ಶಿವನ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಗೆ ಕೋಮು ಬಣ್ಣ; ಆದರೆ, ನಿಜವಾದ ಅಪರಾಧಿ ಬೆಕ್ಕು

Date:

Advertisements

ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿದ್ದ ಶಿವ ದೇವಾಲಯದಲ್ಲಿ ಬುಧವಾರ ಮಾಂಸದ ತುಂಡು ಪತ್ತೆಯಾಗಿತ್ತು. ಬಳಿಕ, ಪ್ರಕರಣಕ್ಕೆ ಕೋಮು ಬಣ್ಣ ಬಳಿದು, ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ದೇವಾಲಯದಲ್ಲಿ ಮಾಂಸದ ತುಂಡು ಹಾಕಿದ್ದು ಮನುಷ್ಯರೇ ಅಲ್ಲ. ಅಲ್ಲಿಗೆ ಮಾಂಸದ ತುಂಡು ತಂದಿದ್ದು ಬೆಕ್ಕು ಎಂದು ತನಿಖೆಯಲ್ಲಿ ಗೊತ್ತಾಗಿದೆ.

ದೇವಾಲಯದಲ್ಲಿ ಉದ್ದೇಶಪೂರ್ವಕವಾಗಿ ಮಾಂಸದ ತುಂಡು ಹಾಕಲಾಗಿದೆ ಎಂದು ಆರೋಪಿಲಾಗಿತ್ತು. ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಆರೋಪ ಮಾಡಿ, ಕೋಮುವಾದಿ ಬಣ್ಣ ಮಳಿದು, ಉದ್ವಿಗ್ನ ಪರಿಸ್ಥಿತಿ ಸೃಷ್ಟಿಮಾಡಲಾಗಿತ್ತು. ಹಿಂದುತ್ವವಾದಿಗಳು ಪ್ರತಿಭಟನೆಗಳನ್ನೂ ನಡೆಸಿದ್ದರು.

ಪ್ರಕರಣ ಸಂಬಂಧ ತಪ್ಪಚಬುತ್ರ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದರಿಂದ, ತ್ವರಿತವಾಗಿ ಪೊಲೀಸರು ತನಿಖೆ ನಡೆಸಿದ್ದಾರೆ. ತಪ್ಪಚಬುತ್ರ ಪೊಲೀಸ್ ಠಾಣಾಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಸುಮಾರು 250 ಗ್ರಾಂ ತೂಕದ ಮಾಂಸದ ತುಂಡನ್ನು ವಶಕ್ಕೆ ಪಡೆದಿದ್ದಾರೆ.

Advertisements

ಪ್ರಕರಣದ ತನಿಖೆಗಾಗಿ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು. ಪೊಲೀಸರ ತಾಂತ್ರಿಕ ಘಟಕವು ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದೆ. ಈ ವೇಳೆ, ಬೆಕ್ಕು ಮಾಂಸದ ತುಂಡನ್ನು ತನ್ನ ಬಾಯಿಯಲ್ಲಿ ಕಚ್ಚಿಕೊಂಡು ದೇವಾಲಯದ ಆವರಣ ಪ್ರವೇಶಿಸಿರುವುದು ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

ದೃಶ್ಯಾವಳಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿದ ಪೊಲೀಸರು, “ಶಿವನ ದೇವಾಲಯದಲ್ಲಿ ಮಾಂಸದ ತುಂಡನ್ನು ಬೆಕ್ಕು ಬಿಟ್ಟುಹೋಗಿದೆ. ದೇವಾಲಯದ ಬಳಿಯಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಬೆಕ್ಕು ಬಾಯಿಯಲ್ಲಿ ಮಾಂಸವನ್ನು ಕಚ್ಚಿಕೊಂಡು ಬರುವುದು ಸ್ಪಷ್ಟವಾಗಿ ದಾಖಲಾಗಿದೆ. ಹೀಗಾಗಿ, ಯಾವುದೇ ವದಂತಿಗಳು ಅಥವಾ ತಪ್ಪು ಮಾಹಿತಿಗಳನ್ನು ಹರಡಬಾರದು” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X