ಅಶ್ಲೀಲ ಪ್ರಶ್ನೆ: ಯೂಟ್ಯೂಬರ್ ರಣವೀರ್ ಸೇರಿ 40 ಮಂದಿ ವಿರುದ್ಧ ಎಫ್‌ಐಆರ್ ದಾಖಲು

Date:

Advertisements

ಮಹಾರಾಷ್ಟ್ರದಲ್ಲಿ ಯೂಟ್ಯೂಬರ್‌ಗಳು ನಡೆಸುವ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರಿಗೆ ಅಶ್ಲೀಲ ಮತ್ತು ಅಸಹ್ಯಕರವಾಗಿ ಪ್ರಶ್ನೆ ಕೇಳಿದ್ದ ಯೂಟ್ಯೂಬರ್ ರಣವೀರ್ ಸೇರಿದಂತೆ 40 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ಸೈಬರ್ ಕ್ರೈಮ್ ಘಟಕದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ರಣವೀರ್‌ ಅಲ್ಲಾಬಾಡಿಯಾ ಸೇರಿದಂತೆ ಹಲವರಿಗೆ ಮಹಿಳಾ ಆಯೋಗವು ಸಮನ್ಸ್‌ ಕೂಡ ಜಾರಿ ಮಾಡಿದೆ.

ಹಾಸ್ಯನಟ ಸಮಯ್ ರೈನಾ ನಡೆಸಿಕೊಡುವ ಕಾರ್ಯಕ್ರಮದಲ್ಲಿ ತೀರ್ಪುಗಾರಾಗಿದ್ದ ರಣವೀರ್ ಅಲ್ಲಾಬಾಡಿಯಾ ಸ್ಪರ್ಧಿಯೊಬ್ಬನಿಗೆ ಅಶ್ಲೀಲವಾಗಿ ಪ್ರಶ್ನೆ ಕೇಳಿದ್ದರು. “ನಿಮ್ಮ ತಂದೆ-ತಾಯಿ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುವ ಮೂಲಕ ದಿನ ದೂಡುತ್ತೀರಾ? ಅಥವಾ ನೀವು ಕೂಡ ಅವರೊಂದಿಗೆ ಸೇರಿಕೊಳ್ಳಲು ಇಚ್ಛಿಸುತ್ತೀರಾ?” ಎಂದು ಹೇಳಿದ್ದರು. ಅವರ ಪ್ರಶ್ನೆಯಿಂದ ಸ್ಪರ್ಧಿ ಮುಜುಗರಕ್ಕೊಳಗಾಗಿ, ತಲೆ ತಗ್ಗಿಸಿ ನಿಂತಿದ್ದರು. ಆದಾಗ್ಯೂ, ಉಳಿದ ತೀರ್ಪುಗಾರರ ರಣವೀರ್ ಪ್ರಶ್ನೆಗೆ ಚಪ್ಪಾಳೆ ತಟ್ಟಿ, ಹಾಸ್ಯ ಮಾಡಿ ರಂಜಿಸಿದ್ದರು.

ಆ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಯೂಟ್ಯೂಬರ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ, ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅಲ್ಲದೆ, ರಣವೀರ್ ಅಲ್ಲಾಬಾಡಿಯಾ, ಸಮಯ್ ರೈನಾ, ಅಪೂರ್ವ ಮುಖಿಜಾ, ಆಶಿಶ್ ಚಂಚಲಾನಿ, ಜಸ್ಪ್ರೀತ್ ಸಿಂಗ್ ಮತ್ತು ಕಾರ್ಯಕ್ರಮದ ನಿರ್ಮಾಪಕರಿಗೆ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿದೆ.

Advertisements

“ಇಂತಹ ಹೇಳಿಕೆಯು ಸಮಾನತೆ ಮತ್ತು ಪರಸ್ಪರ ಗೌರವವನ್ನು ಎತ್ತಿಹಿಡಿಯುವ ಸಮಾಜದ ಮೌಲ್ಯಗಳನ್ನು ಉಲ್ಲಂಘಿಸುತ್ತದೆ. ಆರೋಪಿಗಳು ಫೆಬ್ರವರಿ 17ರಂದು ಖುದ್ದಾಗಿ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಬೇಕು” ಎಂದು ಆಯೋಗ ಸೂಚಿಸಿದೆ.

ಈವರೆಗೆ ಕಾರ್ಯಕ್ರಮವು 18 ಸಂಚಿಕೆಗಳಲ್ಲಿ ಪ್ರಸಾರವಾಗಿದ್ದು, ಆ ಎಲ್ಲ ಸಂಚಿಕೆಗಳನ್ನು ಯೂಟ್ಯೂಬ್‌ನಿಂದ ತೆಗೆದುಹಾಕುವಂತೆ ಸೈಬರ್ ಕ್ರೈಮ್ ಘಟಕವು ಸೂಚಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X