ಮಣಿಪುರ ಹಿಂಸಾಚಾರ | ಶಂಕಿತ ಬಂಡುಕೋರರ ಹೊಂಚುದಾಳಿ; ಸಿಆರ್‌ಪಿಎಫ್ ಯೋಧ ಹುತಾತ್ಮ

Date:

Advertisements

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ನಡೆಸಿದ ಹೊಂಚುದಾಳಿಯಿಂದಾಗಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ರಾಜ್ಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಯೋಧ ಗಸ್ತು ತಿರುಗುತ್ತಿದ್ದಾಗ ಶಂಕಿತ ಬಂಡುಕೋರರು ದಾಳಿ ನಡೆಸಿದ್ದಾರೆ. ಇಬ್ಬರು ಪೊಲೀಸ್ ಕಮಾಂಡೋಗಳು ಗಾಯಗೊಂಡಿದ್ದಾರೆ.

ಅಸ್ಸಾಂ ಗಡಿಯಲ್ಲಿರುವ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ಭಾರೀ ಗುಂಡಿನ ದಾಳಿ ನಡೆಸಿದ್ದಾರೆ. ಸಿಆರ್‌ಪಿಎಫ್ ಯೋಧ ಗಸ್ತು ತಿರುಗುತ್ತಿದ್ದ ಎಸ್‌ಯುವಿ ಬಳಿ ತೆರಳುತ್ತಿದ್ದಾಗ ಶಂಕಿತ ಉಗ್ರರು ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಂಚುದಾಳಿ ನಡೆದ ಪ್ರದೇಶದಲ್ಲಿ ನಿಂತಿದ್ದ ಎಸ್‌ಯುವಿ ಮೇಲೆಯೂ ದಾಳಿ ನಡೆದಿದ್ದು, ವಾಹನದಲ್ಲಿ ಹಲವಾರು ಬುಲೆಟ್‌ ಗುರುತುಗಳಿದೆ. ವಾಹನದೊಳಗಿದ್ದ ಇಬ್ಬರು ಪೊಲೀಸ್ ಕಮಾಂಡೋಗಳು ಗಾಯಗೊಂಡಿದ್ದಾರೆ.

Advertisements

ಈ ಬಗ್ಗೆ ಎನ್‌ಡಿಟಿವಿಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ನಮ್ಮ ಮೇಲೆ ದಾಳಿಯಾದಾಗ ನಾವು ಪರಿಣಾಮಕಾರಿ ದಾಳಿ ನಡೆಸಿದ್ದೇವೆ. ಬಂಡುಕೋರರು ಅರಣ್ಯಕ್ಕೆ ಓಡಿಹೋಗಿದ್ದಾರೆ. ಸದ್ಯ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮಣಿಪುರ ವಿಚಾರವನ್ನು ಇಂಡಿಯಾ ಒಕ್ಕೂಟ ಸಂಸತ್ತಿನಲ್ಲಿ ಮತ್ತೆ ಎತ್ತುತ್ತದೆ: ರಾಹುಲ್ ಗಾಂಧಿ

ಈ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಎಕ್ಸ್ ಪೋಸ್ಟ್ ಮಾಡಿದ್ದಾರೆ. “ಶಂಕಿತ ಕುಕಿ ಉಗ್ರಗಾಮಿಗಳು” ಎಂದು ಹೇಳಿದ್ದು ಈ ದಾಳಿಯನ್ನು ಖಂಡಿಸಿದ್ದಾರೆ.

ಇನ್ನು ಇತ್ತೀಚೆಗೆ ಜಿರಿಬಾಮ್‌ನಲ್ಲಿ ಮೈತಿ ಮತ್ತು ಹ್ಮಾರ್ ಬುಡಕಟ್ಟುಗಳ ನಡುವಿನ ಘರ್ಷಣೆ ನಡೆದಿದ್ದು, ಕಳೆದ ಒಂದು ವರ್ಷದಿಂದ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

2023ರ ಮೇ ತಿಂಗಳಲ್ಲಿ ಮೈತಿ ಮತ್ತು ಕುಕಿ ಜನಾಂಗದ ನಡುವೆ ಹಿಂಸಾಚಾರ ಆರಂಭವಾಗಿದ್ದು, ಇಂದಿನವರೆಗೂ ಹಿಂಸಾಚಾರ ಕೊನೆಯಾಗಿಲ್ಲ. ಈವರೆಗೆ 200ಕ್ಕೂ ಅಧಿಕ ಸಾವನ್ನಪ್ಪಿದ್ದು ಎರಡೂ ಜನಾಂಗದ ಸಾವಿರಾರೂ ಮಂದಿ ನಿರಾಶ್ರಿತರ ಕೇಂದ್ರದಲ್ಲಿ ಜೀವಿಸುತ್ತಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X