ಜನ್ ಸುರಾಜ್ ಪಕ್ಷ ಪ್ರಾರಂಭಿಸಿದ ಪ್ರಶಾಂತ್ ಕಿಶೋರ್: ಬಿಹಾರ ಚುನಾವಣೆ ಮೇಲೆ ಚಿತ್ತ

Date:

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೊನೆಗೂ ರಾಜಕೀಯ ಪಕ್ಷವನ್ನು ಆರಂಭಿಸಿದ್ದಾರೆ. ಬುಧವಾರ ತಮ್ಮ ರಾಜಕೀಯ ಸಂಘಟನೆಯಾದ ಜನ್ ಸುರಾಜ್ ಪಕ್ಷವನ್ನು ರಾಜಕೀಯ ಪಕ್ಷವಾಗಿ ಪ್ರಾರಂಭಿಸುವಾಗಿ ಘೋಷಿಸಿದ್ದಾರೆ. ಈ ಮೂಲಕ ಮುಂದಿನ ಬಿಹಾರ ಚುನಾವಣೆಯ ಮೇಲೆ ಚಿತ್ತ ನೆಟ್ಟಿದ್ದಾರೆ.

- Advertisement -

ಮಾಜಿ ಕೇಂದ್ರ ಸಚಿವ ದೇವೇಂದ್ರ ಪ್ರಸಾದ್ ಯಾದವ್, ರಾಜಕಾರಣಿ ಪವನ್ ವರ್ಮಾ ಮತ್ತು ಮಾಜಿ ಸಂಸದ ಮೊನಜೀರ್ ಹಾಸನ್ ಸೇರಿದಂತೆ ಅನೇಕ ಹೆಸರಾಂತ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಬಿಹಾರ ರಾಜಧಾನಿ ಪಾಟ್ನಾದ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ರಾಜಕೀಯ ಪಕ್ಷವನ್ನು ಪ್ರಾರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಚುನಾವಣಾ ಭವಿಷ್ಯವನ್ನು ಹೇಳುವ ಮೂಲಕವೇ ಸುದ್ದಿಯಾಗುತ್ತಿದ್ದ ಪ್ರಶಾಂತ್ ಕಿಶೋರ್ ಇತ್ತೀಚಿಗಷ್ಟೇ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನವೇ ನಮ್ಮ ಪಕ್ಷವನ್ನು ಆರಂಭಿಸುವುದಾಗಿ ಹೇಳಿದ್ದರು.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 4,000ಕ್ಕಿಂತ ಹೆಚ್ಚು ಸ್ಥಾನ: ಟ್ರೋಲ್ ಆದ ಬಿಹಾರ ಸಿಎಂ ನಿತೀಶ್ ಕುಮಾರ್

ಇಂದು ಅಧಿಕೃತವಾಗಿ ಪಕ್ಷ ಆರಂಭಿಸುವ ಘೋಷಣೆ ಮಾಡಿ ಮಾತನಾಡಿದ ಪ್ರಶಾಂತ್ ಕಿಶೋರ್, “ಜನ್ ಸುರಾಜ್ ಅಭಿಯಾನವು ಕಳೆದ 2-3 ವರ್ಷಗಳಿಂದ ನಡೆಯುತ್ತಿದೆ. ನಾವು ಯಾವಾಗ ಪಕ್ಷವನ್ನು ಸ್ಥಾಪಿಸುತ್ತೇವೆ ಎಂದು ಜನರು ಕೇಳುತ್ತಿದ್ದರು. ನಾವು ದೇವರಿಗೆ ಧನ್ಯವಾದ ತಿಳಿಸಬೇಕಾದ ಸಂದರ್ಧ ಈಗ ಬಂದಿದೆ. ಇಂದು ಚುನಾವಣಾ ಆಯೋಗವು ಅಧಿಕೃತವಾಗಿ ಜನ್ ಸುರಾಜ್ ಅನ್ನು ಜನ್ ಸುರಾಜ್ ಪಕ್ಷವಾಗಿ ಅನುಮೋದಿಸಿದೆ” ಎಂದು ಹೇಳಿದ್ದಾರೆ.

ಇನ್ನು ಹೊಸ ಪಕ್ಷ ಸ್ಥಾಪನೆ ಮೂಲಕ ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಮೇಲೆ ಚಿತ್ತ ನೆಟ್ಟಿರುವ ಪ್ರಶಾಂತ್ ಕಿಶೋರ್, ಈಗಾಗಲೇ ಚುನಾವಣಾ ಭರವಸೆಗಳನ್ನು ನೀಡಲು ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಜನ್ ಸುರಾಜ್ ಪಕ್ಷ ಅ.2ರಂದು ಆರಂಭ: ಪ್ರಶಾಂತ್ ಕಿಶೋರ್‌

“ಪ್ರತ್ಯೇಕ ಸಿದ್ಧತೆ ಅಗತ್ಯವಿಲ್ಲ, ಕಳೆದ 2 ವರ್ಷಗಳಿಂದ ನಾವು ಸಿದ್ಧತೆ ನಡೆಸಿದ್ದೇವೆ. ಜನ್ ಸೂರಾಜ್ ಸರ್ಕಾರ ರಚನೆಯಾದರೆ ಮದ್ಯಪಾನ ನಿಷೇಧವನ್ನು ಒಂದು ಗಂಟೆಯೊಳಗೆ ತೆಗೆದುಹಾಕುತ್ತೇವೆ” ಎಂದು ಇತ್ತೀಚೆಗೆ ಹೇಳಿದ್ದಾರೆ.

ಒಂದು ತಿಂಗಳೊಳಗೆ ರಾಜಕೀಯ ಪಕ್ಷವಾಗಲಿರುವ ಜನ್ ಸೂರಾಜ್ ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...

ಸೇವಾ ಅವಧಿಯಲ್ಲಾದ ದೈಹಿಕ ಸಮಸ್ಯೆಯು ‘ಸೇವಾ ಸಂಬಂಧಿ’ ಎಂದೇ ಪರಿಗಣಿತ: ಸುಪ್ರೀಂ ಕೋರ್ಟ್

ಸೇನಾ ಪಡೆಗೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಯಾವುದೇ ದೈಹಿಕ ಅಥವಾ ಮಾನಸಿಕ ಅನಾರೋಗ್ಯ...