ರಸ್ತೆ ಅಪಘಾತಗಳಲ್ಲಿ 1.8 ಲಕ್ಷಕ್ಕೂ ಹೆಚ್ಚು ಪಾದಚಾರಿಗಳ ಸಾವು: ತಮಿಳುನಾಡಿಗೆ ಅಗ್ರಸ್ಥಾನ

Date:

ದೇಶದಲ್ಲಿ 2019 ಮತ್ತು 2024ರ ನಡುವಿನ ಐದು ವರ್ಷಗಳ ಅವಧಿಯಲ್ಲಿ ರಸ್ತೆ ಅಪಘಾತಗಳಿಗೆ ಸಿಲುಕಿ 1.8 ಲಕ್ಷಕ್ಕೂ ಹೆಚ್ಚು ಪಾದಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸರ್ಕಾರಿ ಅಂಕಿ-ಅಂಶಗಳನ್ನು ಉಲ್ಲೇಖಿಸಿದ ವರದಿಯೊಂದು ತಿಳಿಸಿದೆ.

- Advertisement -

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬಿಡುಗಡೆ ಮಾಡಿರುವ 2024ರ ಅಂಕಿ-ಅಂಶಗಳ ಪ್ರಕಾರ, ಒಟ್ಟು ಪಾದಚಾರಿಗಳ ಸಾವಿನಲ್ಲಿ ಸುಮಾರು 54%ರಷ್ಟು ಸಾವುಗಳು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಡಿಕ್ಕಿ ಹೊಡೆದ ರಸ್ತೆ ಅಪಘಾತಗಳಿಂದ ಸಂಭವಿಸಿವೆ. ಇಂತಹ ಅಪಘಾತಗಳಲ್ಲೇ 19,680 ಜನರು ಬಲಿಯಾಗಿದ್ದಾರೆ. ರಸ್ತೆಯನ್ನು ಬಳಸುವವರಲ್ಲಿ ದ್ವಿಚಕ್ರ ವಾಹನ ಸವಾರರ ನಂತರ ಪಾದಚಾರಿಗಳೇ ಅತ್ಯಂತ ಅಪಾಯಕ್ಕೆ ಸಿಲುಕುವ ಎರಡನೇ ದೊಡ್ಡ ಗುಂಪಾಗಿದ್ದಾರೆ ಎಂದು ವರದಿಯು ಬಹಿರಂಗಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ದೇಶಾದ್ಯಂತ ಒಟ್ಟು 36,526 ಪಾದಚಾರಿಗಳ ಸಾವುಗಳು ದಾಖಲಾಗಿವೆ. ಭಾರತದಲ್ಲಿ ನಡೆಯುವ ಒಟ್ಟು ರಸ್ತೆ ಅಪಘಾತಗಳ ಸಾವಿನಲ್ಲಿ ಪಾದಚಾರಿಗಳ ಪಾಲು 20.6% ರಷ್ಟಿದೆ.

ವರದಿಯ ಪ್ರಕಾರ, ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ತಮಿಳುನಾಡು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ತಮಿಳುನಾಡಿನಲ್ಲಿ ಅತ್ಯಧಿಕ ಸಂಖ್ಯೆಯ 4,712 ಪಾದಚಾರಿಗಳು ಮೃತಪಟ್ಟಿದ್ದಾರೆ. ಆ ನಂತರದ ಸ್ಥಾನಗಳಲ್ಲಿ ಬಿಹಾರ 4,149 ಸಾವುಗಳು, ಮಹಾರಾಷ್ಟ್ರ 3,344 ಸಾವುಗಳು ಹಾಗೂ ಪಶ್ಚಿಮ ಬಂಗಾಳ 3,241 ಸಾವುಗಳನ್ನು ದಾಖಲಿಸಿವೆ.

ಈ ಆತಂಕಕಾರಿ ಅಂಕಿ-ಅಂಶಗಳ ನಡುವೆಯೇ, ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪೊಂದನ್ನು ನೀಡಿದೆ. ವ್ಯವಸ್ಥಿತವಾಗಿ ಗುರುತಿಸಲಾದ ಪಾದಚಾರಿ ಮಾರ್ಗಗಳಲ್ಲಿ ನಡೆಯುವುದು ನಾಗರಿಕರ ಮೂಲಭೂತ ಹಕ್ಕಾಗಿದೆ ಎಂದು ಸಾರಿದೆ.

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಎ.ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು, ನಾಗರಿಕರಿಗೆ ಫುಟ್‌ಪಾತ್‌ಗಳ ಮೇಲೆ ನಡೆಯಲು ಇರುವ ಮೂಲಭೂತ ಹಕ್ಕು ಪ್ರಾಥಮಿಕವಾದದ್ದು. ಇಂಜಿನ್ ಚಾಲಿತ ವಾಹನಗಳ ಚಲನವಲನಗಳಿಗಿಂತ ಪಾದಚಾರಿಗಳಿಗೆ ಹೆಚ್ಚಿನ ಆದ್ಯತೆ ಇರಬೇಕು ಎಂದು ತೀರ್ಪು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...