ವಿಮಾನ ದುರಂತ | ಭವಿಷ್ಯದಲ್ಲಿ ಸಂಭವಿಸುವ ಅನಾಹುತ ತಡೆಗೆ ಉನ್ನತ ಮಟ್ಟದ ಸಮಿತಿ ರಚನೆ

Date:

ಅಹಮದಾಬಾದ್​ ಏರ್​ ಇಂಡಿಯಾ ವಿಮಾನ ಅಪಘಾತಕ್ಕೆ ಕಾರಣ ಪರಿಶೀಲನೆಗಾಗಿ ಮತ್ತು ಭವಿಷ್ಯದಲ್ಲಿ ಇಂತಹ ಅನಾಹುತವನ್ನು ತಡೆಗೆ ಮಾರ್ಗಸೂಚಿ ರೂಪಿಸಲು ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಬಹು ಶಿಸ್ತಿನ ಸಮಿತಿ ರಚಿಸಲಾಗಿದೆ.

- Advertisement -

ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ಈ ಕುರಿತು ಮಾಹಿತಿ ನೀಡಿದ್ದು, “ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಗಟ್ಟಲು ಮತ್ತು ಅವು ಸಂಭವಿಸಿದ ಸಂದರ್ಭಗಳಲ್ಲಿ ಅವುಗಳನ್ನು ನಿರ್ವಹಿಸುವ ವಿಧಾನಕ್ಕಾಗಿ ತಂಡವು ಕೆಲವು ಶಿಷ್ಟಾಚಾರಗಳನ್ನು ರೂಪಿಸುತ್ತದೆ. ಈ ಕಾರ್ಯವನ್ನು ಪೂರ್ಣಗೊಳಿಸಲು ಸಚಿವಾಲಯ ಮೂರು ತಿಂಗಳ ಗಡುವು ನೀಡಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇಶದ ಬೃಹತ್ ಉದ್ಯಮ ಸಂಸ್ಥೆ ಟಾಟಾ ಸನ್ಸ್ ಬೋರ್ಡ್...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಜಂಟಿ ಕಾರ್ಯದರ್ಶಿ ಮಟ್ಟದ ಪ್ರತಿನಿಧಿಗಳನ್ನು ಸಮಿತಿಯು ಒಳಗೊಂಡಿರುತ್ತದೆ. ಸಂಬಂಧಿತ ಸಂಸ್ಥೆಗಳು ನಡೆಸುವ ಇತರ ವಿಚಾರಣೆಗಳಿಗೆ ಈ ಸಮಿತಿಯು ಪರ್ಯಾಯವಾಗಿರುವುದಿಲ್ಲ. ಆದರೆ, ಭವಿಷ್ಯದಲ್ಲಿ ಅಂತಹ ಘಟನೆಗಳನ್ನು ತಡೆಗಟ್ಟಲು ಮತ್ತು ನಿರ್ವಹಿಸಲು ಶಿಷ್ಠಾಚಾರಗಳನ್ನು ರೂಪಿಸುವತ್ತ ಗಮನಹರಿಸುತ್ತದೆ ಎಂದು ಸಚಿವಾಲಯ ಹೇಳಿದೆ.

ಅವಘಡದ ಬಗ್ಗೆ ಈಗಾಗಲೇ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ನಡೆಸುತ್ತಿದೆ. ಉನ್ನತ ಮಟ್ಟದ ಬಹು ಶಿಸ್ತಿನ ಸಮಿತಿಯು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ಅಧ್ಯಕ್ಷತೆಯಲ್ಲಿ ಕಾರ್ಯ ನಿರ್ವಹಿಸಲಿದೆ. ನಾಗರಿಕ ವಿಮಾನಯಾನ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಸದಸ್ಯರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪೋಕ್ಸೊ’ ಶಿಕ್ಷೆಯಿಂದ ನುಣುಚಿಕೊಳ್ಳುವ ದಾಳವಾಗದಿರಲಿ ‘ಮದುವೆ’

ಗುಜರಾತ್ ಗೃಹ ಇಲಾಖೆ, ಗುಜರಾತ್ ವಿಪತ್ತು ಪ್ರತಿಕ್ರಿಯೆ ಪ್ರಾಧಿಕಾರ, ಅಹಮದಾಬಾದ್ ಪೊಲೀಸ್ ಆಯುಕ್ತರು, ಭಾರತೀಯ ವಾಯುಪಡೆಯ ತಪಾಸಣೆ ಮತ್ತು ಸುರಕ್ಷತೆಯ ಮಹಾನಿರ್ದೇಶಕರು, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಹಾನಿರ್ದೇಶಕರು ಸಮಿತಿಯ ಭಾಗವಾಗಿದ್ದಾರೆ. ಅಲ್ಲದೆ, ಗುಪ್ತಚರ ಬ್ಯೂರೋದ ವಿಶೇಷ ನಿರ್ದೇಶಕರು ಮತ್ತು ವಿಧಿವಿಜ್ಞಾನ ವಿಜ್ಞಾನ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರು ಸಮಿತಿಯಲ್ಲಿ ಇರಲಿದ್ದಾರೆ.

ಜೂನ್​ 12ರಂದು ಅಹಮದಾಬಾದ್​ನಿಂದ ಲಂಡನ್​ಗೆ ತೆರಳುತ್ತಿದ್ದ ಬೋಯಿಂಗ್ 787-8 ವಿಮಾನವು ಟೇಕ್​ಆಫ್​ ಆದ ಕೆಲವೇ ಕ್ಷಣದಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ 241 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್​ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಒಟ್ಟಾರೆ 265ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಲಡ್ಡು ಕಲಬೆರಕೆ ಹಗರಣ: ಪಾಮ್ ಆಯಿಲ್ ಪೂರೈಸುತ್ತಿದ್ದ ಉದ್ಯಮಿ ಇ.ಡಿ ವಶಕ್ಕೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಭಾರಿ ಪ್ರಮಾಣದ ಕಲಬೆರಕೆ...

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...