ಕುನಾಲ್ ಕಾಮ್ರಾ ವಿಡಿಯೋ ಹಂಚಿಕೊಂಡವರ ವಿರುದ್ಧ ಪ್ರತೀಕಾರದ ಕ್ರಮ ಕೈಗೊಂಡಿಲ್ಲ: ಬಾಂಬೆ ಹೈಕೋರ್ಟ್‌

Date:

Advertisements

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಟೀಕಿಸಿದ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರ ವಿಡಿಯೋವನ್ನು ಮರು ಹಂಚಿದ, ಅಪ್‌ಲೋಡ್ ಮಾಡಿದ ಕಾರಣಕ್ಕೆ ಯಾವುದೇ ವ್ಯಕ್ತಿಯ ವಿರುದ್ಧ ಪ್ರತೀಕಾರದ ಕ್ರಮ ಕೈಗೊಂಡಿಲ್ಲ ಎಂದು ಬಾಂಬೆ ಹೈಕೋರ್ಟ್ ಬುಧವಾರ ಹೇಳಿದೆ.

ಇತ್ತೀಚೆಗೆ ಕುನಾಲ್ ಕಾಮ್ರಾ ಕಾರ್ಯಕ್ರಮವೊಂದರಲ್ಲಿ ಏಕನಾಥ್ ಶಿಂದೆ ಅವರನ್ನು ತನ್ನ ಪಕ್ಷವನ್ನೇ ಇಬ್ಭಾಗ ಮಾಡಿದ ದ್ರೋಹಿ ಎಂದು ಹೇಳಿದ್ದರು. ಹಾಸ್ಯ ಕಾರ್ಯಕ್ರಮದಲ್ಲಿ ಎಲ್ಲಿಯೂ ಶಿಂದೆ ಹೆಸರನ್ನು ಉಲ್ಲೇಖಿಸದ ಕಾಮ್ರಾ ‘ಥಾಣೆಯ ನಾಯಕ’ ಎಂದಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿವಸೇನೆ ಕಾರ್ಯಕರ್ತರು ಕಾರ್ಯಕ್ರಮ ನಡೆದ ಹೋಟೆಲ್‌ನ ಮೇಲೆ ದಾಳಿ ನಡೆಸಿದ್ದರು.

ಇದನ್ನು ಓದಿದ್ದೀರಾ? ಶಿಂದೆ ಟೀಕೆ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

Advertisements

ಶಿವಸೇನೆ ನಾಯಕರುಗಳು ಕಾಮ್ರಾಗೆ ಜೀವ ಬೆದರಿಕೆ ಹಾಕಿದ್ದರು. ಇವೆಲ್ಲವುದರ ನಡುವೆ ಕಾಮ್ರಾ ವಿರುದ್ಧ ಹಲವು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸದ್ಯ ತನ್ನ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ, ಇದು ವಾಕ್‌ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆರೋಪಿಸಿ ಕುನಾಲ್ ಕಾಮ್ರಾ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಹೋಟೆಲ್‌ ಅಕ್ರಮವಾಗಿದೆ ಎಂದು ಆರೋಪಿಸಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಕೂಡ ಹ್ಯಾಬಿಟ್ಯಾಟ್‌ ಸ್ಟುಡಿಯೋ ಕಟ್ಟಡವನ್ನು ನೆಲಸಮ ಮಾಡಿದೆ.

ಕಾಮ್ರಾ ಮತ್ತು ಹಾಸ್ಯ ಕಾರ್ಯಕ್ರಮ ಚಿತ್ರೀಕರಿಸಿದ ಮುಂಬೈ ಹೋಟೆಲ್ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮವನ್ನು ಪ್ರಶ್ನಿಸಿ 25 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಪಿಐಎಲ್‌ ಸಲ್ಲಿಸಿದ್ದು, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಂ.ಎಸ್ ಕಾರ್ಣಿಕ್ ಅವರ ಪೀಠವು ನಿರಾಕರಿಸಿದೆ.

“ತೊಂದರೆಗೆ ಒಳಗಾದ ವ್ಯಕ್ತಿ (ಕುನಾಲ್ ಕಾಮ್ರಾ) ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಅವರು ಬಡವರಲ್ಲ ಅಥವಾ ಅನಕ್ಷರಸ್ಥರಲ್ಲ. ನೀವು (ಪ್ರಸ್ತುತ ಪಿಐಎಲ್ ಅರ್ಜಿದಾರರು) ಅವರ ಪರವಾಗಿ ಏಕೆ ಹೋರಾಡುತ್ತಿದ್ದೀರಿ? ಅವರು ಪರಿಹಾರಕ್ಕಾಗಿ ಕ್ರಮ ಕೈಗೊಂಡಿದ್ದಾರೆ” ಎಂದು ಹೈಕೋರ್ಟ್ ಹೇಳಿದೆ.

ಕಾನೂನು ವಿದ್ಯಾರ್ಥಿ ಹರ್ಷವರ್ಧನ್ ಖಾಂಡೇಕರ್ ಸಲ್ಲಿಸಿದ ಪಿಐಎಲ್ ಅನ್ನು ವಿಚಾರಣೆ ನಡೆಸಲು ನಿರಾಕರಿಸಿದ ಹೈಕೋರ್ಟ್, ‘ಪ್ರತೀಕಾರಾತ್ಮಕ’ ಕ್ರಮ ಕೈಗೊಂಡಿರುವ ಯಾವುದೇ ನಿದರ್ಶನಗಳಿಲ್ಲ ಎಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X