ಸಿವಿಲ್ ದಾವೆಗಳ ರಾಜೀ ಸಂಧಾನಕ್ಕೆ ಕಕ್ಷಿದಾರರ ಸಹಿ ಕಡ್ಡಾಯ: ಸುಪ್ರೀಂ ಕೋರ್ಟ್

Date:

ಸಿವಿಲ್ ದಾವೆಗಳ ರಾಜೀ ಸಂಧಾನವು ಕಡ್ಡಾಯವಾಗಿ ಲಿಖಿತ ರೂಪದಲ್ಲಿರಬೇಕು ಮತ್ತು ಅದಕ್ಕೆ ಕಕ್ಷಿದಾರರು ಅಥವಾ ಅವರ ಅಧಿಕೃತ ಪ್ರತಿನಿಧಿಗಳು ಸಹಿ ಮಾಡಿರಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಕ್ಷಿದಾರರ ಸ್ಪಷ್ಟ ಅನುಮತಿಯಿಲ್ಲದೆ ಅವರ ಪರವಾಗಿ ವಕೀಲರು ರಾಜೀ ಸಂಧಾನಕ್ಕೆ ಸಹಿ ಹಾಕುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎನ್. ಕೋಟಿಸ್ವರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ಸಿಪಿಸಿ (CPC) ಆದೇಶ 23 ನಿಯಮ 3ರ ಅನ್ವಯ, ರಾಜೀ ಸಂಧಾನವು ಕಾನೂನುಬದ್ಧವಾಗಿದೆಯೇ ಮತ್ತು ಕಕ್ಷಿದಾರರು ಸ್ವಯಂಪ್ರೇರಣೆಯಿಂದ ಅದನ್ನು ಒಪ್ಪಿದ್ದಾರೆಯೇ ಎಂಬುದನ್ನು ನ್ಯಾಯಾಲಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಪೀಠವು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

‘ಕೃಷ್ಣ ಕುಮಾರ್ ಓಜಾ ಮತ್ತು ಜಿತೇಂದ್ರ ಚೌಧರಿ’ ನಡುವಿನ 1989ರ ಆಸ್ತಿ ವಿಭಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ. 1994ರಲ್ಲಿ ನಡೆದಿದ್ದ ರಾಜೀ ಸಂಧಾನದಲ್ಲಿ 5ನೇ ಪ್ರತಿವಾದಿ ಚತುರ್ಭುಜ್ ಚೌಧರಿ ಸಹಿ ಮಾಡಿರಲಿಲ್ಲ. ಬದಲಾಗಿ, ಕಕ್ಷಿದಾರರಿಂದ ಯಾವುದೇ ವಿಶೇಷ ವಕಾಲತ್ತು ಅಥವಾ ಸ್ಪಷ್ಟ ಅನುಮತಿ ಪಡೆಯದೆ ಅವರ ಪರ ವಕೀಲರು ಒಪ್ಪಂದಕ್ಕೆ ಸಹಿ ಮಾಡಿದ್ದರು. ಈ ಪ್ರಕ್ರಿಯೆ ಕಾನೂನುಬಾಹಿರ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಈ ಹಿಂದಿನ ರಾಜೀ ತೀರ್ಪನ್ನು ಅಮಾನ್ಯಗೊಳಿಸಿದೆ.

ವಂಚನೆ ಆರೋಪವಿರುವ ಹಾಗೂ ಆಸ್ತಿಯಂತಹ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗುವ ಪ್ರಕರಣಗಳಲ್ಲಿ, ಕೇವಲ ‘ವಿಳಂಬವಾಗಿದೆ’ (ಕಾಲಮಿತಿ ಕಾಯ್ದೆ) ಎಂಬ ಕಾರಣ ನೀಡಿ ಅಕ್ರಮ ಒಪ್ಪಂದಗಳನ್ನು ರಕ್ಷಿಸಲಾಗದು ಎಂದು ನ್ಯಾಯಾಲಯ ತಿಳಿಸಿದೆ.

ಸುಮಾರು 25 ವರ್ಷಗಳ ಸುದೀರ್ಘ ವಿಳಂಬದ ನಂತರ ಈ ರಾಜೀ ಒಪ್ಪಂದವನ್ನು ಪ್ರಶ್ನಿಸಲಾಗಿದ್ದರೂ, ವಾಸ್ತವಿಕ ಸತ್ಯಾಸತ್ಯತೆ ಮತ್ತು ಆಸ್ತಿ ಹಕ್ಕುಗಳ ರಕ್ಷಣೆಗಾಗಿ ಸುಪ್ರೀಂ ಕೋರ್ಟ್ ಮೇಲ್ಮನವಿಯನ್ನು ಮಾನ್ಯ ಮಾಡಿದೆ. ಕಕ್ಷಿದಾರರ ಹಕ್ಕುಗಳನ್ನು ನಿರ್ಧರಿಸುವಂತಹ ವಿಚಾರಗಳಲ್ಲಿ ವಕೀಲರು ತಮ್ಮ ಸ್ವಂತ ತೀರ್ಮಾನ ಕೈಗೊಳ್ಳುವಂತಿಲ್ಲ, ಕಕ್ಷಿದಾರರ ಸೂಚನೆಯನ್ನೇ ಪಾಲಿಸುವುದು ಕಡ್ಡಾಯ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...