ಮೋದಿ ಪುನಃ ಗೆದ್ದರೆ ದೇಶದಲ್ಲಿ ಇನ್ನು ಮುಂದೆ ಚುನಾವಣೆ ನಡೆಯದು: ಖರ್ಗೆ ಎಚ್ಚರಿಕೆ

Date:

Advertisements

ಸಾರ್ವಜನಿಕರು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ ದೂರವಿರಬೇಕು, ಅವರು ವಿಷದ ರೀತಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.

ಬಿಹಾರದ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು,ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಇದು ಕೊನೆಯ ಅವಕಾಶವಾಗಿದೆ. ಒಂದು ವೇಳೆ ನರೇಂದ್ರ ಮೋದಿ ಗೆದ್ದರೆ ದೇಶದಲ್ಲಿ ಸರ್ವಾಧಿಕಾರ ರಚನೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ನಿತೀಶ್ ಇಂಡಿಯಾ ಒಕ್ಕೂಟ ಬಿಟ್ಟ ಬಗ್ಗೆ ಮಾತನಾಡಿದ ಖರ್ಗೆ “ಒಬ್ಬ ವ್ಯಕ್ತಿ ಮಹಾಘಟಬಂಧನ ಬಿಟ್ಟ ಮಾತ್ರಕ್ಕೆ ನಾವು ದುರ್ಬಲಗೊಳ್ಳುವುದಿಲ್ಲ. ನಾವು ಬಿಜೆಪಿಯನ್ನು ಸೋಲಿಸುತ್ತೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ಇ.ಡಿ.ಯವರು ಪ್ರತಿಯೊಬ್ಬರಿಗೂ ನೋಟಿಸ್ ನೀಡುತ್ತಿದ್ದಾರೆ. ಅವರು ಜನರನ್ನು ಬೆದರಿಸುತ್ತಿದ್ದಾರೆ. ಏಕಂದರೆ ಅವರಿಗೆ ಪಕ್ಷ ಹಾಗೂ ಒಕ್ಕೂಟವನ್ನು ಬಿಟ್ಟು ಹೋಗುತ್ತಾರೆನ್ನುವ ಭಯವಾಗಿದೆ. ಇದು ನಿಮಗೆ ಮತದಾನ ಮಾಡುವ ಕೊನೆಯ ಅವಕಾಶವಾಗಿದೆ. ಇದಾದ ನಂತರ ಮತದಾನ ಮಾಡಲು ಸಾಧ್ಯವಾಗುವುದಿಲ್ಲ” ಎಂದು ಖರ್ಗೆ ಹೇಳಿದರು.

“ರಾಹುಲ್ ಗಾಂಧಿ ಅವರು ಪ್ರೀತಿಯ ಅಂಗಡಿಯ ಮೂಲಕ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಾರೆ.ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ದ್ವೇಷದ ಅಂಗಡಿ ತೆರೆಯುತ್ತಿದ್ದಾರೆ. ಈ ಕಾರಣದಿಂದ ನೀವು ಎಚ್ಚರಿಕೆಯಿಂದ ಇರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X