ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತೆ, ಅದರಲ್ಲಿ ನನ್ನ ಪಾತ್ರವಿಲ್ಲ: ಓಂ ಬಿರ್ಲಾ

Date:

Advertisements

ನೂತನ ಲೋಕಸಭೆ ಸ್ಪೀಕರ್ ಆಯ್ಕೆ ಮಾಡುವ ನಿರ್ಣಾಯಕ ಚುನಾವಣೆಯು ಜೂನ್ 26ರಂದು ನಡೆಯಲ್ಲಿದ್ದು, “ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತದೆ, ಅದರಲ್ಲಿ ನನ್ನ ಪಾತ್ರವಿಲ್ಲ” ಎಂದು ನಿರ್ಗಮಿತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಓಂ ಬಿರ್ಲಾ, “ಹೊಸ ಸ್ಪೀಕರ್ ಮತ್ತು ಉಪ ಸ್ಪೀಕರ್ ಬಗ್ಗೆ ರಾಜಕೀಯ ಪಕ್ಷಗಳು ನಿರ್ಧರಿಸುತ್ತವೆ. ಈ ಎಲ್ಲಾ ನಿರ್ಧಾರಗಳನ್ನು ರಾಜಕೀಯ ಪಕ್ಷಗಳು ತೆಗೆದುಕೊಳ್ಳುತ್ತವೆ. ಈ ನಿರ್ಧಾರಗಳನ್ನು ನಾನು ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಸಂಸತ್ತಿನ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 4ರವರೆಗೆ ನಡೆಯಲಿದೆ. ಬಿಜೆಪಿ ಸರ್ಕಾರ 272 ಸ್ಥಾನಗಳ ಬಹುಮತ ಪಡೆಯಲು ವಿಫಲವಾಗಿ ಈಗ ಮೈತ್ರಿ ಸರ್ಕಾರ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಎನ್‌ಡಿಎ ಸರ್ಕಾರದ ಮೊದಲ ಪರೀಕ್ಷೆಯೇ ಸ್ಪೀಕರ್ ಚುನಾವಣೆಯಾಗಿದೆ.

Advertisements

ಇದನ್ನು ಓದಿದ್ದೀರಾ?  ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಸ್ಪೀಕರ್ ನಿರ್ಣಾಯಕ ಪಾತ್ರವಾದ ಕಾರಣ ಬಿಜೆಪಿ ನಾಯಕರೇ ಈ ಹುದ್ದೆಯನ್ನು ಉಳಿಸಿಕೊಳ್ಳಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿದ್ದರೂ, ಬಿಜೆಪಿಯ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿ (ಯು) ಸಹ ಈ ಪ್ರಮುಖ ಪಾತ್ರವನ್ನು ಬಿಟ್ಟುಕೊಡಲು ಸಿದ್ಧವಾಗಿಲ್ಲ.

ಸ್ಪೀಕರ್ ಹುದ್ದೆಗೆ ಬಿಜೆಪಿ ಆಯ್ಕೆಯನ್ನು ಬೆಂಬಲಿಸುವುದಾಗಿ ಜೆಡಿಯು ಹೇಳಿದರೆ, ಎನ್‌ಡಿಎ ಪಾಲುದಾರರಲ್ಲಿ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಟಿಡಿಪಿ ಹೇಳುತ್ತದೆ. ನಿರ್ಗಮಿತ ಸ್ಪೀಕರ್ ಓಂ ಬಿರ್ಲಾ ಮತ್ತು ಆಂಧ್ರಪ್ರದೇಶ ಬಿಜೆಪಿ ಮುಖ್ಯಸ್ಥೆ ಡಿ ಪುರಂದೇಶ್ವರಿ ಅವರು ಈ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ.

ಇದನ್ನು ಓದಿದ್ದೀರಾ? ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಕಳೆದ ಐದು ವರ್ಷಗಳಿಂದ ಖಾಲಿಯಾಗಿದ್ದ ಉಪಸಭಾಪತಿ ಹುದ್ದೆಯು ಮತ್ತೊಂದು ವಿವಾದಾತ್ಮಕ ವಿಷಯವಾಗಿದೆ. ಹೊಸ ಲೋಕಸಭೆಯಲ್ಲಿ ಇಂಡಿಯಾ ಒಕ್ಕೂಟ 234 ಸದಸ್ಯರ ಪ್ರಭಾವಶಾಲಿ ಬಲವನ್ನು ಹೊಂದಿದ್ದು, ವಿರೋಧ ಪಕ್ಷದ ನಾಯಕರೂ ಉಪಸಭಾಪತಿ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

17ನೇ ಲೋಕಸಭೆಯು ಉಪ ಸ್ಪೀಕರ್ ಇಲ್ಲದೆ ಕಾರ್ಯನಿರ್ವಹಿಸಿದ್ದರೂ ಕೂಡಾ ಸ್ಪೀಕರ್ ಚುನಾಯಿತರಾದ ಕೂಡಲೇ ಲೋಕಸಭೆಯ ಉಪ ಸ್ಪೀಕರ್ ಆಯ್ಕೆಯು ಸಂವಿಧಾನ ಪ್ರಕಾರ ಕಡ್ಡಾಯವಾಗಿದೆ. 17ನೇ ಲೋಕಸಭೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವಿರೋಧ ಪಕ್ಷಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಉಪಸಭಾಪತಿ ನೇಮಕಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X