ಮೌಢ್ಯ | ತನ್ನ ರೋಗ ನಿವಾರಣೆ ಆಗುತ್ತದೆಂದು ಪತ್ನಿಯನ್ನೇ ಬಲಿಕೊಟ್ಟ ವಿಕೃತ ಪತಿ; ಜೀವಾವಧಿ ಶಿಕ್ಷೆ

Date:

Advertisements

ಮೂಢನಂಬಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ, ಅಭಿಯಾನಗಳು ನಡೆಯುತ್ತಲೇ ಇವೆ. ಆದರೂ, ಮೌಢ್ಯಕ್ಕೆ ಕಡಿವಾಣ ಬಿದ್ದಿಲ್ಲ. ಮಾಟಮಂತ್ರಗಳಂತಹ ಅಪಾಯಕಾರಿ ಮೂಢನಂಬಿಕೆಗೆ ಜನರು ಬಲಿಯಾಗುತ್ತಲೇ ಇದ್ದಾರೆ. ಅಂತದ್ದೇ ಆಘಾತಕಾರಿ ಘಟನೆಯಲ್ಲಿ, ವಿಕೃತ, ಮೂಢ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಕಮಲೇಶ್‌ ಎಂಬಾತ, ಬಲಿ ಕೊಟ್ಟರೆ ತನಗಿರುವ ಕೋಗ ನಿವಾರಣೆಯಾಗುತ್ತದೆಂದು ಮೂಢನಂಬಿಕೆಗೆ ಒಳಗಾಗಿ ತನ್ನ ಪತ್ನಿಯನ್ನೇ ಬಲಿಯ ಹೆಸರಿನಲ್ಲಿ ಕೊಲೆ ಮಾಡಿದ್ದ. ಆತನಿಗೆ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಅಪರಾಧಿ ಕಮಲೇಶ್‌ ಫೈಲೇರಿಯಾಸಿಸ್ ಎಂಬ ರೋಗಕ್ಕೆ ತುತ್ತಾಗಿದ್ದ. ಹಲವಾರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಆತನ ರೋಗ ವಾಸಿಯಾಗಿರಲಿಲ್ಲ. ಬಳಿಕ, ಆತ ವಾಮಾಚಾರಿಗಳ ಮೊರೆ ಹೋಗಿದ್ದ. ನರಬಲಿ ಕೊಟ್ಟರೆ ತನ್ನ ರೋಗ ವಾಸಿಯಾಗುತ್ತದೆ ಎಂದು ವಾಮಾಚಾರಿಗಳು ಸಲಹೆ ನೀಡಿದ್ದಾರೆ.

Advertisements

ಅವರ ಮಾತು ಕೇಳಿ, ಮೌಢ್ಯವನ್ನು ನಂಬಿದ ಕಮಲೇಶ್‌ 2020ರ ಡಿಸೆಂಬರ್ 11ರಂದು ತನ್ನ ಪತ್ನಿಯನ್ನೇ ಬಲಿಯ ಹೆಸರಿನಲ್ಲಿ ಕೊಲೆ ಮಾಡಿದ್ದ ಎಂದು ವರದಿಯಾಗಿದೆ.

ಮಹಿಳೆಯ ಸಾವಿನ ಬಗ್ಗೆ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ, ಆಕೆಯನ್ನು ಕಮಲೇಶ್ ಕೊಲೆ ಮಾಡಿದ್ದಾನೆ ಎಂಬುದು ಬಯಲಾಗಿದೆ.

ಆರೋಪಿ ಕಮಲೇಶ್‌ನನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಕಮಲೇಶ್ ಅಪರಾಧಿ ಎಂದು ಘೋಷಿಸಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ, 25,000 ರೂ. ದಂಡ ವಿಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X