ಚುನಾವಣೆಗಾಗಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆಯಿಂದ ಅವಘಡ: ಪ್ರಧಾನಿ ವಿರುದ್ಧ ಖರ್ಗೆ ಆಕ್ರೋಶ

Date:

Advertisements

ಅಧಿಕ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ ಒಂದರ ಛಾವಣಿ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಮಾರ್ಚ್‌ನಲ್ಲಿ ಟರ್ಮಿನಲ್‌ 1 ಅನ್ನು ವಿಸ್ತರಿಸುವ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ 10 ವರ್ಷಗಳಲ್ಲಿ  ಕಳಪೆ ಮೂಲ ಸೌಕರ್ಯದಿಂದಾಗಿ ಮೋದಿ ಸರ್ಕಾರದ ಕಾಮಗಾರಿಗಳು ಇಸ್ಪೀಟ್‌ ಎಲೆಗಳಂತೆ ಕಳೆಗೆ ಬೀಳುತ್ತಿವೆ.  ಭ್ರಷ್ಟಾಚಾರ ಹಾಗೂ ಅಪರಾಧಿ ಭಾವನೆಯ ನಿರ್ಲಕ್ಷ್ಯದ ಬೇಜವಾಬ್ದಾರಿಯೆ ಇದಕ್ಕೆ ಕಾರಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ದೆಹಲಿ ವಿಮಾನ ಟರ್ಮಿನಲ್‌1ರ ನಿಲ್ದಾಣ ಹಾಗೂ ಮಧ್ಯ ಪ್ರದೇಶದ ವಿಮಾನ ನಿಲ್ದಾಣದ ಛಾವಣಿ ಕುಸಿತ ,ಅಯೋಧ್ಯೆಗಳ ರಸ್ತೆಗಳ ಸ್ಥಿತಿ, ರಾಮ ಮಂದಿರ ಸೋರಿಕೆ, ಮುಂಬೈನ ಹಾರ್ಬರ್‌ ಲಿಂಕ್‌ ರೋಡ್‌ ಬಿರುಕು ಬಿಟ್ಟಿರುವುದು, ಬಿಹಾರದಲ್ಲಿ 13 ಸೇತುವೆಗಳು ಕುಸಿತ, ಗುಜರಾತ್‌ನಲ್ಲಿ ಮೋಬ್ರಿ ಸೇತುವೆ ಕುಸಿತಗಳು ಮೋದಿ ಸರ್ಕಾರ ವಿಶ್ವ ದರ್ಜೆಯ ಮೂಲಸೌಕರ್ಯ ಎಂದು ಹೇಳಿಕೊಳ್ಳುವ ಪೊಳ್ಳು ಮಾತಿನ ನಿದರ್ಶನವಾಗಿವೆ ಎಂದು ಖರ್ಗೆ ಖಂಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ಒಬ್ಬರು ಸಾವು, 5 ಮಂದಿಗೆ ಗಾಯ

ಇವೆಲ್ಲವೂ ಚುನಾವಣೆಗೂ ಮುನ್ನ ರಿಬ್ಬನ್‌ ಕತ್ತರಿಸುವ ಸಮಾರಂಭದಲ್ಲಿ ತ್ವರಿತವಾಗಿ ತೊಡಗಿಸಿಕೊಳ್ಳುವುದಕ್ಕಾಗಿ ಮಾಡಿದ ಸುಳ್ಳು ಹಾಗೂ ವಾಕ್ಚಾತುರ್ಯದ ಪ್ರದರ್ಶನವಾಗಿದೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಮಡಿದ ಸಂತ್ರಸ್ತರಿಗೆ ಸಂತಾಪಗಳು. ಸಂಸ್ತ್ರಸ್ತ ಕುಟುಂಬ ಭ್ರಷ್ಟ, ಅಸಮರ್ಥ ಹಾಗೂ ಸ್ವಾರ್ಥ ಸರ್ಕಾರದ ಭಾರವನ್ನು ಹೊತ್ತಿಕೊಂಡಿದೆ ಎಂದು ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಘೋಷಣೆಯಾಗುವ ಮುನ್ನ ಮಾರ್ಚ್‌ 10ರಂದು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 9800 ಕೋಟಿ ರೂ. ವೆಚ್ಚದಲ್ಲಿ 15 ವಿಮಾನ ನಿಲ್ದಾಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇವುಗಳಲ್ಲಿ ಇಂದು ಮೇಲ್ಚಾವಣಿ ಕುಸಿತಗೊಂಡಿರುವ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೂಡ ಒಂದಾಗಿದೆ.

ಚುನಾವಣೆಗಾಗಿ ಅಪೂರ್ಣಗೊಂಡ ಕಾಮಗಾರಿಗಳನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದರಿಂದ ದುರ್ಘಟನೆಗಳು ಸಂಭವಿಸಿವೆ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X