ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಪ್ರಿಯಾಂಕಾ ಗಾಂಧಿ

Date:

Advertisements

ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದಿನ ಜನಗಣತಿಯಲ್ಲಿ ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ತಮ್ಮ ಕ್ಷೇತ್ರ ವಯನಾಡಿಗೆ ಎರಡು ದಿನಗಳ ಭೇಟಿ ನೀಡಿರುವ ಕಾಂಗ್ರೆಸ್ ನಾಯಕಿ, ಕೇಂದ್ರ ಸರ್ಕಾರದ ಈ ನಿರ್ಧಾರವು ಜನರ ಬೇಡಿಕೆ ಮತ್ತು ಈ ಉದ್ದೇಶವನ್ನು ಬೆಂಬಲಿಸಿದವರ ನಿರಂತರ ಪ್ರಯತ್ನಗಳ ಫಲವಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಶಾಮನೂರು ಹುನ್ನಾರವೇನು? ಕಾಂಗ್ರೆಸ್‌ನಲ್ಲಿ ಕ್ರಮ ಯಾಕಿಲ್ಲ?

Advertisements

“ನನ್ನ ಸಹೋದರ (ರಾಹುಲ್ ಗಾಂಧಿ) ಕಳೆದ ವರ್ಷ ಈ ವಿಷಯವನ್ನು ಕೈಗೆತ್ತಿಕೊಂಡರು. ಬಿಜೆಪಿ ಜಾತಿ ಜನಗಣತಿಯನ್ನು ಬಲವಾಗಿ ವಿರೋಧಿಸಿದರೂ ಸಹ ಅದರ ಪರವಾಗಿ ಮಾತನಾಡುತ್ತಲೇ ಇದ್ದರು” ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸುತ್ತಾ ತಿಳಿಸಿದರು.

“ಜಾತಿ ಜನಗಣತಿ ನಡೆಸಬೇಕು ಎಂದು ಬಲವಾಗಿ ಆಗ್ರಹಿಸಿದಾಗ ಅವರನ್ನು (ರಾಹುಲ್ ಗಾಂಧಿ) ಸಂಸತ್ತಿನಲ್ಲಿ ಅಪಹಾಸ್ಯ ಮಾಡಲಾಯಿತು” ಎಂದು ಹೇಳಿದರು. ದೇಶಾದ್ಯಂತ ಜನರ ಒತ್ತಡದಿಂದಾಗಿ ಬಿಜೆಪಿ ಸರ್ಕಾರ ಕೊನೆಗೂ ತನ್ನ ನಿರ್ಧಾರವನ್ನು ಬದಲಾಯಿಸಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಹಾಗೆಯೇ ಸರ್ಕಾರವು ನಿಖರವಾದ ಡೇಟಾವನ್ನು ಸಂಗ್ರಹಿಸುವ ಮೂಲಕ ಜಾತಿ ಸಮೀಕ್ಷೆಯನ್ನು ಸರಿಯಾಗಿ ನಡೆಸುತ್ತದೆ ಎಂಬ ಭರವಸೆಯಿದೆ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X