ವಿಸ್ತಾರ ವಿಮಾನ ಹೈಜಾಕ್ ಯೋಜನೆ | ಫೋನ್‌ನಲ್ಲಿ ಸಂಭಾಷಿಸುತ್ತಿದ್ದ ಪ್ರಯಾಣಿಕ ಬಂಧನ

Date:

Advertisements
  • ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ
  • ರಿತೇಶ್ ಕುಮಾರ್ ವಿರುದ್ಧ ಸಹಾರ್ ಪೊಲೀಸರು ಪ್ರಕರಣ

ವಿಸ್ತಾರ ವಿಮಾನ ಹೈಜಾಕ್ ಮಾಡುವ ಯೋಜನೆಯೊಂದು ಸಿದ್ಧವಾಗಿತ್ತು. ಆದರೆ ತಂತ್ರ ರೂಪಿಸುತ್ತಿದ್ದ ಪ್ರಯಾಣಿಕ ತಾನು ಮಾಡಿದ ಯಡವಟ್ಟಿನಿಂದ ಈಗ ಜೈಲು ಸೇರಿದ್ದಾನೆ.

ಈ ಕುತೂಹಲಕಾರಿ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಸಂಜೆ 6.30ಕ್ಕೆ ನಡೆದಿದೆ.

ನಗರ ವಿಮಾನ ನಿಲ್ದಾಣದಿಂದ ಮುಂಬೈ-ದೆಹಲಿ ವಿಮಾನ ಹೊರಡುವುದಕ್ಕೂ ಮುನ್ನು ವಿಸ್ತಾರ ವಿಮಾನ ಹೈಜಾಕ್ ಮಾಡುವ ಕುರಿತು ಒಳಗಿದ್ದ 23 ವರ್ಷದ ರಿತೇಶ್ ಸಂಜಯ್ ಕುಮಾರ್ ಜುನೇಜಾ ಎಂಬ ವ್ಯಕ್ತಿ ಫೋನಿನಲ್ಲಿ ಇತರರೊಡನೆ ಸಂಭಾಷಿಸುತ್ತಿದ್ದ.

Advertisements

ವಿಮಾನ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದರು. ಆಗ ಮುಂಬೈ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ (ಜೂನ್ 23) ವರದಿ ಮಾಡಿವೆ.

ವಿಮಾನ ಹೈಜಾಕ್‌ ಮಾಡುವ ಬಗ್ಗೆ ವ್ಯಕ್ತಿ ಫೋನಿನಲ್ಲಿ ಮಾತನಾಡುವುದನ್ನು ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಇತರರು ಕೇಳಿದ್ದಾರೆ. ಕೂಡಲೇ ವಿಮಾನ ಸಿಬ್ಬಂದಿ ಪ್ರಯಾಣಿಕನನ್ನು ವಿಮಾನದಿಂದ ಕೆಳಗೆ ಇಳಿಸಿ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು.

ಬಳಿಕ ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಲಾಯಿತು. ನಂತರ ಅಧಿಕಾರಿಗಳ ಸೂಚನೆ ಮೇರೆಗೆ ವಿಮಾನ ದೆಹಲಿಯತ್ತ ಪ್ರಯಾಣಿಸಿತು ಎಂದು ವರದಿಯಾಗಿದೆ.

“ವಿಮಾನ ಹೈಜಾಕ್‌ ಬಗ್ಗೆ ಒಬ್ಬ ವ್ಯಕ್ತಿ ಫೋನ್‌ನಲ್ಲಿ ಮಾತನಾಡುತ್ತಿದ್ದ. ‘ಅಹ್ಮದಾಬಾದ್‌ನಲ್ಲಿ ವಿಮಾನ ಹೊರಡಲಿದೆ. ಹೈಜಾಕ್‌ ಮಾಡುವ ಎಲ್ಲ ಯೋಜನೆ ಸಿದ್ಧವಾಗಿದೆ. ಯಾವುದಾದರೂ ತೊಂದರೆ ಎದುರಾದಲ್ಲಿ ನನಗೆ ಕರೆ ಮಾಡಿ’ ಎಂದು ಹೇಳುತ್ತಿದ್ದ ಎಂದು ಸಿಬ್ಬಂದಿ ವಿವರಿಸಿದರು” ಎಂದು ಪೊಲೀಸರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದೆಹಲಿ ಸುಗ್ರೀವಾಜ್ಞೆ ಕುರಿತು ಸಂಸತ್ ಅಧಿವೇಶನಕ್ಕೂ ಮುನ್ನವೇ ನಿರ್ಧಾರ: ಖರ್ಗೆ

ರಿತೇಶ್‌ ಜುನೇಹಾ ವ್ಯಕ್ತಿಯನ್ನು ಮೊದಲು ಕೇಂದ್ರ ಕೈಗಾರಿಕಾ ಭದ್ರತಾ ದಳಕ್ಕೆ (ಸಿಐಎಸ್‌ಎಫ್) ಹಸ್ತಾಂತರಿಸಲಾಗಿದ್ದು, ಬಳಿಕ ಸಿಬ್ಬಂದಿ ದೂರಿನ ಮೇರೆಗೆ ವ್ಯಕ್ತಿಯನ್ನು ಸಹರ್‌ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

ವಿಸ್ತಾರ ವಿಮಾನ ಹೈಜಾಕ್ ಘಟನೆಗೆ ಸಂಬಂಧಿಸಿ ಮುಂಬೈನ ಸಹರ್‌ ಪೊಲೀಸರು ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 ಮತ್ತು 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಈ ವಿಷಯದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X