ಲಿಂಗತ್ವ ಅಲ್ಪಸಂಖ್ಯಾತೆ ಜೊತೆಗಿನ ಮಗನ ಪ್ರೀತಿ ವಿರೋಧಿಸಿ ಪೋಷಕರು ಆತ್ಮಹತ್ಯೆ

Date:

Advertisements

ಲಿಂಗತ್ವ ಅಲ್ಪಸಂಖ್ಯಾತೆಯನ್ನು ಪ್ರೀತಿಸಿದ್ದ ಯುವಕ, ಆಕೆಯನ್ನು ವಿವಾಹವಾಗಲು ನಿರ್ಧರಿಸಿದ್ದನ್ನು ವಿರೋಧಿಸಿದ್ದ ಆತನ ಪೋಷಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.

ಆತ್ಮಹತ್ಯೆಯಿಂದ ಸಾವನ್ನಪ್ಪಿದ ದಂಪತಿಯನ್ನು ಸುಬ್ಬಾ ರಾಯುಡು ಮತ್ತು ಸರತ್ವತಿ ಎಂದು ಹೇಳಲಾಗಿದೆ. ಅವರ ಪುತ್ರ, 24 ವರ್ಷದ ಸುನೀಲ್ ಕುಮಾರ್ ಕಳೆದ ಮೂರು ವರ್ಷಗಳಿಂದ ಲಿಂಗತ್ವ ಅಲ್ಪಸಂಖ್ಯಾತೆಯನ್ನು ಪ್ರೀತಿಸುತ್ತಿದ್ದರು. ಆಕೆಯನ್ನು ಮದುವೆಯಾಗುವುದಾಗಿ ತನ್ನ ಪೋಷಕರ ಬಳಿ ಪ್ರಸ್ತಾಪಿಸಿದ್ದರು.

ಆತನ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಆತ ಆಕೆಯನ್ನೇ ವಿವಾಹವಾಗುವುದಾಗಿ ಹಠ ಹಿಡಿದಿದ್ದ ಎಂದು ಹೇಳಲಾಗಿದೆ. ತಮ್ಮ ಮಗ ಲಿಂಗತ್ವ ಅಲ್ಪಸಂಖ್ಯಾತೆಯನ್ನು ವಿವಾಹವಾದರೆ ನೆರೆಹೊರೆಯವರು ಜರಿಯುತ್ತಾರೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Advertisements

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ನಂದ್ಯಾಲ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಪಿ ಶ್ರೀನಿವಾಸ್ ರೆಡ್ಡಿ, “ಸಂತೋಷ್ ಕುಮಾರ್ ಅವರು ಲಿಂಗತ್ವ ಅಲ್ಪಸಂಖ್ಯಾತರ ಬಳಿಯಿದ್ದ 1.5 ರೂ.ಗಳನ್ನು ಖರ್ಚು ಮಾಡಿದ್ದರು. ಆ ಹಣವನ್ನು ಕೊಡುವಂತೆ ತನ್ನ ಪೋಷಕರಿಗೆ ಒತ್ತಾಯಿಸಿದ್ದರು. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರೊಬ್ಬರು ಸಂತೋಷ್‌ ಅವರ ಪೋಷಕರನ್ನು ನಿಂದಿಸಿದ್ದರು ಇದರಿಂದ ನೊಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X