ಬೈಡನ್‌ ಮೇಲೆ ತೋರಿಸಿದ ಪ್ರೀತಿ ಮಣಿಪುರ ಮಹಿಳೆಯರ ಮೇಲೆಯೂ ಪ್ರಧಾನಿ ತೋರಿಸಲಿ: ಕೇರಳ ಬಿಷಪ್‌

Date:

ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೆ ತೋರಿಸಿದ ಪ್ರೀತಿಯ ಕುರಿತು ವ್ಯಂಗ್ಯವಾಡಿರುವ ಕೇರಳ ತಲಶ್ಶೇರಿ ಧರ್ಮಪ್ರಾಂತ್ಯದ ಆರ್ಚ್‌ಬಿಷಪ್‌ ಮಾರ್‌ ಜೋಸೆಫ್‌ ಪಂಪ್ಲನಿ, “ದೌರ್ಜನ್ಯಕ್ಕೊಳಗಾಗಿರುವ ಮಣಿಪುರದ ಸಹೋದರಿಯರ ಮೇಲೂ ಬೈಡನ್‌ ಅವರಿಗೆ ತೋರಿಸದಷ್ಟೇ ಪ್ರೀತಿಯನ್ನು ತೋರಿಸಿ” ಎಂದು ಹೇಳಿದ್ದಾರೆ.

- Advertisement -

“ಪ್ರಧಾನಿ ಮೋದಿ ತಾವು ಯಾವುದೇ ಒಂದು ಸಮುದಾಯದ ಪ್ರಧಾನಿ ಅಲ್ಲ ಎಂಬುದು ನೆನಪಿನಲ್ಲಿಟ್ಟುಕೊಳ್ಳಬೇಕು,” ಎಂದು ಕಾಸರಗೋಡು ಸಂಸದ ರಾಜಮೋಹನ್‌ ಉನ್ನಿತ್ತನ್‌ ಅವರು ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ 24 ಗಂಟೆಗಳ ಉಪವಾಸ ಸತ್ಯಾಗ್ರಹದಲ್ಲಿ ಆರ್ಚ್‌ ಬಿಷಪ್‌ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಮಣಿಪುರದ ಹಿಂಸಾಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಶ್ಲಾಘಿಸಿದ ಬಿಷಪ್‌, ‘ರಾಹುಲ್‌ ಗಾಂಧಿ ಅವರ ಪ್ರಯತ್ನಗಳು ಅವರು ಅಲ್ಪಸಂಖ್ಯಾತರೊಂದಿಗಿದ್ದಾರೆ ಎಂಬುದನ್ನು ಸೂಚಿಸುತ್ತದೆ. ದೇಶದ ಹೆಸರನ್ನು ಭಾರತ ಎಂದು ಬದಲಾಯಿಸಿದರಷ್ಟೇ ಸಾಲದು. ಎಲ್ಲರ ಮೇಲೂ ಪ್ರೀತಿಯಿರಬೇಕು” ಎಂದೂ ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಏಷ್ಯಾ ಕಪ್ | ಭಾರತ್–ಪಾಕ್‌ ಪಂದ್ಯದ ಮೀಸಲು ದಿನದಲ್ಲೂ ಮಳೆ ಕಾಟ; ಫೈನಲ್‌ ಪಂದ್ಯ ಸ್ಥಳಾಂತರ!

ಸಮಾನ ನಾಗರಿಕ ಸಂಹಿತೆ ಪ್ರಸ್ತಾಪ ಸಹಿತ ಕೇಂದ್ರದ ನಿಲುವನ್ನು ಖಂಡಿಸಿ ಕಾಸರಗೋಡು ಸಂಸದ ಉನ್ನಿತ್ತನ್‌ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌, ‘ಜಿ20 ಶೃಂಗಸಭೆಯನ್ನು ಮೋದಿ ತಮ್ಮ ಜನಪ್ರಿಯತೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರವು ತಮ್ಮ ಅಧಿಕೃತ ಕಾರ್ಯಕ್ರಮಗಳಲ್ಲಿ ‘ಭಾರತ್’ ಅನ್ನು ಬಳಸಲು ಪ್ರಾರಂಭಿಸಿತು. ಏಕೆಂದರೆ ಅದು ವಿರೋಧ ಪಕ್ಷದ ಇಂಡಿಯಾ ಒಕ್ಕೂಟಕ್ಕೆ ಹೆದರುತ್ತದೆ” ಎಂದು ಅವರು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...