ಚಿಕ್ಕಪ್ಪನ ಶಿರಚ್ಛೇದ ಮಾಡಿ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಆರೋಪಿ!

Date:

Advertisements

ಯುವಕನೋರ್ವ ಚಿಕ್ಕಪ್ಪನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ, ಶಿರಚ್ಛೇದ ಮಾಡಿ, ನಂತರ ಅವರ ಕತ್ತರಿಸಿದ ರುಂಡವನ್ನು ಪೊಲೀಸ್ ಠಾಣೆಗೆ ತಂದು ಶರಣಾಗಿರುವ ಘಟನೆ ಒಡಿಶಾದ ಕಿಯೋಂಝಾರ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ಕಬಿ ದೇಹುರಿ ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ತನ್ನ ಚಿಕ್ಕಪ್ಪ ಹರಿ ದೇಹುರಿಯನ್ನು ಹಳೆ ದ್ವೇಷದಿಂದ ಕೊಂದಿದ್ದಾನೆ ಎಂದು ಹೇಳಲಾಗಿದೆ. ಗ್ರಾಮಸ್ಥರು ಸಾಂಪ್ರದಾಯಿಕ ನೃತ್ಯವಾದ ದಂಡ ನಾಚಾವನ್ನು ನೋಡುವುದರಲ್ಲಿ ಮಗ್ನರಾಗಿದ್ದಾಗ ಕಬಿ ತನ್ನ ಚಿಕ್ಕಪ್ಪನನ್ನು ಸುಳ್ಳು ಕಾರಣ ಹೇಳಿ ಹತ್ತಿರದ ಹೊಲಕ್ಕೆ ಕರೆದೊಯ್ದಿದ್ದಾನೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ವಿವಾಹೇತರ ಸಂಬಂಧಕ್ಕೆ ಒಪ್ಪದ ಮಹಿಳೆಯ ಶಿರಚ್ಛೇದ; ಸೋದರ ಮಾವನೇ ಎಸಗಿದ ಹತ್ಯೆ

Advertisements

ಹೊಲದಲ್ಲಿ ಯಾರೂ ಇಲ್ಲದನ್ನು ನೋಡಿ ಹರಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಅವನ ಶಿರಚ್ಛೇದ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ರುಂಡವನ್ನು ಸುವಾಕತಿ ಪೊಲೀಸ್ ಠಾಣೆಗೆ ಕೊಂಡೊಯ್ದು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣ ಕಬಿಯನ್ನು ಬಂಧಿಸಿ ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.

“ನಮ್ಮ ಸೋದರಳಿಯ ನನ್ನ ಸಹೋದರನನ್ನು ಕಡಿದು ಕೊಂದಿದ್ದಾನೆಂದು ರಾತ್ರಿ ನನಗೆ ತಿಳಿಯಿತು. ಅವರ ನಡುವೆ ಹಲವು ವಿಷಯಗಳಲ್ಲಿ ನಿರಂತರವಾಗಿ ಜಗಳವಾಗುತ್ತಿತ್ತು” ಎಂದು ಆರೋಪಿಯ ಮತ್ತೊಬ್ಬ ಚಿಕ್ಕಪ್ಪ ಅರ್ಜುನ್ ದೇಹುರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

“ಕೊಲೆ ಮಾಡಿದ ನಂತರ ಆರೋಪಿ ಶರಣಾಗಿದ್ದಾನೆ. ಸುವಾಕತಿ ಪೊಲೀಸ್ ಠಾಣೆಗೆ ಕತ್ತರಿಸಿದ ರುಂಡವನ್ನು ಚೀಲದಲ್ಲಿ ಹೊತ್ತುಕೊಂಡು ಬಂದಿದ್ದಾನೆ. ಆತನನ್ನು ಬಂಧಿಸಿದ್ದೇವೆ. ಭೂ ವಿವಾದದ ಬಗ್ಗೆ ಅವರ ನಡುವೆ ಜಗಳ ನಡೆದಿದ್ದು, ಅದು ಕೊಲೆಗೆ ಕಾರಣವಾಗಿದೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಅಧಿಕಾರಿ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮ ನಿಮ್ಮ ಈ ದಿನ.ಕಂ ಸುದ್ದಿಯು ಅತ್ಯಂತ ಅದ್ಭುತವಾಗಿದೆ ಬೆಳಗೆದ್ದ ತಕ್ಷಣ ನಿಮ್ಮ ಸುದ್ದಿಯನ್ನು ಓದಿದರೆ ಮನಸ್ಸಿಗೆ ನೆಮ್ಮದಿ ಅರಿಸುತ್ತೆ, ಕರ್ನಾಟಕ ನಂಬರ್ ಒನ್ ಸುದ್ದಿ ಎಂದರೆ ಈ ದಿನ.com 🙏

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X