ಖಲಿಸ್ತಾನ್ ನಾಯಕ ಅಮೃತ್‌ಪಾಲ್‌ ಬಂಧನಕ್ಕೆ ಸಜ್ಜು; ಪಂಜಾಬ್‌ನಾದ್ಯಂತ ಇಂಟರ್‌ನೆಟ್‌ ಸ್ಥಗಿತ

Date:

  • ಅಹಿತಕರ ಘಟನೆಗಳನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ನಾಳೆಯವರೆಗೂ ಇಂಟರ್‌ನೆಟ್‌ ಸ್ಥಗಿತ
  • ‘ವಾರಿಸ್ ಪಂಜಾಬ್‌ ದೇ’ ಎಂಬ ಮೂಲಭೂತ ಸಂಘಟನೆಯ ನೇತೃತ್ವ ವಹಿಸಿರುವ ಅಮೃತಪಾಲ್ ಸಿಂಗ್

ಖಲಿಸ್ತಾನ್ ಪ್ರಮುಖ ನಾಯಕ ಅಮೃತ್‌ ಪಾಲ್‌ ಬಂಧನಕ್ಕೆ ಪಂಜಾಬ್‌ ಪೊಲೀಸರು ತೀವ್ರಗತಿಯಲ್ಲಿ ಸಜ್ಜಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಈಗಾಗಲೇ ಅಮೃತ್‌ಪಾಲ್‌ ಸಿಂಗ್‌ನ 6 ಕ್ಕೂ ಹೆಚ್ಚು ಸಹಚರರನ್ನು ಬಂಧಿಸಲಾಗಿದೆ. ಅಹಿತಕರ ಘಟನೆಗಳನ್ನು ತಡೆಯಲು ಪಂಜಾಬ್‌ನಲ್ಲಿ  ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಪಂಜಾಬ್‌ನ ಏಳು ಜಿಲ್ಲೆಗಳಲ್ಲಿ ಅಮೃತಪಾಲ್ ಸಿಂಗ್ ಸಹಚರರ ಬಂಧನಕ್ಕೆ ಬಲೆ ಬೀಸಲಾಗಿದೆ. ಜಲಂಧರ್‌ನ ಶಾಹಕೋಟ್‌ನ ಮೆಹತ್‌ಪುರ ಗ್ರಾಮದಲ್ಲಿ ಈತನ ಸಹಚರರನ್ನು ಪೊಲೀಸರು ಸುತ್ತುವರೆದಿದ್ದಾರೆ. ಅಮೃತಪಾಲ್ ಸಿಂಗ್ ಶಾಹಕೋಟ್‌ಗೆ ಭೇಟಿಯ ಮುನ್ಸೂಚನೆ ಇದ್ದ ಕಾರಣ ಪೊಲೀಸರು ಶಾಹಕೋಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಎಲ್ಲಾ ರಸ್ತೆಗಳನ್ನು ಮುಚ್ಚಿ ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

ತನ್ನ ಪ್ರಮುಖ ಸಹಚರ, ಅಪಹರಣದಲ್ಲಿ ಭಾಗಿಯಾಗಿರುವ ಆರೋಪಿ ಲವ್‌ಪ್ರೀತ್ ಸಿಂಗ್ ಬಂಧನದ ವಿರುದ್ಧ ಅಮೃತಪಾಲ್ ಸಿಂಗ್, ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಖಡ್ಗ, ಬಂದೂಕು, ಬಡಿಗೆ ಹಿಡಿದು ಅಮೃತಸರದ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಲವ್‌ಪ್ರೀತ್ ಸಿಂಗ್ ಬಿಡುಗಡೆಗೆ ಆಗ್ರಹಿಸಿದ್ದ. ವಾರಿಸ್ ಪಂಜಾಬ್ ದೇ ಸಂಘಟನೆ ಹೋರಾಟಕ್ಕೆ ಬೆದರಿದ ಪಂಜಾಬ್ ಪೊಲೀಸ್, ಒಂದು ದಿನದಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು. ಪಂಜಾಬ್ ಪೊಲೀಸರ ಮನವಿ ಪುರಸ್ಕರಿಸಿದ ಅಜ್ನಾಲ ಕೋರ್ಟ್, ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿತ್ತು.

ಅಮೃತಪಾಲ್ ಸಿಂಗ್ ‘ವಾರಿಸ್ ಪಂಜಾಬ್‌ ದೇ’ ಎಂಬ ಮೂಲಭೂತ ಸಂಘಟನೆಯ ನೇತೃತ್ವ ವಹಿಸಿದ್ದಾನೆ. ಕಳೆದ ವರ್ಷ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಟ ಹಾಗೂ ಕಾರ್ಯಕರ್ತ ದೀಪ್ ಸಿಧು ಆರಂಭಿಸಿದ್ದ ‘ವಾರಿಸ್ ಪಂಜಾಬ್‌ ದೇ’ ಸಂಘಟನೆಯನ್ನು ಈತ ಮುನ್ನಡೆಸುತ್ತಿದ್ದಾನೆ.

Suprabha
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿ, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಷರತ್ತಾಗಿ ಸಾರ್ವಜನಿಕ...

ಗುಜರಾತ್ | ಹಿಂದೂ ದೇಶದಲ್ಲಿರಬೇಕಾದರೆ ಜೈ ಶ್ರೀರಾಮ್ ಎನ್ನಬೇಕು ಎಂದವನ ಬಂಧನ

ವ್ಯಕ್ತಿಯೊಬ್ಬ ಹಿಂದೂ ದೇಶದಲ್ಲಿರಬೇಕಾದರೆ ನೀನು ಜೈ ಶ್ರೀರಾಮ್ ಎನ್ನಬೇಕು ಎಂದ ವ್ಯಕ್ತಿಯೊಬ್ಬನನ್ನು...

ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಕೈಯಿಂದ ಮಲ ಬಾಚುವ ವೇಳೆ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ...