ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮತ್ತೆ ಏರಿಕೆ

Date:

Advertisements

ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ.

ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 21 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1775.50 ರೂ.ನಿಂದ 1796.50 ರೂ.ಗೆ ಹೆಚ್ಚಳವಾದಂತಾಗಿದೆ.

ಈ ಹಿಂದೆ ನವೆಂಬರ್ 16 ರಂದು ಅದರ ಬೆಲೆ ಕಡಿತಗೊಂಡು 1775.50 ರೂ. ಆಗಿತ್ತು. ಇಂದಿನಿಂದ ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1904 ರೂ., ಮುಂಬೈನಲ್ಲಿ 1749 ರೂ., ಕೋಲ್ಕತ್ತಾದಲ್ಲಿ 1885.50 ರೂ., ಚೆನ್ನೈನಲ್ಲಿ 1968.50 ರೂ. ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳವು ವಿಶೇಷವಾಗಿ ರೆಸ್ಟೋರೆಂಟ್ ಅಥವಾ ಆಹಾರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ.

Advertisements

14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು.

ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ 929, ಮುಂಬೈನಲ್ಲಿ ರೂ 902.50 ಮತ್ತು ಚೆನ್ನೈನಲ್ಲಿ ರೂ 918.50 ಕ್ಕೆ ಲಭ್ಯವಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X