ಅಕ್ರಮ ಹಣ ವರ್ಗಾವಣೆ : ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ 5.49 ಕೋಟಿ ರೂ. ದಂಡ

Date:

Advertisements

ಅಕ್ರಮ ಹಣ ವರ್ಗಾವಣೆಯ ವಿರೋಧಿ ನಿಯಮಗಳನ್ನು(ಪಿಎಂಎಲ್‌ಎ) ಉಲ್ಲಂಘಿಸಿದ್ದಕ್ಕಾಗಿ ಭಾರತದ ಆರ್ಥಿಕ ಗುಪ್ತಚರ ದಳ(ಎಫ್‌ಐಯು-ಐಎನ್‌ಡಿ) ಸಂಸ್ಥೆ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್ಸ್ ಲಿಮಿಟೆಡ್ ಸಂಸ್ಥೆಗೆ 5,49,00,000 ಕೋಟಿ ರೂ. ದಂಡ ವಿಧಿಸಿದೆ.

ಪಿಎಂಎಲ್‌ಎ ಅಡಿ ಕಾರ್ಯನಿರ್ವಹಿಸುವ ಎಫ್‌ಐಯು-ಐಎನ್‌ಡಿ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್ಸ್ ಲಿಮಿಟೆಡ್ ಸಂಸ್ಥೆ ವಿರುದ್ಧ ನಿಯಮಗಳ ಉಲ್ಲಂಘನೆಗಾಗಿ ಈ ಕ್ರಮ ಕೈಗೊಂಡಿದೆ.

ಬ್ಯಾಂಕ್ ಪಿಎಂಎಲ್‌ಎ ಹಾಗೂ ಇದರ ಸಂಬಂಧಿತ ನಿಯಮಗಳನ್ನು ಉಲ್ಲಂಘಿಸಿರುವ ವಿವರಗಳನ್ನು ಒಳಗೊಂಡ ನಿಯಮಗಳನ್ನು ಎಫ್‌ಐಯು-ಐಎನ್‌ಡಿ ನಿರ್ದೇಶಕರು ಜಾರಿಗೊಳಿಸಿದ್ದಾರೆ.

Advertisements

ಆನ್‌ಲೈನ್‌ ಜೂಜಾಟ ಒಳಗೊಂಡ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದಾಗಿ ಕಾನೂನು ಜಾರಿ ಸಂಸ್ಥೆಗಳು ಒದಗಿಸಿರುವ ನಿರ್ದಿಷ್ಟ ಮಾಹಿತಿಯಿಂದ ತನಿಖೆಯನ್ನು ಕೈಗೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ಅಪರಾಧ ಎಂದು ಪರಿಗಣಿಸಲಾದ ಈ ಚಟುವಟಿಕೆಗಳಿಂದ ಬಂದ ಹಣದಿಂದ ಪೇಮೆಂಟ್ಸ್‌ ಬ್ಯಾಂಕ್ಸ್ ಲಿಮಿಟೆಡ್ ಸಂಸ್ಥೆ ಲಾಭ ಮಾಡಿಕೊಂಡಿದೆ ಎಂದು ಆರೋಪಿಸಲಾಗಿದೆ.

ಪಿಎಂಎಲ್ ನಿಯಮಗಳ ಹಲವು ಸೆಕ್ಷನ್‌ಗಳನ್ನು ಉಲ್ಲಂಘಿಸಿದ ಲಭ್ಯವಾದ ದಾಖಲೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ನಂತರ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್ಸ್ ಲಿಮಿಟೆಡ್ ಸಂಸ್ಥೆಗೆ ಎಫ್‌ಐಯು-ಐಎನ್‌ಡಿ ಹಲವು ನಿಯಮಗಳಡಿ ನೋಟಿಸ್ ಜಾರಿಗೊಳಿಸಿತ್ತು.

ಲಿಖಿತ ಹಾಗೂ ಮೌಖಿಕ ವಾದಗಳನ್ನು ಪರಿಗಣಿಸಿದ ನಂತರ ಎಫ್‌ಐಯು-ಐಎನ್‌ಡಿ ನಿರ್ದೇಶಕರು ಪೇಮೆಂಟ್ಸ್‌ ಬ್ಯಾಂಕ್ಸ್ ಲಿಮಿಟೆಡ್ ಸಂಸ್ಥೆ ಅಕ್ರಮಗಳನ್ನು ವೆಸಗಿರುವುದು ರುಜುವಾತಾಗಿದೆ ಎಂದು ನಿರ್ಧರಿಸಿದರು. ಪರಿಣಾಮವಾಗಿ ಸಂಸ್ಥೆಗೆ 5,49,00,000 ಕೋಟಿ ರೂ. ದಂಡ ವಿಧಿಸಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X