ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿವರೆಗೂ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

Date:

Advertisements

ಆಪರೇಷನ್ ಸಿಂಧೂರ ಕಾರ್ಯಾಚರಣೆ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ. ಬದಲಾಗಿ ಭಾರತದ ರಾಜಕೀಯ, ಸಾಮಾಜಿಕ ಹಾಗೂ ಮಿಲಿಟರಿ ಇಚ್ಛಾಶಕ್ತಿಯ ಸಂಕೇತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಲಕ್ನೋದಲ್ಲಿ ಭಾನುವಾರ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, “ಭಯೋತ್ಪಾದನೆಯ ವಿರುದ್ಧ ದೇಶದ ದೃಢ ಸಂಕಲ್ಪ ಮಾಡಿದೆ” ಎಂದರು.

“ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಗಿನ ಭಾರತ ವಿರೋಧಿ ಶಕ್ತಿಗಳಿಗೆ ನಿರ್ಣಾಯಕ ಹೊಡೆತ ನೀಡಿವೆ. ಇಂದು ಭಾರತ ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ. ನಾವು ನಿರಂತರವಾಗಿ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.

Advertisements

“ನಮ್ಮ ದೇಶದ ಮೇಲೆ ದಾಳಿ ಮಾಡಿ ಅನೇಕ ಕುಟುಂಬಗಳ ಸದಸ್ಯರನ್ನು ಹೊಡೆದ ಭಯೋತ್ಪಾದಕ ಸಂಘಟನೆಗಳನ್ನು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಸದೆಬಡಿದು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಿವೆ. ಇಡೀ ರಾಷ್ಟ್ರ ಇಂದು ಭಾರತೀಯ ಪಡೆಗಳ ಶೌರ್ಯಕ್ಕೆ ವಂದಿಸುತ್ತಿದೆ” ಎಂದರು.

“ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಯನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಪಡೆಗಳು ಆಪರೇಷನ್ ಸಿಂಧೂರ ಪ್ರಾರಂಭಿಸಿದವು. ನಾವು ಎಂದಿಗೂ ಪಾಕಿಸ್ತಾನದ ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ, ಪಾಕಿಸ್ತಾನವು ಭಾರತೀಯ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ್ದಲ್ಲದೆ, ದೇವಾಲಯಗಳು ಮತ್ತು ಗುರುದ್ವಾರಗಳ ಮೇಲೂ ದಾಳಿ ಮಾಡಲು ಪ್ರಯತ್ನಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಪಡೆಗಳು ಧೈರ್ಯ ಮತ್ತು ಸಂಯಮ ಪ್ರದರ್ಶಿಸಿದವು. ಪಾಕಿಸ್ತಾನದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿ ಸೂಕ್ತ ಉತ್ತರ ನೀಡಿದವು” ಎಂದು ಹೇಳಿದರು.

“ಭಾರತ ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಂಡಾಗಲೆಲ್ಲ ಗಡಿಯಾಚೆಗಿನ ಪ್ರದೇಶಗಳು ಭಯೋತ್ಪಾದಕರು ಮತ್ತು ಅವರ ಮಾಸ್ಟರ್​ಮೈಂಡ್​ಗಳಿಗೆ ಸುರಕ್ಷಿತವಾಗಿರುವುದಿಲ್ಲ ಎಂಬುದನ್ನು ಈ ಕಾರ್ಯಾಚರಣೆ ಮತ್ತೆ ತೋರಿಸಿದೆ” ಎಂದು ತಿಳಿಸಿದರು.

“ನಾವು ನಮ್ಮ ಕಾರ್ಯಾಚರಣೆಗಳನ್ನು ಗಡಿಯ ಸಮೀಪವಿರುವ ಮಿಲಿಟರಿ ನೆಲೆಗಳಿಗೆ ಮಾತ್ರ ಸೀಮಿತಗೊಳಿಸಲಿಲ್ಲ. ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿ ಇರುವ ರಾವಲ್ಪಿಂಡಿಯವರೆಗೂ ಭಾರತದ ಮಿಲಿಟರಿ ಕಾರ್ಯಾಚರಣೆಯ ಪ್ರತಿಧ್ವನಿ ಕೇಳಿಬಂದಿದೆ. ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಯತ್ನಿಸುವವರಿಗೆ ಏನಾಗುತ್ತದೆ ಎಂಬುದನ್ನು ಇಡೀ ಜಗತ್ತು ನೋಡಿದೆ” ಎಂದರು.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಘಟನೆಗೆ ಪ್ರತಿಯಾಗಿ ಭಾರತ ಮೇ 7ರಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪ್ರಾರಂಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X