ಖಲಿಸ್ತಾನ್ ನಾಯಕ ಅಮೃತ್‌ಪಾಲ್‌ ಬಂಧನಕ್ಕೆ ಸಜ್ಜು; ಪಂಜಾಬ್‌ನಾದ್ಯಂತ ಇಂಟರ್‌ನೆಟ್‌ ಸ್ಥಗಿತ

Date:

Advertisements
  • ಅಹಿತಕರ ಘಟನೆಗಳನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ನಾಳೆಯವರೆಗೂ ಇಂಟರ್‌ನೆಟ್‌ ಸ್ಥಗಿತ
  • ‘ವಾರಿಸ್ ಪಂಜಾಬ್‌ ದೇ’ ಎಂಬ ಮೂಲಭೂತ ಸಂಘಟನೆಯ ನೇತೃತ್ವ ವಹಿಸಿರುವ ಅಮೃತಪಾಲ್ ಸಿಂಗ್

ಖಲಿಸ್ತಾನ್ ಪ್ರಮುಖ ನಾಯಕ ಅಮೃತ್‌ ಪಾಲ್‌ ಬಂಧನಕ್ಕೆ ಪಂಜಾಬ್‌ ಪೊಲೀಸರು ತೀವ್ರಗತಿಯಲ್ಲಿ ಸಜ್ಜಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಈಗಾಗಲೇ ಅಮೃತ್‌ಪಾಲ್‌ ಸಿಂಗ್‌ನ 6 ಕ್ಕೂ ಹೆಚ್ಚು ಸಹಚರರನ್ನು ಬಂಧಿಸಲಾಗಿದೆ. ಅಹಿತಕರ ಘಟನೆಗಳನ್ನು ತಡೆಯಲು ಪಂಜಾಬ್‌ನಲ್ಲಿ  ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಪಂಜಾಬ್‌ನ ಏಳು ಜಿಲ್ಲೆಗಳಲ್ಲಿ ಅಮೃತಪಾಲ್ ಸಿಂಗ್ ಸಹಚರರ ಬಂಧನಕ್ಕೆ ಬಲೆ ಬೀಸಲಾಗಿದೆ. ಜಲಂಧರ್‌ನ ಶಾಹಕೋಟ್‌ನ ಮೆಹತ್‌ಪುರ ಗ್ರಾಮದಲ್ಲಿ ಈತನ ಸಹಚರರನ್ನು ಪೊಲೀಸರು ಸುತ್ತುವರೆದಿದ್ದಾರೆ. ಅಮೃತಪಾಲ್ ಸಿಂಗ್ ಶಾಹಕೋಟ್‌ಗೆ ಭೇಟಿಯ ಮುನ್ಸೂಚನೆ ಇದ್ದ ಕಾರಣ ಪೊಲೀಸರು ಶಾಹಕೋಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಎಲ್ಲಾ ರಸ್ತೆಗಳನ್ನು ಮುಚ್ಚಿ ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

Advertisements

ತನ್ನ ಪ್ರಮುಖ ಸಹಚರ, ಅಪಹರಣದಲ್ಲಿ ಭಾಗಿಯಾಗಿರುವ ಆರೋಪಿ ಲವ್‌ಪ್ರೀತ್ ಸಿಂಗ್ ಬಂಧನದ ವಿರುದ್ಧ ಅಮೃತಪಾಲ್ ಸಿಂಗ್, ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಖಡ್ಗ, ಬಂದೂಕು, ಬಡಿಗೆ ಹಿಡಿದು ಅಮೃತಸರದ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಲವ್‌ಪ್ರೀತ್ ಸಿಂಗ್ ಬಿಡುಗಡೆಗೆ ಆಗ್ರಹಿಸಿದ್ದ. ವಾರಿಸ್ ಪಂಜಾಬ್ ದೇ ಸಂಘಟನೆ ಹೋರಾಟಕ್ಕೆ ಬೆದರಿದ ಪಂಜಾಬ್ ಪೊಲೀಸ್, ಒಂದು ದಿನದಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಪಂಜಾಬ್ ಪೊಲೀಸರ ಮನವಿ ಪುರಸ್ಕರಿಸಿದ ಅಜ್ನಾಲ ಕೋರ್ಟ್, ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿತ್ತು.

ಅಮೃತಪಾಲ್ ಸಿಂಗ್ ‘ವಾರಿಸ್ ಪಂಜಾಬ್‌ ದೇ’ ಎಂಬ ಮೂಲಭೂತ ಸಂಘಟನೆಯ ನೇತೃತ್ವ ವಹಿಸಿದ್ದಾನೆ. ಕಳೆದ ವರ್ಷ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಟ ಹಾಗೂ ಕಾರ್ಯಕರ್ತ ದೀಪ್ ಸಿಧು ಆರಂಭಿಸಿದ್ದ ‘ವಾರಿಸ್ ಪಂಜಾಬ್‌ ದೇ’ ಸಂಘಟನೆಯನ್ನು ಈತ ಮುನ್ನಡೆಸುತ್ತಿದ್ದಾನೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X