ಎಫ್‌ಐಆರ್ ವಿರುದ್ಧ ನ್ಯೂಸ್‌ಕ್ಲಿಕ್ ಸಂಸ್ಥಾಪಕರ ಅರ್ಜಿ; ಪೊಲೀಸರ ನಿಲುವು ಕೇಳಿದ ಹೈಕೋರ್ಟ್‌

Date:

Advertisements

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಅವರ ವಿರುದ್ಧ ಚೀನಾ ಪರ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ‘ಯುಎಪಿಎ’ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದೆಹಲಿ ಪೊಲೀಸರು ದಾಖಲಿಸಿರುವ ಈ ಎಫ್‌ಐಆರ್‌ ವಿರುದ್ಧ ಪ್ರಬೀರ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿ ಕುರಿತಂತೆ ದೆಹಲಿ ಪೊಲೀಸರ ನಿಲುವನ್ನು ಹೈಕೋರ್ಟ್‌ ಕೇಳಿದೆ.

2023ರ ಅಕ್ಟೋಬರ್‌ನಲ್ಲಿ 3ರಂದು ಪ್ರಬೀರ್ ಮತ್ತು ನ್ಯೂಸ್‌ಕ್ಲಿಕ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು. ಅವರಿಬ್ಬರೂ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ, ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಪ್ರಶ್ನಿಸಿ ಪ್ರಬೀರ್ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ದೆಹಲಿ ಪೊಲೀಸರ ಪರ ವಕೀಲರು ನೋಟಿಸ್ ನೀಡುವುದನ್ನು ವಿರೋಧಿಸಿದ್ದಾರೆ. ಅಮಿತ್ ಚಕ್ರವರ್ತಿ ಅವರು ಪ್ರಕರಣವನ್ನು ಅನುಮೋದಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಪ್ರಬೀರ್ ಮತ್ತು ಅಮಿತ್ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ, “ಭಾರತದ ಸಾರ್ವಭೌಮತ್ವಕ್ಕೆ ಅಡ್ಡಿಪಡಿಸಲು ಮತ್ತು ದೇಶದ ವಿರುದ್ಧ ಅಸಮಾಧಾನ ಸೃಷ್ಠಿಸಲು ವ್ಯಕ್ತಪಡಿಸಲು ನ್ಯೂಸ್‌ಕ್ಲಿಕ್‌ಗೆ ಚೀನಾದಿಂದ ಹೆಚ್ಚಿನ ಹಣ ಬಂದಿದೆ” ಎಂದು ಆರೋಪಿಸಲಾಗಿದೆ.

Advertisements

“2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಗೆ ಅಡ್ಡಿಯುಂಟು ಮಾಡಲು ಪ್ರಬೀರ್ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (ಪಿಎಡಿಎಸ್‌) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ” ಎಂದೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಭೂಹಗರಣ ಪ್ರಕರಣ | ಫೆ.22ರವರೆಗೆ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ನ್ಯಾಯಾಂಗ ಬಂಧನ

ಪ್ರಬೀರ್ ಅವರು ತಮ್ಮ ಅರ್ಜಿಯಲ್ಲಿ, “ಯುಎಪಿಎ ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿರುವ ಆರೋಪಗಳ ಸಂಬಂಧ ಈಗಲಾಗಲೇ ಒಂದು ಎಫ್‌ಐಆರ್‌ ದಾಖಲಾಗಿದೆ. ಎಕನಾಮಿಕ್ ಅಫೆನ್ಸ್ ವಿಂಗ್ (ಇಒಡಬ್ಲ್ಯು) ಆ ಎಫ್‌ಐಆರ್‌ ಆಧಾರದ ಮೇಲೆ ತನಿಖೆ ನಡೆಸುತ್ತಿದೆ. ಅದೇ ಆರೋಪಗಳ ಮೇಲೆ ಇದು ಎರಡನೇ ಎಫ್‌ಐಆರ್‌” ಎಂದು ಹೇಳಿದ್ದಾರೆ. ಈ ಎಫ್‌ಐಅರ್‌ ಅಸಮರ್ಪಕವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಎಫ್‌ಐಆರ್‌ಗಳು ಕಂಪನಿಯು ನಡೆಸಿದ ಸಂಪೂರ್ಣವಾಗಿ ಪತ್ರಿಕೋದ್ಯಮದ ಕೆಲಸದ ಮೇಲೆ ಕೇಂದ್ರೀಕೃತವಾಗಿದೆ. ಪತ್ರಿಕೆಯ ಕಾರ್ಯನಿರ್ವಹಣೆಯು ಅಧಿಕಾರದಲ್ಲಿರುವ ಸರ್ಕಾರದ ಕಾರ್ಯನಿರ್ವಹಣೆಯ ಕುರಿತು ಟೀಕೆಗಳನ್ನು ಒಳಗೊಂಡಿದೆ. ನಿಷ್ಪಕ್ಷಪಾತ ಮತ್ತು ನ್ಯಾಯಯುತ ಪತ್ರಿಕೋದ್ಯಮ ಹಾಗೂ ಸರ್ಕಾರದ ಕುರಿತು ಟೀಕೆಗಳನ್ನು ದೇಶದ ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧದ ಪ್ರಶ್ನೆಯೆಂದು ಸಮೀಕರಿಸಲು ಬರುವುದಿಲ್ಲ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X