ಪಹಲ್ಗಾಮ್ ದಾಳಿ | ಸಂಸತ್ ವಿಶೇಷ ಅಧಿವೇಶನಕ್ಕೆ ಸರ್ಕಾರ ಚಿಂತನೆ

Date:

Advertisements

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ಹಾಗೂ ಭಯೋತ್ಪಾದನೆ ವಿರುದ್ಧದ ಕ್ರಮಗಳ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಮಿತ್ರಪಕ್ಷಗಳು ಮತ್ತು ವಿಪಕ್ಷಗಳ ಸಲಹೆಗಳನ್ನು ಪಡೆಯಲು ಮತ್ತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಪಹಲ್ಗಾಮ್ ದಾಳಿಯ ಬಗ್ಗೆ ಮಾತನಾಡಿದ್ದ ಹಿರಿಯ ವಕೀಲ, ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, “ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶ ಸಾರಬೇಕಿತ್ತು. ಅದಕ್ಕಾಗಿ, ಸಂಸತ್ತಿನ ವಿಶೇಷ ಅಧಿವೇಶನ ಕರೆಯಬೇಕು ಮತ್ತು ದೇಶದ ಭಾವನೆಯನ್ನು ವಿಶ್ವದ ಮುಂದೆ ವ್ಯಕ್ತಪಡಿಸಲು ಸಂಸತ್ತಿನಲ್ಲಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು” ಎಂದು ಒತ್ತಾಯಿಸಿದ್ದರು.

“ಸರ್ಕಾರ ಮತ್ತು ವಿಪಕ್ಷಗಳ ಸಂಸದರ ನಿಯೋಗಗಳನ್ನು ರಚಿಸಿ, ಆ ನಿಯೋಗಗಳನ್ನು ವಿವಿಧ ದೇಶಗಳಿಗೆ ಕಳಿಸಿ, ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರಬೇಕಿದೆ. ಅಮೆರಿಕ ನಿರ್ಬಂಧ ವಿಧಿಸಿರುವ ರೀತಿಯಲ್ಲಿ ಪಾಕಿಸ್ತಾನಕ್ಕೆ ಭಾರತ ನಿರ್ಬಂಧ ಹೇರಬೇಕು. ಜೊತೆಗೆ, ಪಾಕಿಸ್ತಾನನೊಂದಿಗೆ ವ್ಯಾಪಾರ ವ್ಯವಹಾರ ಇರುವ ಎಲ್ಲ ಪ್ರಮುಖ ರಾಷ್ಟ್ರಗಳಿಗೂ ನಮ್ಮ ಮಾರುಕಟ್ಟೆಗೆ ಬರಲು ಸಾಧ್ಯವಿಲ್ಲ ಎಂಬ ಸಂದೇಶ ರವಾನಿಸಬೇಕಿದೆ” ಎಂದು ಆಗ್ರಹಿಸಿದ್ದರು.

Advertisements

ಸಿಬಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ಸರ್ಕಾರ ಈ ಬಗ್ಗೆ ಚಿಂತನೆ ನಡೆಸಲಿದೆ ಎಂದಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮೂಹಿಕ ಏಕತೆಯನ್ನು ಬಯಸುತ್ತಾರೆ. ಅವರು ಸಾಮೂಹಿಕ ಏಕತೆಯೊಂದಿಗೆ ರಾಷ್ಟ್ರಕ್ಕಾಗಿ ಕಾರ್ಯನಿರ್ವಹಿಸುವ ಗುರಿ ಹೊಂದಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಬಿಕ್ಕಟ್ಟಿನ ಕಾರಣದಿಂದಾಗಿ, ಸರ್ಕಾರ ಇದನ್ನು ಪರಿಗಣಿಸುವ ಸಾಧ್ಯತೆ ಇದೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಸರ್ಕಾರವು ವಿಶೇಷ ಅಧಿವೇಶನ ಕರೆಯಲು ಶೀಘ್ರವೇ ದಿನಾಂಕ ನಿಗದಿ ಮಾಡಲಾಗಿದೆ. ರಾಷ್ಟ್ರಪತಿಗಳ ಅನುಮೋದನೆ ಪಡೆದು, ಅಧಿವೇಶನ ಕರೆಯಲಿದೆ ಎಂದು ಬಿಜೆಪಿ ಹೇಳಿರುವುದಾಗಿ ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X