ಲೋಕಸಭೆ, ವಿಧಾನಸಭೆ ಉಮೇದುವಾರಿಕೆಯ ಕನಿಷ್ಠ ವಯಸ್ಸು ಇಳಿಕೆಗೆ ಸಂಸದೀಯ ಸಮಿತಿ ಸಲಹೆ

Date:

Advertisements

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಇಳಿಕೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದು ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ಪಾಲುಗೊಳ್ಳಲು ಸಮಾನ ಅವಕಾಶ ನೀಡುತ್ತದೆ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.

ಪ್ರಸ್ತುತ ಕಾನೂನಿನ ಪ್ರಕಾರ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಒಬ್ಬ ವ್ಯಕ್ತಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರಾಗಲು ಕನಿಷ್ಠ ವಯಸ್ಸು 30 ವರ್ಷ.

‘ರಾಷ್ಟ್ರೀಯ ಚುನಾವಣೆ’ ಅಥವಾ ಲೋಕಸಭಾ ಚುನಾವಣೆಗೆ, ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಪ್ರಸ್ತುತ 25 ವರ್ಷದಿಂದ 18 ಕ್ಕೆ ಇಳಿಸಲು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ಪ್ರಸ್ತುತ, ಒಬ್ಬ ವ್ಯಕ್ತಿಯು ಮತದಾರರಾಗಿ ನೋಂದಾಯಿಸಲು ಕನಿಷ್ಠ 18 ವರ್ಷಗಳಾಗಿರಬೇಕು.

Advertisements

ಕೆನಡಾ, ಇಂಗ್ಲೆಂಡ್, ಆಸ್ಟ್ರೇಲಿಯಾದಂತಹ ವಿವಿಧ ದೇಶಗಳಲ್ಲಿ ರಾಷ್ಟ್ರೀಯ ಚುನಾವಣೆಗಳಲ್ಲಿ ಉಮೇದುವಾರಿಕೆಗೆ ಕನಿಷ್ಠ ವಯಸ್ಸು 18 ವರ್ಷಗಳು ಎಂಬುದನ್ನು ಸಂಸದೀಯ ಸಮಿತಿ ಗಮನಿಸಿದೆ. ಯುವ ಜನತೆ ವಿಶ್ವಾಸಾರ್ಹವಾಗಿ ಮತ್ತು ಪ್ರಬುದ್ಧವಾಗಿ ಪ್ರಜಾಪ್ರಭುತ್ವದ ಚಟುವಟಿಕೆಗಳಲ್ಲಿ ಭಾಗವಹಿಸಲು ಇದು ಸಹಕಾರಿ ಎಂದು ಆ ರಾಷ್ಟ್ರಗಳ ಉದಾಹರಣೆಗಳು ತೋರಿಸುತ್ತವೆ” ಎಂದು ಕಾನೂನು ಮತ್ತು ಸಿಬ್ಬಂದಿ ಕುರಿತ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ.

‘ವಿಧಾನಸಭಾ ಚುನಾವಣೆಯಲ್ಲಿಯೂ ಉಮೇದುವಾರಿಕೆಗೆ ಕನಿಷ್ಠ ವಯಸ್ಸಿನ ಅವಶ್ಯಕತೆಯನ್ನು ಕಡಿಮೆ ಮಾಡಲು’ ಸಮಿತಿ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ: ಅಲೆಮಾರಿಗಳ ‘ಅಸ್ಮಿತೆ’ಗೊಂದು ಆಯೋಗ ಬೇಕೆ?

ಬಿಜೆಪಿಯ ಸುಶೀಲ್ ಮೋದಿ ನೇತೃತ್ವದ ಸಮಿತಿಯು ‘ಜಾಗತಿಕ ಅಭ್ಯಾಸಗಳು, ಯುವಜನರಲ್ಲಿ ಹೆಚ್ಚುತ್ತಿರುವ ರಾಜಕೀಯ ಪ್ರಜ್ಞೆ ಮತ್ತು ಯುವ ಪ್ರಾತಿನಿಧ್ಯದ ಅನುಕೂಲಗಳಂತಹ ಅಪಾರ ಪ್ರಮಾಣದ ಪುರಾವೆಗಳ ಆಧಾರದಿಂದ ಇಂಥದ್ದೊಂದು ಅಭಿಪ್ರಾಯಕ್ಕೆ ಬರಲಾಗಿದೆ’ ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಸಂವಿಧಾನದ ನಿಬಂಧನೆಯನ್ನು ಬದಲಾಯಿಸಲು ಬಲವಾದ ಕಾರಣಗಳು ಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X