ನವರಾತ್ರಿ | ಮಧ್ಯಪ್ರದೇಶದ ಪಟ್ಟಣದಲ್ಲಿ ಮಾಂಸಾಹಾರ ನಿಷೇಧ; ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು

Date:

Advertisements

ಭಾನುವಾರದಿಂದ ಪ್ರಾರಂಭವಾಗುವ ಒಂಬತ್ತು ದಿನಗಳ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಮೈಹಾರ್ ಪಟ್ಟಣದಲ್ಲಿ ಎಲ್ಲಾ ಮಾಂಸಾಹಾರಿ ಆಹಾರಗಳನ್ನು ಅಧಿಕಾರಿಗಳು ನಿಷೇಧಿಸಿದ್ದಾರೆ.

ಮೈಹಾರ್‌ನಲ್ಲಿ ಶಾರದಾ ಮಂದಿರವಿದ್ದು ವಾರ್ಷಿಕ ಒಂಬತ್ತು ದಿನಗಳ ‘ಮಾತೆ ಶಾರದಾ ಚೈತ್ರ ನವರಾತ್ರಿ ಜಾತ್ರೆ’ ನಡೆಯಲಿದೆ. ಸಾವಿರಾರು ಭಕ್ತರು ಪಟ್ಟಣಕ್ಕೆ ಭೇಟಿ ನೀಡುತ್ತಾರೆ. ಈ ಒಂಬತ್ತು ದಿನವೂ ಮಾಂಸಾಹಾರ ನಿಷೇಧಿಸಲಾಗಿದೆ.

ಇದನ್ನು ಓದಿದ್ದೀರಾ? ಮಾಂಸಾಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ಕಾಂಗ್ರೆಸ್, ಆರ್‌ಜೆಡಿ ತಿರುಗೇಟು

Advertisements

ಇದಲ್ಲದೆ, ಚೈತಿ ಚಂದ್ (ಮಾರ್ಚ್ 30), ರಾಮ ನವಮಿ (ಏಪ್ರಿಲ್ 6), ಮಹಾವೀರ ಜಯಂತಿ (ಏಪ್ರಿಲ್ 10) ಮತ್ತು ಬುದ್ಧ ಪೂರ್ಣಿಮಾ (ಮೇ 12) ಹಬ್ಬಗಳಂದು ಭೋಪಾಲ್ ಮತ್ತು ಇಂದೋರ್‌ನಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಲಾಗುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ನಗರಗಳಲ್ಲಿ ಮಾಂಸಾಹಾರ ನಿಷೇಧ ಜಾರಿಗೊಳಿಸಲಾಗಿದ್ದು, ಆದೇಶ ಉಲ್ಲಂಘಿಸಿದರೆ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಪುರಸಭೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಹಿಂದೆ ಲೋಕೋಪಯೋಗಿ ಇಲಾಖೆ ಸಚಿವ ರಾಕೇಶ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ಶಾಸಕರು ನವರಾತ್ರಿಯ ಸಮಯದಲ್ಲಿ ರಾಜ್ಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಬೇಕೆಂದು ಒತ್ತಾಯಿಸಿದ್ದರು.

ಇದನ್ನು ಓದಿದ್ದೀರಾ? ರಾಯಚೂರು | ಬಾಡೂಟ ಸೇವಿಸಿ 20 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಈ ನಡುವೆ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮೈಹಾರ್ ಸೇರಿದಂತೆ 17 ಪಟ್ಟಣಗಳಲ್ಲಿ ಮದ್ಯದ ಅಂಗಡಿಗಳನ್ನು ಶಾಶ್ವತವಾಗಿ ಮುಚ್ಚಲಾಗುವುದು ಎಂದು ಸರ್ಕಾರ ಈಗಾಗಲೇ ಘೋಷಿಸಿದೆ.

ಕೆಲವು ಹಬ್ಬಗಳ ಸಂದರ್ಭದಲ್ಲಿ ಬಹುತೇಕ ಜನರು ಮಾಂಸಾಹಾರ ಸೇವಿಸಿದ ಕಾರಣ ಹೆಚ್ಚು ವ್ಯಾಪಾರ ನಡೆಯದೆಂದು ಮಾಂಸದಂಗಡಿಗಳನ್ನು ಮುಚ್ಚುವುದು ರೂಢಿಯಾಗಿತ್ತು. ಆದರೆ ಇತ್ತೀಚೆಗೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಧಾರ್ಮಿಕ ನಂಬಿಕೆ ಹೆಸರಲ್ಲಿ ಹೇರಿಕೆಯಾಗಿ ಮಾಡಲಾಗುತ್ತಿದೆ. ಪರವಾನಗಿ ರದ್ದು ಪಡಿಸುವಂತಹ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಈ ವಿಚಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಧಾರ್ಮಿಕ ನಂಬಿಕೆಗೆ ಗೌರವ ನೀಡಬೇಕು ಎನ್ನುವವರು ಕೆಲವರಿದ್ದರೆ, ಇನ್ನೂ ಕೆಲವರು ತಮ್ಮ ನಂಬಿಕೆಯನ್ನು ಎಲ್ಲರ ಮೇಲೆ ಹೇರುವುದು ಸರಿಯಲ್ಲ ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X