ಓಂ ಬಿರ್ಲಾ vs ಕೆ ಸುರೇಶ್: ಇಂದು ಲೋಕಸಭೆ ಸ್ಪೀಕರ್ ಚುನಾವಣೆ, ಗೆಲ್ಲಲು ಎಷ್ಟು ಮತ ಅಗತ್ಯ?

Date:

Advertisements

ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಇಂದು ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಕೆ ಸುರೇಶ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳ ಇಂಡಿಯಾ ಒಕ್ಕೂಟದ ನಡುವೆ ಸ್ಪೀಕರ್ ಸ್ಥಾನದ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗದ ಕಾರಣ ಇಂಡಿಯಾ ಒಕ್ಕೂಟವು ತನ್ನ ಅಭ್ಯರ್ಥಿಯನ್ನು ಸ್ಪೀಕರ್ ಚುನಾವಣೆಗೆ ನಿಲ್ಲಿಸಲು ನಿರ್ಧರಿಸಿದೆ.

ಪ್ರತಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡಲು ಸರ್ಕಾರ ಒಪ್ಪದ ಕಾರಣ ಮಾತುಕತೆ ಮುರಿದು ಬಿದ್ದಿದೆ. ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಇಂದು (ಬುಧವಾರ) ಬೆಳಗ್ಗೆ 11 ಗಂಟೆಗೆ ಚುನಾವಣೆ ನಡೆಯಲಿದೆ.

Advertisements

ಇದನ್ನು ಓದಿದ್ದೀರಾ?  ಲೋಕಸಭೆ ಸ್ಪೀಕರ್ ಸ್ಥಾನ : ವಿಪಕ್ಷದಿಂದ ಕಾಂಗ್ರೆಸ್‌ನ ಕೆ ಸುರೇಶ್, ಎನ್‌ಡಿಎನಿಂದ ಓಂ ಬಿರ್ಲಾ ಪುನಃ ಕಣಕ್ಕೆ

ಗೆಲ್ಲಲು ಎಷ್ಟು ಮತ ಅಗತ್ಯ?

ಎನ್‌ಡಿಎ ಲೋಕಸಭೆಯಲ್ಲಿ ಬಹುಮತವನ್ನು ಹೊಂದಿದೆ. ಹೀಗಿರುವಾಗ ಓಂ ಬಿರ್ಲಾ ಅವರನ್ನು ಆಯ್ಕೆ ಮಾಡುವಲ್ಲಿ ಎನ್‌ಡಿಎ ತೊಂದರೆ ಇದ್ದಂತಿಲ್ಲ. ಆದರೆ ಇಂಡಿಯಾ ಒಕ್ಕೂಟಕ್ಕೆ ಸವಾಲಿನ ಹಾದಿಯಿದೆ. ಚುನಾವಣೆಯಲ್ಲಿ ಗೆಲ್ಲಲು 271 ಮತಗಳು ಅಗತ್ಯವಾಗಿದೆ. ಅಂದರೆ 542 ಸಂಸದರ ಅರ್ಧ ಭಾಗದಷ್ಟು ಮತಗಳು ಪಡೆಯುವುದು ಅಗತ್ಯ. ಕೆಳಮನೆಯಲ್ಲಿ ಎನ್‌ಡಿಎ 293 ಸದಸ್ಯರನ್ನು ಹೊಂದಿದ್ದರೆ, ಇಂಡಿಯಾ ಒಕ್ಕೂಟ 233 ಸದಸ್ಯರನ್ನು ಹೊಂದಿದೆ.

ಇಂಡಿಯಾ ಮೈತ್ರಿಕೂಟದ 5 ಮಂದಿ ಸೇರಿದಂತೆ ಇನ್ನೂ 7 ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕಿದೆ. ಸ್ಪೀಕರ್ ಆಯ್ಕೆಯಾದ ನಂತರ ಈ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದಲ್ಲದೆ ರಾಹುಲ್ ಗಾಂಧಿ ರಾಯ್‌ಬರೇಲಿ ಮತ್ತು ವಯನಾಡು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ರಾಯ್‌ಬರೇಲಿಯಲ್ಲಿ ಸಂಸದರಾಗುವ ನಿರ್ಧಾರ ಮಾಡಿದ್ದರಿಂದ ವಯನಾಡು ಲೋಕಸಭಾ ಸ್ಥಾನವು ಈಗ ಖಾಲಿಯಾಗಿದೆ. ವಯನಾಡು ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ಇನ್ನಷ್ಟೇ ನಡೆಯಬೇಕಿದೆ.

ಇದನ್ನು ಓದಿದ್ದೀರಾ?  ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ: ವಿಪಕ್ಷಗಳ ವಿರೋಧ

ಆಡಳಿತಾರೂಢ ಎನ್‌ಡಿಎ ಅಥವಾ ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಭಾಗವಲ್ಲದ ವೈಎಸ್‌ಆರ್‌ಸಿಪಿ ಚುನಾವಣೆಯಲ್ಲಿ ಓಂ ಬಿರ್ಲಾ ಅವರನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದಲ್ಲದೆ ಟಿಎಂಸಿ ಜೊತೆ ಸ್ಪೀಕರ್ ಸ್ಥಾನಕ್ಕೆ ಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಮೊದಲು ಸಮಾಲೋಚನೆ ನಡೆಸದಿರುವ ಬಗ್ಗೆ ಅಸಮಾಧಾನವಿದೆ.

ಇದು ಕಾಂಗ್ರೆಸ್ ಪಕ್ಷದ ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ. “ಈ ಬಗ್ಗೆ ನಮ್ಮನ್ನು ಸಂಪರ್ಕಿಸಿಲ್ಲ, ಯಾವುದೇ ಚರ್ಚೆ ನಡೆದಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ” ಎಂದು ಬ್ಯಾನರ್ಜಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X