ಆಪರೇಷನ್ ಸಿಂಧೂರ | ಕಾರ್ಯಾಚರಣೆ ಮಾಹಿತಿ ವಿವರಿಸಿದ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ

Date:

Advertisements

ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತ ಸೇನೆಯು ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಕುರಿತು ಬುಧವಾರ ಸುದ್ದಿಗೋಷ್ಟಿಯಲ್ಲಿ ವಿವರಿಸಿದವರಲ್ಲಿ ಕರ್ನಲ್ ಸೋಫಿಯಾ ಖುರೇಶಿ ಕೂಡ ಒಬ್ಬರು. ಹೆಮ್ಮೆಯ ಸಂಗತಿ ಎಂದರೆ, ಅವರು ಕರ್ನಾಟಕದ ಬೆಳಗಾವಿ ಜಿಲ್ಲೆಯ ಸೊಸೆ.

ಸೋಫಿಯಾ ಅವರ ಪತಿ ತಾಜುದ್ದೀನ್ ಬಾಗೇವಾಡಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು ಅವರು ತಿಳಿದುಬಂದಿದೆ. ಸೋಫಿಯಾ ಮತ್ತು ತಾಜುದ್ದೀನ್ ಇಬ್ಬರೂ ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸೋಫಿಯಾ ಅವರು ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸೋಫಿಯಾ ಮತ್ತು ತಾಜುದ್ದೀನ್ ಪರಿಸ್ಪರ ಪ್ರೀತಿಸಿ, 2015ರಲ್ಲಿ ವಿವಾಹವಾಗಿದ್ದಾರೆ.

Advertisements

ಸೋಫಿಯಾ ಅವರು ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಕಾರ್ಪ್ಸ್ ಆಫ್ ಸಿಗ್ನಲ್ಸ್‌ನ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರು 2016ರಲ್ಲಿ ಈ ಇತಿಹಾಸವನ್ನು ಬರೆದಿದ್ದಾರೆ. ಏಷ್ಯನ್ ಪ್ಲಸ್ ಬಹುರಾಷ್ಟ್ರೀಯ ಕ್ಷೇತ್ರ ತರಬೇತಿಯಲ್ಲಿ ಭಾಗಿಯಾದ ಮಹಿಳಾ ಅಧಿಕಾರಿ ಖುರೇಷಿ. ಈ ತರಬೇತಿಯಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ಆದರೆ ಏಕೈಕ ಮಹಿಳಾ ಕಮಾಂಡರ್ ಖುರೇಷಿ ಆಗಿದ್ದರು. ಆಗ ಅವರ ವಯಸ್ಸು 35 ಆಗಿತ್ತು. ಶಾಂತಿಪಾಲನಾ ಕಾರ್ಯಾಚರಣೆಗಳಿಗೆ ತರಬೇತಿ ಮಾಹಿತಿಗಳನ್ನು ಒದಗಿಸುವಲ್ಲಿ ಅವರ ಪಾತ್ರ ಮಹತ್ತರ. ಕರ್ನಲ್ ಸೋಫಿಯಾ ಖುರೇಷಿ ಹಲವು ವರ್ಷಗಳ ಕಾಲ ಸೇನೆಯಲ್ಲಿ ತರಬೇತಿ ಅನುಭವ ಹೊಂದಿದ್ದಾರೆ.

ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರು ಧರ್ಮವನ್ನು ಕೇಳಿ ಪತ್ನಿ, ಮಕ್ಕಳ ಎದುರೇ ಪುರುಷರನ್ನು ಕೊಂದಿದ್ದಾರೆ. ಈ ದಾಳಿಯ ಬಳಿಕ ನವವಿಹಾಹಿತೆ ಸೇರಿ 25 ಮಹಿಳೆಯರು ವಿಧವೆಯರಾಗಿದ್ದಾರೆ. ಈ ಮಹಿಳೆಯರ ಸಿಂಧೂರವನ್ನು ಅಳಿಸಲಾಗಿದೆ ಎಂಬ ಬಿಂಬವಾಗಿ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X