ಅಕ್ರಮ ಶಸ್ತ್ರಾಸ್ತ್ರಗಳನ್ನು ಸೇನೆಗೆ ಒಪ್ಪಿಸಿದ ಮಣಿಪುರ ಜನತೆ

Date:

Advertisements

ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಲೂಟಿ ಮಾಡಿದ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲು ನೀಡಲಾಗಿದ್ದ ಎರಡು ವಾರಗಳ ಗಡುವಿನಲ್ಲಿ ಮಣಿಪುರದ ಜನತೆ ಮದ್ದುಗುಂಡುಗಳೊಂದಿಗೆ 1,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಶರಣಾಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಂಕಿಅಂಶಗಳು ತಾತ್ಕಾಲಿಕವಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಸ್ತ್ರಾಸ್ತ್ರ ತ್ಯಾಗದ ವಿವರಗಳು ಇಂಫಾಲದಲ್ಲಿನ ಪ್ರಾಧಿಕಾರಗಳನ್ನು ತಲುಪಿದ ನಂತರ, ಈ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಸದ್ಯ ಈಶಾನ್ಯಪೂರ್ವ ರಾಜ್ಯವಾದ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

Advertisements

ಹ್ಯಾಂಡ್ ಗನ್ ಗಳು, ಮೆಷಿನ್ ಗನ್ ಗಳು, ಗ್ರನೇಡ್ ಗಳು, ಮಾರ್ಟರ್ ಗಳು, ಇನ್ಸಾಸ್ ಮತ್ತು ಎಕೆ-56 ರೈಫಲ್‌ಗಳು ಸೇರಿದಂತೆ ಲೂಟಿ ಮಾಡಿರುವ ಶಸ್ತ್ರಾಸ್ತ್ರಗಳು ಹಾಗೂ ಅಕ್ರಮವಾಗಿ ಖರೀದಿಸಿರುವ ಆಯುಧಗಳನ್ನು ಅಧಿಕಾರಿಗಳು ಇನ್ನಷ್ಟೆ ವಿಂಗಡಿಸಬೇಕಿದೆ.

“ಶರಣಾಗತಿಯ ಅವಧಿಯಲ್ಲಿ ಕಣಿವೆಯ ಐದು ಜಿಲ್ಲೆಗಳು, ಗುಡ್ಡಗಾಡಿನ ಐದು ಜಿಲ್ಲೆಗಳು ಹಾಗೂ ಜಿರಿಬಾಮ್ ನ ನಿವಾಸಿಗಳು ಒಟ್ಟು ಸುಮಾರು 1,023 ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಣಿಪುರದ ಉಳಿದ ಐದು ಜಿಲ್ಲೆಗಳು ನಾಗಾ ಸಮುದಾಯದ ಬಾಹುಳ್ಯವನ್ನು ಹೊಂದಿದ್ದು, ಮೇ 3, 2023ರಿಂದ ಇಲ್ಲಿಯವರೆಗೆ ಈ ಜಿಲ್ಲೆಗಳಲ್ಲಿ ಯಾವುದೇ ಜನಾಂಗೀಯ ಹಿಂಸಾಚಾರ ವರದಿಯಾಗಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X