2 ಕೋಟಿ ರೂ. ಕೊಡದಿದ್ದರೆ ಹತ್ಯೆ: ಸಲ್ಮಾನ್ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ

Date:

Advertisements

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು ಕೊಲ್ಲಲಾಗುವುದು ಎಂದು ಹೇಳಲಾಗಿದೆ.

ಬೆದರಿಕೆ ಸಂದೇಶ ಬಂದ ನಂತರ ಮಹಾರಾಷ್ಟ್ರದ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಶಾಸಕ ಮತ್ತು ದಿವಂಗತ ಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ ಹಾಗೂ ಸಲ್ಮಾನ್‌ ಖಾನ್‌ ಅವರಿಗೆ ಕೊಲೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಟಿ20 ಪಂದ್ಯದಲ್ಲಿ 344 ರನ್ ಬಾರಿಸಿದ ಜಿಂಬಾಬ್ವೆ: ಒಂದೇ ಪಂದ್ಯದಲ್ಲಿ 7 ವಿಶ್ವದಾಖಲೆ ನಿರ್ಮಾಣ

ಅಕ್ಟೋಬರ್ 12 ರಂದು, ಬಾಬಾ ಸಿದ್ದೀಕಿ ಅವರು ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ ಬಾಂದ್ರಾದಲ್ಲಿನ ಅವರ ಕಚೇರಿಯ ಹೊರಗೆ ಹತ್ಯೆ ಮಾಡಲಾಗಿತ್ತು. ಒಂದು ದಿನದ ನಂತರ, ಲಾರೆನ್ಸ್ ಬಿಷ್ಣೋಯ್ ತಂಡ ಬಾಬಾ ಸಿದ್ದೀಕಿ ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿತು. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧ ಹೊಂದಿದ್ದ ಕಾರಣ ಅವರ ಮೇಲೆ ದಾಳಿ ಮಾಡಲಾಗಿದೆ ಎಂದು ತಂಡದ ಸದಸ್ಯರು ಪೊಲೀಸರಿಗೆ ತಿಳಿಸಿದ್ದರು.

ಇದುವರೆಗೆ ಬಾಬಾ ಸಿದ್ದೀಕಿ ಹತ್ಯೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X