‘ಪ್ರೀಮಿಯಂ ನಿಮ್ಮದು, ಲಾಭ ಅದಾನಿಗೆ’; ಎಲ್‌ಐಸಿಯ 5,000 ಕೋಟಿ ರೂ. ಹೂಡಿಕೆಗೆ ರಾಹುಲ್ ಆಕ್ಷೇಪ

Date:

Advertisements

ಅದಾನಿ ಗ್ರೂಪ್‌ನಲ್ಲಿ ಭಾರತೀಯ ವಿಮಾ ಕಂಪನಿ (ಎಲ್‌ಐಸಿ) 5,000 ಕೋಟಿ ರೂ. ಹೂಡಿಕೆ ಮಾಡಿರುವುದನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

“ಸಾರ್ವಜನಿಕರ ಹಣವನ್ನು ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ಕುಟುಕಿದ್ದಾರೆ.

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

Advertisements

ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ) ಕಂಪನಿಯವರು ಕಳೆದ ವಾರ ನೀಡಿದ ಪ್ರಕಟಣೆಯಲ್ಲಿ, “ಎಲ್‌ಐಸಿಯಿಂದ ರೂ. 5,000 ಕೋಟಿ ಸಂಗ್ರಹಿಸಲಾಗಿದೆ” ಎಂದು ತಿಳಿಸಲಾಗಿತ್ತು.

15 ವರ್ಷಗಳ ಅವಧಿಯಲ್ಲಿ ಮರುಪಾವತಿ ಮಾಡುವ ಷರತ್ತಿನ ಮೇಲೆ, ವರ್ಷಕ್ಕೆ 7.75% ಬಡ್ಡಿ ದರದಲ್ಲಿ ಎಲ್‌ಐಸಿಯಿಂದ ಅದಾನಿ ಕಂಪನಿಯು ಹಣ ಪಡೆದುಕೊಂಡಿದೆ.

ಇದನ್ನೂ ಓದಿರಿ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಮಾಹಿತಿ ರವಾನೆ; ಗಗನ್‌ ದೀಪ್‌ ಅರೆಸ್ಟ್

“ನಮ್ಮಂತಹ ಸಾಮಾನ್ಯ ಜನರ ವಿಮಾ ಕಂತುಗಳ ಮೂಲಕ ಸಂಗ್ರಹಿಸಿದ ಎಲ್‌ಐಸಿ ಹಣವನ್ನು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಬಳಸಲಾಗುತ್ತಿದೆ” ಎಂದು ರಾಹುಲ್ ಆರೋಪಿಸಿದ್ದಾರೆ.

“ಹಣ, ಪಾಲಿಸಿ, ಪ್ರೀಮಿಯಂ ನಿಮ್ಮದು; ಭದ್ರತೆ, ಅನುಕೂಲ, ಲಾಭ ಮಾತ್ರ ಅದಾನಿಗೆ” ಎಂದು ಟ್ವೀಟ್ ಮಾಡುವ ಮೂಲಕ, ಎಲ್‌ಐಸಿ ಹೂಡಿಕೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಮ್ಮ ದೇಶದ ದೊಡ್ಡ ವಿಮಾ ಕಂಪನಿ ಎಲ್‌ಐಸಿ (ಭಾರತೀಯ ಜೀವ ವಿಮಾ ನಿಗಮ). ಇದು ಸರ್ಕಾರಿ ಕಂಪನಿಯಾಗಿದ್ದು, ನಮ್ಮಂತಹ ಸಾಮಾನ್ಯ ಜನರು ಕಟ್ಟುವ ವಿಮಾ ಕಂತುಗಳಿಂದ ಸಂಗ್ರಹವಾದ ಹಣವನ್ನು ವಿವಿಧೆಡೆ ಹೂಡಿಕೆ ಮಾಡುತ್ತದೆ. ಆದರೆ ಅದಾನಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂಬ ಗಂಭೀರ ಆರೋಪಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X