ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ: 36 ಸಾವು, ಸಂಕಷ್ಟದಲ್ಲಿ ಸಿಲುಕಿದ ಐದು ಲಕ್ಷಕ್ಕೂ ಹೆಚ್ಚು ಮಂದಿ

Date:

Advertisements

ಈಶಾನ್ಯ ರಾಜ್ಯಗಳಲ್ಲಿ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತ ಉಂಟಾಗಿದೆ. ಸೋಮವಾರವರೆಗೆ ಮಳೆ ಆರ್ಭಟಕ್ಕೆ 36 ಮಂದಿ ಬಲಿಯಾಗಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ 5,50,000ಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಅಸ್ಸಾಂನಲ್ಲಿ 11, ಅರುಣಾಚಲ ಪ್ರದೇಶದಲ್ಲಿ 10, ಮೇಘಾಲಯದಲ್ಲಿ ಆರು, ಮಿಜೋರಾಂನಲ್ಲಿ ಐದು, ಸಿಕ್ಕಿಂನಲ್ಲಿ ಮೂರು ಮತ್ತು ತ್ರಿಪುರದಲ್ಲಿ ಒಂದು ಸಾವು ಸಂಭವಿಸಿದೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಿಎಂ ಕೇರ್ಸ್ ನಿಧಿಯ ಬಗ್ಗೆ ಪ್ರಶ್ನಿಸಿದ್ದಾರೆ. ಸಂತ್ರಸ್ತರಿಗೆ ಈ ನಿಧಿಯ ಮೂಲಕ ಸಹಾಯ ಮಾಡುವಂತೆ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಹಠಾತ್ ಪ್ರವಾಹ ಭೀತಿ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ರೆಡ್‌ ಅಲರ್ಟ್‌

Advertisements

ಅಸ್ಸಾಂನಲ್ಲಿ ಅಪಾಯದ ಮಟ್ಟ ದಾಟಿದ 15 ನದಿಗಳು

ಅಸ್ಸಾಂನಲ್ಲಿ 15 ನದಿಗಳು ಅಪಾಯದ ಮಟ್ಟಕ್ಕಿಂತ ಹೆಚ್ಚು ಹರಿಯುತ್ತಿವೆ ಎಂದು ರಾಜ್ಯದ ಅಧಿಕೃತ ಬುಲೆಟಿನ್ ಹೇಳಿದೆ. ಹಾಗೆಯೇ 22 ಜಿಲ್ಲೆಗಳಲ್ಲಿ 535,000ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ ಎಂದು ತಿಳಿಸಿದೆ. ಹಲವು ಪ್ರದೇಶಗಳಲ್ಲಿ ರಸ್ತೆ, ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.

ಸಿಕ್ಕಿಂನಲ್ಲಿ ಮೂವರು ಸೇನಾ ಸಿಬ್ಬಂದಿಗಳು ಸಾವು, 9 ಮಂದಿ ನಾಪತ್ತೆ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ, ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ಮೃತರನ್ನು ಹವಾಲ್ದಾರ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಎಂದು ಗುರುತಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಲಾಚುಂಗ್ ಮತ್ತು ಚುಂಗ್ಥಾಂಗ್ ಪಟ್ಟಣಗಳಲ್ಲಿ ಸಿಲುಕಿಕೊಂಡಿದ್ದ 1,678 ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಭೂಕುಸಿತದಿಂದಾಗಿ ಪ್ರವಾಸಿ ತಾಣಗಳಿಗೆ ಹೋಗುವ ರಸ್ತೆ, ಸೇತುವೆಗಳಿಗೆ ಭಾರೀ ಹಾನಿಯಾಗಿದೆ. ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ನೀರು 35-40 ಅಡಿಗಳಷ್ಟು ಏರಿಕೆಯಾಗಿ ಪ್ರಾದೇಶಿಕ ಸಂಪರ್ಕ ಕಡಿತಗೊಂಡಿದೆ. ರಸ್ತೆ ಮತ್ತು ಹವಾಮಾನ ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರವೇ ಪ್ರವಾಸಿಗರು ಪ್ರಯಾಣಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಇದನ್ನು ಓದಿದ್ದೀರಾ? ಮಣಿಪುರ | ನಿರಾಶ್ರಿತರ ಕೇಂದ್ರಗಳಿಗೆ ರಾಹುಲ್ ಗಾಂಧಿ ಭೇಟಿ; ಸಂತ್ರಸ್ತರೊಂದಿಗೆ ಸಂವಾದ

ಮಣಿಪುರದಲ್ಲಿ 19,000 ಮಂದಿ ಸ್ಥಳಾಂತರ

ಮಣಿಪುರದಲ್ಲಿ, ಪ್ರವಾಹ ಕಾರಣ 19,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. 3,365 ಮನೆಗಳು ಮತ್ತು 103 ಪ್ರದೇಶಗಳಿಗೆ ಹಾನಿಯಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಲ್ಪಟ್ಟವರಿಗೆ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶಿಬಿರಗಳನ್ನು ಸ್ಥಾಪಿಸಲಾಗಿದೆ. ನಿರಂತರ ಮಳೆಯಿಂದಾಗಿ ಇಂಫಾಲ್ ನದಿ ಒಡ್ಡು ಅನೇಕ ಬಾರಿ ಒಡೆದು, ಇಂಫಾಲ್ ಪೂರ್ವವನ್ನು ಮುಳುಗಿಸಿದೆ.

ಅರುಣಾಚಲ ಪ್ರದೇಶದಲ್ಲಿ ಹತ್ತು ಮಂದಿ ಸಾವು

ಅರುಣಾಚಲ ಪ್ರದೇಶದಲ್ಲಿ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. 23 ಜಿಲ್ಲೆಗಳಾದ್ಯಂತ 156 ಹಳ್ಳಿಗಳ 938 ನಿವಾಸಿಗಳು ಬಾಧಿತರಾಗಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ. ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ತ್ರಿಪುರ ಮತ್ತು ಮಿಜೋರಾಂ ಪ್ರವಾಹ ಸ್ಥಿತಿ

ತ್ರಿಪುರದಲ್ಲಿ, ಮಳೆ ಕಡಿಮೆಯಾಗಿ ನದಿಗಳ ಮಟ್ಟ ಕಡಿಮೆಯಾಗುತ್ತಿದ್ದಂತೆ ಪರಿಸ್ಥಿತಿ ಸುಧಾರಿಸುತ್ತಿದೆ. ಆದರೂ 10,000ಕ್ಕೂ ಹೆಚ್ಚು ಜನರು ಪರಿಹಾರ ಶಿಬಿರಗಳಲ್ಲಿ ಉಳಿದಿದ್ದಾರೆ. ವಿಪತ್ತು ನಿರ್ವಹಣಾ ಉಸ್ತುವಾರಿ ಶರತ್ ದಾಸ್ ಅವರು 66 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನವು ಪಶ್ಚಿಮ ತ್ರಿಪುರದಲ್ಲಿವೆ ಎಂದು ಹೇಳಿದ್ದಾರೆ.

ಮಿಜೋರಾಂನಲ್ಲಿ, ಭಾರೀ ಮಳೆಯಿಂದಾಗಿ 212 ರಸ್ತೆಗಳನ್ನು ಮುಚ್ಚಲಾಗಿದೆ, ಶಾಲೆಗಳನ್ನು ಮುಚ್ಚಲಾಗಿದೆ. ಮೇ 24ರಿಂದ ಮೂವರು ಮಯನ್ಮಾರ್ ನಿರಾಶ್ರಿತರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X