ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು: ಆರ್‌ಬಿಐ ಆದೇಶ

Date:

Advertisements

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದೆ. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶಿಸಿದೆ.

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಆರ್‌ಬಿಐ “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರೆದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಕ್ರಮ ಕೈಗೊಂಡಿರುವುದನ್ನು” ಉಲ್ಲೇಖಿಸಲಾಗಿದೆ. ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

2022 ಮಾರ್ಚ್‌ 11ರಲ್ಲೇ  ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೂದ್ರ ಸ್ವಾಮಿ ಕೇಸರಿ ಸ್ವಾಮಿಯಾಗುವುದು ತಪ್ಪೇ?

ಬಡ್ಡಿ ಭತ್ಯೆ, ಕ್ಯಾಶ್‌ಬ್ಯಾಕ್ ಅಥವಾ ಮರುಪಾವತಿ ಪಡೆಯುವ ಸೇವೆಗಳನ್ನು ಒಳಗೊಂಡು ಲಭ್ಯವಿರುವ ಬಾಕಿಯನ್ನು ಬಳಸಲು ಬಳಕೆದಾರರಿಗೆ ವಿನಾಯಿತಿ ನೀಡಲಾಗಿದೆ.

ಇದು ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್​ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್​ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್​ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು.

ಆರ್‌ಬಿಐ ಆದೇಶದ ಬಗ್ಗೆ ಪೇಟಿಎಂ ಮಾತೃಸಂಸ್ಥೆ ಒನ್‌97 ಕಮ್ಯೂನಿಕೇಷನ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X