ಕೇಂದ್ರ ಸರ್ಕಾರ ಕೊಡಮಾಡುವ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳಿಗೆ 2025ರ ಪುರಸ್ಕೃತರ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಕರ್ನಾಟಕದ ಜಾನಪದ ಗಾಯಕ ವೆಂಕಪ್ಪ ಅಂಬಾಜಿ, ತೊಗಲುಬೊಂಬೆ ಆಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ, ಕಲಬುರಗಿ ಮೂಲದ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಸೇರಿದಂತೆ 30 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
ಪ್ಯಾರಾಲಿಂಪಿಕ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಪ್ಯಾರಾಲಿಂಪಿಯನ್ ಹರ್ವಿಂದರ್ ಸಿಂಗ್, ಬ್ರೆಜಿಲ್ನ ಹಿಂದು ಆಧ್ಯಾತ್ಮಿಕ ನಾಯಕ ಜೋನಾಸ್ ಮಾಸೆಟ್ಟಿ, ಭಾರತದ ಪರಂಪರೆಯ ಬಗ್ಗೆ ನಿರಂತರವಾಗಿ ಬರೆದಿರುವ ಹಗ್ ಮತ್ತು ಕೊಲೀನ್ ಗ್ಯಾಂಟ್ಜರ್ ದಂಪತಿಗಳಿಗೂ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಗರ್ಭಕಂಠದ ಕ್ಯಾನ್ಸರ್ ಪತ್ತೆ, ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ವಿಶೇಷ ತಜ್ಞರಾಗಿರುವ ದೆಹಲಿಯ ಸ್ತ್ರೀರೋಗ ತಜ್ಞೆ ಡಾ. ನೀರ್ಜಾ ಭಟ್ಲಾ, ಭೋಜ್ಪುರದ ಸಮಾಜ ಸೇವಕ ಭೀಮ್ ಸಿಂಗ್ ಭವೇಶ್, ದಕ್ಷಿಣ ಭಾರತೀಯ ಸಂಗೀತ ಮತ್ತು ಸಂಸ್ಕೃತಿಗೆ ಪ್ರಮುಖವಾದ ಶಾಸ್ತ್ರೀಯ ತಾಳವಾದ್ಯವಾದಲ್ಲಿ ಖ್ಯಾತಿ ಗಳಿಸಿರುವ ಪಿ. ದಚ್ಚನಮೂರ್ತಿ, ನಾಗಾಲ್ಯಾಂಡ್ನ ನೋಕ್ಲಾಕ್ನ ಹಣ್ಣಿನ ರೈತ ಎಲ್ ಹ್ಯಾಂಗ್ಥಿಂಗ್ ಕೂಡ ಪದ್ಮಶ್ರೀಗೆ ಭಾಜನರಾಗಿದ್ದಾರೆ.
ಗೋವಾ ಮೂಲದ ಸ್ವಾತಂತ್ರ್ಯ ಹೋರಾಟಗಾರ್ತಿ ಲಿಬಿಯಾ ಲೋಬೊ ಸರ್ದೇಸಾಯಿ, ಪಶ್ಚಿಮ ಬಂಗಾಳದ ಧಕ್ ಆಟಗಾರ ಗೋಕುಲ್ ಚಂದ್ರ ದಾಸ್, ಕುವೈತ್ನ ಯೋಗ ಸಾಧಕಿ ಶೈಖಾ ಎ ಜೆ ಅಲ್ ಸಬಾ ಅವರಿಗೂ ಪದ್ಮಶ್ರೀ ನೀಡಲು ಸರ್ಕಾರ ಆಯ್ಕೆ ಮಾಡಿದೆ.
2025ರಲ್ಲಿ ಪದ್ಮಶ್ರೀಗೆ ಆಯ್ಕೆಯಾದವರ ಪಟ್ಟಿ;
ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ (ಕರ್ನಾಟಕ)
ವೆಂಕಪ್ಪ ಅಂಬಾಜಿ ಸುಗಟೇಕರ್ (ಕರ್ನಾಟಕ)
ಡಾ. ವಿಜಯಲಕ್ಷ್ಮಿ ದೇಶಮಾನೆ (ಕರ್ನಾಟಕ)
ಎಲ್ ಹ್ಯಾಂಗ್ಥಿಂಗ್ (ನಾಗಾಲ್ಯಾಂಡ್)
ಹರಿಮನ್ ಶರ್ಮಾ (ಹಿಮಾಚಲ ಪ್ರದೇಶ)
ಜುಮ್ಡೆ ಯೊಮ್ಗಮ್ ಗಾಮ್ಲಿನ್ (ಅರುಣಾಚಲ ಪ್ರದೇಶ)
ಜೋಯ್ನಾಚರಣ್ ಬತಾರಿ (ಅಸ್ಸಾಂ)
ನರೇನ್ ಗುರುಂಗ್ (ಸಿಕ್ಕಿಂ)
ವಿಲಾಸ್ ಡಾಂಗ್ರೆ (ಮಹಾರಾಷ್ಟ್ರ)
ಶೈಖಾ ಎ ಜೆ ಅಲ್ ಸಬಾಹ್ (ಕುವೈತ್)
ನಿರ್ಮಲಾ ದೇವಿ (ಬಿಹಾರ)
ಭೀಮ್ ಸಿಂಗ್ ಭಾವೇಶ್ (ಬಿಹಾರ)
ರಾಧಾ ಬಹಿನ್ ಭಟ್ (ಉತ್ತರಾಖಂಡ)
ಸುರೇಶ್ ಸೋನಿ (ಗುಜರಾತ್)
ಪಾಂಡಿ ರಾಮ್ ಮಾಂಡವಿ (ಛತ್ತೀಸ್ಗಢ)
ಜೋನಾಸ್ ಮಾಸೆಟ್ (ಬ್ರೆಜಿಲ್)
ಜಗದೀಶ್ ಜೋಶಿಲಾ (ಮಧ್ಯಪ್ರದೇಶ)
ಹರ್ವಿಂದರ್ ಸಿಂಗ್ (ಹರಿಯಾಣ)
ಭೇರು ಸಿಂಗ್ ಚೌಹಾಣ್ (ಮಧ್ಯಪ್ರದೇಶ)
ಪಿ ದಚ್ಚನಮೂರ್ತಿ (ಪುದುಚೇರಿ)
ಲಿಬಿಯಾ ಲೋಬೋ ಸರ್ದೇಸಾಯಿ (ಗೋವಾ)
ಗೋಕುಲ್ ಚಂದ್ರ ದಾಸ್ (ಪಶ್ಚಿಮ ಬಂಗಾಳ)
ಹಗ್ ಗಂಟ್ಜರ್ (ಉತ್ತರಾಖಂಡ)
ಕೊಲೀನ್ ಗ್ಯಾಂಟ್ಜರ್ (ಉತ್ತರಾಖಂಡ)
ಡಾ. ನೀರ್ಜಾ ಭಟ್ಲಾ (ದೆಹಲಿ)