ಮಾಸ್ಕೋಗೆ ತೆರಳುವ ಪ್ರಧಾನಿಗೆ ಮಣಿಪುರ ಭೇಟಿಗೆ ಸಮಯವಿಲ್ಲ: ಕಾಂಗ್ರೆಸ್ ವಾಗ್ದಾಳಿ

Date:

ಕಳೆದ ವರ್ಷದ ಮೇ ತಿಂಗಳಿನಲ್ಲಿ ಜನಾಂಗೀಯ ಸಂಘರ್ಷ ಉಂಟಾದ ನಂತರದಿಂದ ಮಣಿಪುರಕ್ಕೆ ರಾಹುಲ್‌ ಗಾಂಧಿ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಪ್ರಧಾನಿ ಮಣಿಪುರಕ್ಕೆ ತೆರಳಲು ಕೆಲವು ಗಂಟೆಗಳ ಕಾಲ ಸಮಯವೂ ಮಾಡಿಕೊಳ್ಳುತ್ತಿಲ್ಲ, ಅಲ್ಲಿಗೆ ಹೋಗುವ ಆಸಕ್ತಿಯನ್ನು ಹೊಂದಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, ಇಂದು ಲೋಕಸಭೆಯ ವಿಪಕ್ಷ ನಾಯಕರು ಅಸ್ಸಾಂ ಹಾಗೂ ಮಣಿಪುರಕ್ಕೆ ತೆರಳಿದರೆ, ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಮಾಸ್ಕೋಗೆ ತೆರಳುತ್ತಾರೆ. ಜೈವಿಕವಲ್ಲದ ಪ್ರಧಾನಿಯ ಹೊಗಳುಭಟ್ಟರು ಕೆಲವು ಕಾಲ ರಷ್ಯಾ- ಉಕ್ರೇನ್‌ ಯುದ್ಧವನ್ನು ನಿಲ್ಲಿಸಿದರೆಂದು ಸಮರ್ಥಿಸಿಕೊಳ್ಳುತ್ತಾರೆ. ಬಹುಶಃ ಈ ಮಾಸ್ಕೋ ಪ್ರವಾಸ ಇನ್ನಷ್ಟು ವಿಲಕ್ಷಣವಾದ ಘಟನೆಗಳಿಗೆ ಕಾರಣವಾಗಬಹುದು ಎಂದು ಪ್ರಧಾನಿಯನ್ನು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮಣಿಪುರ ಹೊತ್ತಿ ಉರಿದ 14 ತಿಂಗಳುಗಳಲ್ಲಿ ರಾಹುಲ್‌ ಗಾಂಧಿ ಮೂರು ಬಾರಿ ಭೇಟಿ ನೀಡಿದ್ದಾರೆ.ತಾವು ಜೈವಿಕವಾಗಿ ಜನಿಸಿಲ್ಲ ಎಂದು ಹೇಳಿಕೊಳ್ಳುವ ಪ್ರಧಾನಿ ಗಲಭೆ ಶುರುವಾದ 2023, ಮೇ 3 ರಿಂದ ಮಣಿಪುರಕ್ಕೆ ತೆರಳಲು ಕೆಲವು ಗಂಟೆಗಳ ಕಾಲ ಸಮಯವೂ ಮಾಡಿಕೊಳ್ಳುತ್ತಿಲ್ಲ, ಅಲ್ಲಿಗೆ ಹೋಗುವ ಆಸಕ್ತಿಯನ್ನು ಹೊಂದಿಲ್ಲ. ಅಲ್ಲಿ ಇರುವ ತಮ್ಮ ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಅವರು ಭೇಟಿ ಮಾಡಿಲ್ಲ. ಹಾಗೆಯೇ ಇತರ ಪಕ್ಷದ ಶಾಸಕರು, ಸಂಸದರನ್ನು ಕೂಡ ಭೇಟಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಪ್ರವಾಹ ಪರಿಸ್ಥಿತಿ ಉಂಟಾಗಿರುವ ಅಸ್ಸಾಂ ಹಾಗೂ ಮಣಿಪುರ ರಾಜ್ಯಗಳಿಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇಂದು ಭೇಟಿ ನೀಡಿದ್ದಾರೆ. ಅಸ್ಸಾಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಣಿಪುರದ ನಿರಾಶ್ರಿತ ಪ್ರದೇಶಗಳ ಜನರನ್ನು ಭೇಟಿ ನೀಡಿಲಿದ್ದಾರೆ. ಸಂಜೆ ಮಣಿಪುರದ ರಾಜ್ಯಪಾಲರಾದ ಅನುಸೂಯ ಊಯ್ಕೆ ಅವರನ್ನು ಭೇಟಿ ಮಾಡಲಿದ್ದಾರೆ. ರಾಹುಲ್‌ ಅವರು ಉತ್ತರ ಪ್ರದೇಶ ರಾಯ್‌ಬರೇಲಿಯಿಂದ ಸಂಸದರಾಗಿ ಆಯ್ಕೆಯಾದ ನಂತರ ಮಣಿಪುರ ಮೊದಲ ಭೇಟಿ ಇದಾಗಿದೆ.

ಅಸ್ಸಾಂನಲ್ಲಿ ಪ್ರವಾಹ ಉಂಟಾಗಿ 28 ಜಿಲ್ಲೆಯ 22 ಲಕ್ಷಕ್ಕೂ ಹೆಚ್ಚು ಮಂದಿ ತೊಂದರೆಗೀಡಾಗಿದ್ದಾರೆ. ಈ ವರ್ಷದ ನೆರೆ ಪ್ರವಾಹದಿಂದ 78 ಮಂದಿ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...