉದುರಿ ಹೋಗಬಹುದು. ಆದರೆ, ರಾಜ್ಯ ಸರ್ಕಾರಗಳು ಇನ್ನೂ ಪರಿಸ್ಥಿತಿಯನ್ನು ನಿರ್ಣಯಿಸಿ ಸಚಿವಾಲಯಕ್ಕೆ ವರದಿ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

Advertisements

ಮುಂಬರುವ ಖಾರಿಫ್ ಋತುವಿನ ಕುರಿತು ಮಾತನಾಡಿದ ಚತುರ್ವೇದಿ, “ಜುಲೈನಿಂದ ಪ್ರಾರಂಭವಾಗುವ ಭತ್ತದ ಬಿತ್ತನೆ ಸಿದ್ಧತೆಗಳು ಉತ್ತಮವಾಗಿ ಪ್ರಗತಿಯಲ್ಲಿವೆ. ಕೆಲವು ಬೆಳೆಗಳ ಬಿತ್ತನೆಯಲ್ಲಿ ಸ್ವಲ್ಪ ಏರಿಕೆಯಾಗುವ ನಿರೀಕ್ಷೆಯಿದೆ” ಎಂದು ಅವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X